ಬೆಂಗಳೂರು : ಬಿಜೆಪಿ ಸರ್ಕಾರ ಯುವಜನರ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ 27,360 ಕೋಟಿ ರೂ ಬಿಡುಗಡೆ ಮಾಡುವ ಮುಖಾಂತರ ಶೈಕ್ಷಣಿಕ ಕ್ರಾಂತಿಗೆ ನಾಂದಿ ಹಾಡಿದೆ. ಜೊತೆಗೆ ಕೌಶಲ್ಯಗಳನ್ನು ಹೆಚ್ಚಿಸುವ ಮಹತ್ವಾಕಾಂಕ್ಷೆ ಮತ್ತು ನವಭಾರತದ ಭವಿಷ್ಯ ಯುವಜನರ ಕೈಯ್ಯಲ್ಲಿರುತ್ತದೆ ಎಂದು ಮೋದೀಜಿಯವರಿಗೆ ಗೊತ್ತಿದೆ ಎಂದು ರಾಜ್ಯ ಬಿಜೆಪಿ ಸರ್ಕಾರ ಟ್ವೀಟ್ ಮಾಡಿದೆ.
ಈ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಕೆಲವರು ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ 40% ಕಮೀಷನ್ ಹೊಡೆಯುವುದಕ್ಕೆ ಈ ಅಭಿವೃದ್ಧಿ ಘೋಷಣೆ ಎಂದು ಬಿಜೆಪಿ ಸರ್ಕಾರಕ್ಕೆ ಟೀಕಿಸಿದ್ದಾರೆ.
