Sunday, June 22, 2025

ಸತ್ಯ | ನ್ಯಾಯ |ಧರ್ಮ

ಸರ್ಕಾರಕ್ಕೆ ಮಹಿಳೆಯರ ಮೇಲೆ ಗೌರವ ಹೊಂದಿರುವುದೇ ಆದರೆ ಸೋಮಣ್ಣರನ್ನು ವಜಾಗೊಳಿಸಿ: ಕಾಂಗ್ರೆಸ್‌

ಚಾಮರಾಜನಗರ : ಚಾಮರಾಜನಗರದ ಗುಂಡ್ಲುಪೇಟೆಯ ಹಂಗಳ ಗ್ರಾಮದಲ್ಲಿ ಮಹಿಳೆಯೊಬ್ಬರಿಗೆ ವಸತಿ ಸಚಿವ ವಿ. ಸೋಮಣ್ಣ ಕಾಪಾಳಕ್ಕೆ ಹೊಡೆದಿದ್ದು, ಬಿಜೆಪಿ ಸರ್ಕಾರ ಮಹಿಳೆಯರ ಮೇಲೆ ಗೌರವ ಹೊಂದಿರುವುದೇ ಆದರೆ ಕೂಡಲೇ ಸಚಿವ ವಿ. ಸೋಮಣ್ಣರನ್ನು ವಜಾಗೊಳಿಸಿ ಅದನ್ನು ಸಾಬೀತುಪಡಿಸಿʼ ಎಂದು ಕಾಂಗ್ರೆಸ್‌ ಬಿಜೆಪಿ ಸರ್ಕಾರಕ್ಕೆ ಸವಾಲೊಡ್ಡಿದೆ

ಹಂಗಳ ಗ್ರಾಮದಲ್ಲಿ ನಿವೇಶನ ಹಂಚಿಕೆ ವಿಚಾರದಲ್ಲಿ ಆಗಿರುವ ಗೊಂದಲ ಮತ್ತು ಈ ಬಗ್ಗೆ ತಮಗಾದ ಆನ್ಯಾಯವನ್ನು ಹೇಳಿಕೊಳ್ಳಲು ಮಹಿಳೆಯೊಬ್ಬರು ಸಚಿವರ ಬಳಿ ತೆರಳಿದ್ದರು. ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಸಚಿವರನ್ನು ಪ್ರಶ್ನಿಸಿದ ಮಹಿಳೆಗೆ ವಿ. ಸೋಮಣ್ಣ ಕಾಪಾಳಕ್ಕೆ ಹೊಡೆದಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌, ʼಸಿಎಂ ಬಸವರಾಜ ಬೊಮ್ಮಾಯಿಯವರೇ, ನಿಮ್ಮ ಸರ್ಕಾರ ಮಹಿಳೆಯರನ್ನು ಗೌರವಿಸುವುದೇ ಆದರೆ, ನಿಮ್ಮ ಆಡಳಿತವು ಮಹಿಳೆಯರಿಗೆ ಸುರಕ್ಷತೆ ನೀಡಲು ಬದ್ಧವಾಗಿದ್ದರೆ, ನಿಮ್ಮ ಪಕ್ಷವು ನಿಜಕ್ಕೂ ಮಹಿಳೆಯರ ಮೇಲೆ ಗೌರವ ಹೊಂದಿರುವುದೇ ಆದರೆ ಕೂಡಲೇ ಸಚಿವ ವಿ. ಸೋಮಣ್ಣರನ್ನು ವಜಾಗೊಳಿಸಿ ಅದನ್ನು ಸಾಬೀತುಪಡಿಸಿʼ ಎಂದು ಕಿಡಿಕಾರಿದೆ.

ʼಮಹಿಳೆಯ ಮೇಲೆ ಸಚಿವ ವಿ.ಸೋಮಣ್ಣ ಮಾಡಿದ ಹಲ್ಲೆ ಬಿಜೆಪಿ ಪಕ್ಷದ ಸ್ತ್ರೀ ವಿರೋಧಿ ಮನಸ್ಥಿತಿಗೆ ಹಿಡಿದ ಕನ್ನಡಿ. ಸ್ವತಃ ಬಿಜೆಪಿ ಸರ್ಕಾರದ ಸಚಿವರೇ ನಡೆಸುವ ದೌರ್ಜನ್ಯಗಳಿಗೆ ಕ್ರಮ ಕೈಗೊಳ್ಳದ ಸಿಎಂ ಬಸವರಾಜ ಬೊಮ್ಮಾಯಿಯವರಿಂದ ರಾಜ್ಯದಲ್ಲಿ ನಡೆಯುವ ಮಹಿಳಾ ದೌರ್ಜನ್ಯಗಳನ್ನು ತಡೆಯಲು ಸಾಧ್ಯವೇ?ʼ ಎಂದು ಪ್ರಶ್ನೆ ಮಾಡಿದೆ.

ʼನಿಮ್ಮ ಸರ್ಕಾರ ಮಹಿಳೆಯರನ್ನು ಗೌರವಿಸುವುದೇ ಆದರೆ, ನಿಮ್ಮ ಆಡಳಿತವು ಮಹಿಳೆಯರಿಗೆ ಸುರಕ್ಷತೆ ನೀಡಲು ಬದ್ಧವಾಗಿದ್ದರೆ, ನಿಮ್ಮ ಪಕ್ಷವು ನಿಜಕ್ಕೂ ಮಹಿಳೆಯರ ಮೇಲೆ ಗೌರವ ಹೊಂದಿರುವುದೇ ಆದರೆ ಕೂಡಲೇ ಸಚಿವ ವಿ. ಸೋಮಣ್ಣರನ್ನು ವಜಾಗೊಳಿಸಿ ಅದನ್ನು ಸಾಬೀತುಪಡಿಸಿʼ ಎಂದು ಕಾಂಗ್ರೆಸ್‌ ಬಿಜೆಪಿ ಸರ್ಕಾರಕ್ಕೆ ಸವಾಲೊಡ್ಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page