Home ದೇಶ ಉತ್ತರ ಪ್ರದೇಶ | ಗೋರಖ್‌ಪುರದಲ್ಲಿ ಭೀಕರ ರಸ್ತೆ ಅಪಘಾತ.. ನಿಂತಿದ್ದ ಬಸ್‌ಗೆ ಟ್ರಕ್ ಡಿಕ್ಕಿ.. ಆರು...

ಉತ್ತರ ಪ್ರದೇಶ | ಗೋರಖ್‌ಪುರದಲ್ಲಿ ಭೀಕರ ರಸ್ತೆ ಅಪಘಾತ.. ನಿಂತಿದ್ದ ಬಸ್‌ಗೆ ಟ್ರಕ್ ಡಿಕ್ಕಿ.. ಆರು ಮಂದಿ ಸಾವು

0

ಗೋರಖ್‌ಪುರ-ಕುಶಿನಗರ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಜಗದೀಶ್‌ಪುರ ಬಳಿ ರಸ್ತೆ ಅಪಘಾತ ಸಂಭವಿಸಿದೆ.

ವೇಗವಾಗಿ ಬಂದ ಲಾರಿ ರಸ್ತೆ ಬದಿ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ಅವಘಡದಲ್ಲಿ ಆರು ಬಸ್‌ ಪ್ರಯಾಣಿಕರು ಸಾವನ್ನಪ್ಪಿದ್ದು, 26 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ. ಅವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ನಗರ ಎಸ್ಪಿ ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು.

ಪ್ರಯಾಣಿಕರನ್ನು ಹೊತ್ತಿದ್ದ ಗುತ್ತಿಗೆ ಬಸ್ ಗೋರಖ್‌ಪುರದಿಂದ ಕುಶಿನಗರದ ಪದ್ರೌನಾಗೆ ಹೋಗುತ್ತಿತ್ತು ಎನ್ನಲಾಗಿದೆ. ಜಗದೀಶ್‌ಪುರದ ಮಲ್ಲಾಪುರ ಬಳಿ ಬಸ್‌ನ ಟೈರ್‌ ಪಂಕ್ಚರ್‌ ಆಗಿದೆ. ಚಾಲಕ ಮತ್ತು ಕಂಡಕ್ಟರ್ ರಸ್ತೆ ಬದಿಯಲ್ಲಿ ಬಸ್ ನಿಲ್ಲಿಸಿ ಮತ್ತೊಂದು ಬಸ್ಸಿನಲ್ಲಿ ಪ್ರಯಾಣಿಕರನ್ನು ಹತ್ತಿಸಿದ್ದಾರೆ. ಕೆಲವು ಪ್ರಯಾಣಿಕರು ಬಸ್ಸಿನಲ್ಲಿ ಕುಳಿತಿದ್ದರೆ ಮತ್ತೆ ಕೆಲವರು ಎರಡು ಬಸ್ಸುಗಳ ನಡುವೆ ನಿಂತಿದ್ದರು. ಅಷ್ಟರಲ್ಲಿ ಹಿಂದಿನಿಂದ ವೇಗವಾಗಿ ಬಂದ ಲಾರಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 24ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಇನ್ನು ಕೆಲವು ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ.

ಮತ್ತೊಂದೆಡೆ, ಅಪಘಾತದ ನಂತರ, ಅಧಿಕಾರಿಗಳು ಸದರ್ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜಿನ ವೈದ್ಯರಿಗೆ ಎಚ್ಚರಿಕೆ ನೀಡಿದರು. ಗಾಯಾಳುಗಳು ಹೆಚ್ಚಿನ ಸಂಖ್ಯೆಯಲ್ಲಿದ್ದ ಕಾರಣ ವೈದ್ಯರನ್ನು ಕರೆಸಲಾಯಿತು. ಐದು ಆಂಬ್ಯುಲೆನ್ಸ್‌ಗಳು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಸದರ್ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಿವೆ. ಬಸ್ ನಲ್ಲಿ 30ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ.

You cannot copy content of this page

Exit mobile version