Saturday, June 21, 2025

ಸತ್ಯ | ನ್ಯಾಯ |ಧರ್ಮ

“ರಾಮಮಂದಿರ ಯಾವುದೇ ಪಕ್ಷದ ಆಸ್ತಿ ಅಲ್ಲ” – ಉದ್ಧವ್ ಠಾಕ್ರೆ

ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯ ಆಹ್ವಾನದ ವಿಚಾರವಾಗಿ ಶಿವಸೇನೆ ಪಕ್ಷದ ನಾಯಕ ಉದ್ದವ್ ಠಾಕ್ರೆ ಬಿಜೆಪಿ ಸರ್ಕಾರದ ವಿರುದ್ಧ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ರಾಮಮಂದಿರ ಯಾವುದೇ ಪಕ್ಷದ ಕಾರ್ಯಕ್ರಮ ಅಲ್ಲ, ಅಲ್ಲಿಗೆ ಹೋಗಲು ಆಹ್ವಾನದ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಪಕ್ಷದ ನಾಯಕರು ರಾಮಮಂದಿರ ಉದ್ಘಾಟನೆಯನ್ನು ರಾಜಕೀಯದ ಸರಕಾಗಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅದರಲ್ಲೂ ಮಾಧ್ಯಮಗಳ ಕಡೆಯಿಂದ ಬಿಜೆಪಿ ನಾಯಕರೇ ಹೆಚ್ಚು ಪ್ರಚಾರಕ್ಕೆ ಬರುವಂತೆ ಸುದ್ದಿ ಬಿತ್ತರಿಸಲಾಗುತ್ತಿದೆ. ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ರಾಮಮಂದಿರ ಉದ್ಘಾಟನೆ ಹೆಸರಿನಲ್ಲಿ ವಯಕ್ತಿಕ ವರ್ಚಸ್ಸು ಹೆಚ್ಚಿಸಿಕೊಳ್ಳಲು ಮಾಧ್ಯಮಗಳನ್ನು ಬಳಸಿಕೊಂಡಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ.

ಇದರ ನಡುವೆ ಮಂದಿರ ಉದ್ಘಾಟನೆ ನೆಪದಲ್ಲಿ ಬಿಜೆಪಿ ಮಂದಿಗೆ ಮಾತ್ರ ಉದ್ಘಾಟನೆಗೆ ಆಹ್ವಾನ ನೀಡಲಾಗಿದೆ ಎಂಬ ನಡುವೆ ಇಂದು ಮಹಾರಾಷ್ಟ್ರದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಉದ್ದವ್ ಠಾಕ್ರೆ.. ರಾಮಮಂದಿರ ಯಾವ ಪಕ್ಷದ ಸರಕಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಉದ್ದವ್ ಠಾಕ್ರೆ ‘”ಮೊದಲನೆಯದಾಗಿ, ನನಗೆ ಯಾವುದೇ ಆಹ್ವಾನ ಬಂದಿಲ್ಲ, ಎರಡನೆಯದಾಗಿ, ಅಲ್ಲಿಗೆ ಹೋಗಲು ನನಗೆ ಆಹ್ವಾನದ ಅಗತ್ಯವಿಲ್ಲ. ರಾಮ್ ಲಲ್ಲಾ ಯಾವುದೇ ಪಕ್ಷದ ಆಸ್ತಿ ಅಲ್ಲ. ರಾಮ್ ಲಲ್ಲಾ ಎಲ್ಲರಿಗೂ ಸೇರಿದವರು. ಈ ಕಾರ್ಯಕ್ರಮವನ್ನು ರಾಜಕೀಯಗೊಳಿಸಬಾರದು ಎಂದು ನಾನು ಬಯಸುತ್ತೇನೆ … ಈ ನಿರ್ಧಾರವನ್ನು ಸುಪ್ರೀಂ ಕೋರ್ಟ್ ನೀಡಿದೆ, ಸರ್ಕಾರವಲ್ಲ … ” ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ‌.

Related Articles

ಇತ್ತೀಚಿನ ಸುದ್ದಿಗಳು

You cannot copy content of this page