Home ಬೆಂಗಳೂರು ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

0

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಬೊಮ್ಮಾಯಿ ಸರ್ಕಾರ ದೀಪಾವಳಿ ಗಿಫ್ಟ್ ನೀಡಿದೆ. ಹೌದು, ಶೇ.3.7ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಲಾಗಿತ್ತು. ಇದೀಗ ಜುಲೈ 1, 2022ರಿಂದಲೇ ಜಾರಿಗೆ ಬರುವಂತೆ ತುಟ್ಟಿಭತ್ಯೆ ಶೇ.3.7ರಷ್ಟು ಹೆಚ್ಚಳಕ್ಕೆ ಸಿಎಂ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ.

ಈ ಕುರಿತಂತೆ ಸಿಎಂ ಟ್ವಿಟ್ಟರ್ ಖಾತೆಯಿಂದ ಟ್ಟಿಟ್ ಮಾಡಿ ಮಾಹಿತಿ ನೀಡಲಾಗಿದ್ದು, ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು (Chief Minister Basavaraj Bommai) ಅವರು ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ದಿ. 1ನೇ ಜುಲೈ 2022 ರಿಂದ ಅನ್ವಯವಾಗುವಂತೆ 3.75% ನಷ್ಟು ಹೆಚ್ಚಿಸಿಲು (DA Hike) ಅನುಮೋದಿಸಿದ್ದಾರೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಲಿದೆ ಎಂದು ತಿಳಿಸಿದೆ.

You cannot copy content of this page

Exit mobile version