Thursday, June 19, 2025

ಸತ್ಯ | ನ್ಯಾಯ |ಧರ್ಮ

ಮಹಾರಾಷ್ಟ್ರ ಚುನಾವಣೆಯಲ್ಲಿ ಇವಿಎಂ ದುರ್ಬಳಕೆ ಆರೋಪ ; ಪ್ರಮಾಣ ವಚನ ಸ್ವೀಕಾರಕ್ಕೆ ವಿಪಕ್ಷ ನಾಯಕರ ಹಿಂದೇಟು

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಎಲೆಕ್ಟ್ರಾನಿಕ್ ಓಟಿಂಗ್ ಮಷಿನ್ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ಮಹಾ ವಿಕಾಸ ಅಘಾಡಿ (MVA) ಸದಸ್ಯರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಲು ಶನಿವಾರ ನಿರಾಕರಿಸಿದ್ದಾರೆ. ಮಹಾರಾಷ್ಟ್ರದ ಅಸೆಂಬ್ಲಿಯಲ್ಲಿ ಇಂದು ನಡೆದ ಪ್ರಮಾಣ ವಚನ ಸ್ವೀಕಾರದ ಸಂದರ್ಭದಲ್ಲಿ ಈ ಬೆಳವಣಿಗೆ ನಡೆದಿದೆ.

ಮೂರು ದಿನಗಳ ವಿಶೇಷ ಅಧಿವೇಶನ ಶನಿವಾರದಿಂದ ಆರಂಭಗೊಂಡಿದೆ. ಸದನವು ಬೆಳಿಗ್ಗೆ 11ಕ್ಕೆ ಆರಂಭಗೊಂಡಿತು. ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹಾಗೂ ಉಪಮುಖ್ಯಮಂತ್ರಿಗಳಾದ ಏಕನಾಥ ಶಿಂದೆ ಹಾಗೂ ಅಜಿತ್ ಪವಾರ್ ಸೇರಿದಂತೆ ಆಡಳಿತಾರೂಢ ಪಕ್ಷದ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು.

ಈ ನಡುವೆ MVA ಒಕ್ಕೂಟದ ಸದಸ್ಯ ಪಕ್ಷಗಳಾದ ಕಾಂಗ್ರೆಸ್, ಶಿವಸೇನಾ (ಯುಬಿಟಿ) ಹಾಗೂ ಎನ್‌ಸಿಪಿ (ಎಸ್‌ಪಿ) ಪಕ್ಷಗಳ ಚುನಾಯಿತ ಸದಸ್ಯರು ಪ್ರಮಾಣವಚನ ಸ್ವೀಕರಿಸಲಿಲ್ಲ.

ವಿಧಾನಭವನದ ಮುಂಭಾಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಸೇನಾ (ಯುಬಿಟಿ) ಮುಖಂಡ ಆದಿತ್ಯ ಠಾಕ್ರೆ, ‘ಬಹುಮತ ಪಡೆದು ಅಧಿಕಾರಕ್ಕೇರಿದ ಪಕ್ಷದಲ್ಲಿ ಸಂಭ್ರಮ ಮನೆ ಮಾಡಿದೆ. ಇವರಿಗೆ ಸಿಕ್ಕ ಆ ಅಭೂತಪೂರ್ವ ಗೆಲುವು ಜನರು ನೀಡಿದ್ದೋ ಅಥವಾ ಇವಿಎಂ ಮತ್ತು ಚುನಾವಣಾ ಆಯೋಗ ನೀಡಿದ್ದೋ ಎಂಬ ಪ್ರಶ್ನೆ ಉದ್ಭವಿಸಿದೆ ಎಂದರು.

‘ಈ ಗೆಲುವಿನ ಕುರಿತು ಜನರ ಮನಸ್ಸಿನಲ್ಲಿ ಅನುಮಾನಗಳಿವೆ. ಹೀಗಾಗಿ ಹಲವು ಕಡೆಗಳಲ್ಲಿ ಜನರೇ ಮರು ಮತದಾನ ನಡೆಸಲು ಒತ್ತಾಯಿಸಿದ್ದಾರೆ. ಆದರೆ ಮತಯಂತ್ರ ತ್ಯಜಿಸಿ ಮತ ಚಲಾಯಿಸಿ ಎಂದು ಹೇಳಿದ್ದಾರೆ. ಹೀಗಾಗಿ ನಾವು ಇಂದು ಪ್ರಮಾಣವಚನ ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page