Home ಬೆಂಗಳೂರು RCB | ಬೆಂಗಳೂರಿನಲ್ಲಿ ಆರ್‌ಸಿಬಿ ಆಟಗಾರರಿಂದ ವಿಕ್ಟರಿ ಮಾರ್ಚ್‌ : ಮಾಹಿತಿ ಇಲ್ಲಿದೆ

RCB | ಬೆಂಗಳೂರಿನಲ್ಲಿ ಆರ್‌ಸಿಬಿ ಆಟಗಾರರಿಂದ ವಿಕ್ಟರಿ ಮಾರ್ಚ್‌ : ಮಾಹಿತಿ ಇಲ್ಲಿದೆ

ಬೆಂಗಳೂರು: ಐಪಿಎಲ್‌ನಲ್ಲಿ ಜಯಗಳಿಸಿ ಕಪ್‌ ಗೆದ್ದಿರುವ ಆರ್‌ಸಿಬಿಗೆ ಅದ್ದೂರಿ ಸ್ವಾಗತ ಕೋರಲು ತವರು ನೆಲ ಬೆಂಗಳೂರು ಸಜ್ಜಾಗಿದೆ.  ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ಆರ್‌ಸಿಬಿ ತಂಡದ ವಿಜಯದ ಮೆರವಣಿಗೆ ಜೂನ್ 4 (ಇಂದು) ಮಧ್ಯಾಹ್ನ 3.30ಕ್ಕೆ ನಡೆಯಲಿದೆ.

ಈ ಕುರಿತಾದ ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲೇ ಹಂಚಿಕೊಳ್ಳಲಾಗುವುದು ಎಂದು ಆರ್‌ಸಿಬಿ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದೆ.ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂಜಾಬ್‌ ಕಿಂಗ್ಸ್‌ ವಿರುದ್ಧ ಮಂಗಳವಾರ ರಾತ್ರಿ ನಡೆದ ಫೈನಲ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ, ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 190 ರನ್ ಗಳಿಸಿತ್ತು. ಈ ಗುರಿ ಬೆನ್ನತ್ತಿದ ಕಿಂಗ್ಸ್‌, 7 ವಿಕೆಟ್‌ಗೆ 184 ರನ್‌ ಗಳಿಸಿ ಅಲ್ಪ ಅಂತರದ ಸೋಲೊಪ್ಪಿಕೊಂಡಿತು.ಈ ಮೂಲಕ ಐಪಿಎಲ್‌ ಟೂರ್ನಿ 2008ರಲ್ಲಿ ಆರಂಭವಾದಾಗಿನಿಂದಲೂ ಆರ್‌ಸಿಬಿ ‘ಕಪ್‌’ಗಾಗಿ ಕಾದಿದ್ದ ಕೋಟ್ಯಂತರ ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿದೆ.

You cannot copy content of this page

Exit mobile version