ಬೆಂಗಳೂರು: ರಾಷ್ಟ್ರಧ್ವಜ ಮಾರಾಟದ ವಸ್ತುವಲ್ಲ, ಅದು ದೇಶಾಭಿಮಾನದ ಸಂಕೇತ, ಆದರೆ ಇಂದು ಬಿಜೆಪಿ ನಾಯಕರು ರಾಷ್ಟ್ರಧ್ವಜವನ್ನು ಮಾರಾಟಕ್ಕೆ ಇಟ್ಟಿದ್ದಾರೆ ಅವರಿಗೆ ನಾಚಿಕೆಯಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಟೀಕಿಸಿದ್ದಾರೆ.
ಕ್ವಿಟ್ ಇಂಡಿಯಾ ಚಳುವಳಿ ದಿನದ ಸ್ಮರಣೆಗಾಗಿ ನಗರದ ಕೆಪಿಸಿಸಿ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು 1.5 ಲಕ್ಷದಷ್ಟು ರಾಷ್ಟ್ರಧ್ವಜ, ಟೋಪಿ, ಟೀ-ಶರ್ಟ್ಗಳನ್ನು ಉಚಿತವಾಗಿ ನೀಡಿದ್ದೇವೆ, ಆದರೆ ರಾಜ್ಯ ಸರ್ಕಾರ ರಾಷ್ಟ್ರಧ್ವಜವನ್ನು ಮಾರಾಟಕ್ಕೆ ಇಟ್ಟಿದೆ ಎಂದು ನುಡಿದರು.