Sunday, January 11, 2026

ಸತ್ಯ | ನ್ಯಾಯ |ಧರ್ಮ

ರಾಷ್ಟ್ರೀಯ ಹೆದ್ದಾರಿ: ಶೀಘ್ರ ಕ್ರಮ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶ್ರೀ ಮಲೆಮಹಾದೇಶ್ವರ ಕುಂಭಮೇಳದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡಿದ್ದು,ರಾಜ್ಯದ ಸಮಸ್ಯೆಗಳ ಕುರಿತು ಮಾತನಾಡಿ, ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ  

ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ʼರಾಷ್ಟ್ರೀಯ ಹೆದ್ದಾರಿ ಗಳ ಬಗ್ಗೆ ಇದೇ ವಾರದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ಬೆಂಗಳೂರು- ಮೈಸೂರಿನ ಹೆದ್ದಾರಿಯಲ್ಲಿ ಪದೇ ಪದೇ ನೀರು ನಿಂತು ತೊಂದರೆಯಾಗುತ್ತಿದೆ. ಇದರಲ್ಲಿ  ವಿನ್ಯಾಸದ ಸಮಸ್ಯೆ ಯೋ ಅಥವಾ ನಿರ್ವಹಣೆಯ ಸಮಸ್ಯೆಯೂ ಎಂದು ಪರಿಶೀಲಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಯಾವುದೇ ನೀರು ಬರದಂತೆ ವಿಶೇಷ ವ್ಯವಸ್ಥೆ ಮಾಡುತ್ತೇವೆ. ನಂತರ ಬ್ಲಾಕ್ ಸ್ಟಾಟ್ ಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page