Home ಬ್ರೇಕಿಂಗ್ ಸುದ್ದಿ ಆ.15 ರಂದು ಜನಾರೋಗ್ಯದ ಸ್ವಾತಂತ್ರ್ಯಕ್ಕಾಗಿ ಧರಣಿ ಸತ್ಯಗ್ರಹ – ಆರ್.ಪಿ. ವೆಂಕಟೇಶ್ ಮೂರ್ತಿ

ಆ.15 ರಂದು ಜನಾರೋಗ್ಯದ ಸ್ವಾತಂತ್ರ್ಯಕ್ಕಾಗಿ ಧರಣಿ ಸತ್ಯಗ್ರಹ – ಆರ್.ಪಿ. ವೆಂಕಟೇಶ್ ಮೂರ್ತಿ

filter: 0; fileterIntensity: 0.000000; filterMask: 0; captureOrientation: 0; shaking: 0.204125; highlight: 0; algolist: 0; multi-frame: 1; brp_mask: 0; brp_del_th: 0.0000,0.0000; brp_del_sen: 0.0000,0.0000; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 293.0;aec_lux_index: 0;albedo: ;confidence: ;motionLevel: 0;weatherinfo: null;temperature: 33;zeissColor: bright;

ಹಾಸನ : ನಗರದಲ್ಲಿ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಮುಂಬಾಗ ಆಗಸ್ಟ್ 15ರ ಶುಕ್ರವಾರದಂದು ಬೆಳಿಗ್ಗೆ 10:30ಕ್ಕೆ ಜನಾರೋಗ್ಯದ ಸ್ವಾತಂತ್ರ‍್ಯಕ್ಕಾಗಿ ಧರಣಿ ಸತ್ಯಗ್ರಹವನ್ನು ಹಮ್ಮಿಕೊಂಡಿದ್ದು, ಎಲ್ಲಾ ಜನಪರ ಸಂಘಟನೆಗಳು, ಸಂಘ ಸಂಸ್ಥೆಗಳು, ನಾಗರೀಕರು ಪಾಲ್ಗೊಳ್ಳುವುದಾಗಿ ಕೆ.ಪಿ.ಆರ್.ಎಸ್. ಸಂಘಟನೆಯ ಜಿಲ್ಲಾಧ್ಯಕ್ಷ ಹೆಚ್.ಆರ್. ನವೀಣ್ ಕುಮಾರ್ ಮತ್ತು ಹಸಿರು ಭೂಮಿ ಪ್ರತಿಷ್ಠಾನದ ಸಂಸ್ಥಾಪಕ ಆರ್.ಪಿ. ವೆಂಕಟೇಶ್ ಮೂರ್ತಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ಸಾರ್ವಜನಿಕ ಹಾಸನ ನಗರದಲ್ಲಿ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೂಡಲೇ ಆರಂಭಿಸುವಂತೆ ಹಾಗೂ ಹಾಸನ ಜಿಲ್ಲೆಯ ಆರೋಗ್ಯ ವ್ಯವಸ್ಥೆಯನ್ನು ಭಾರತೀಯ ಸಾರ್ವಜನಿಕ ಆರೋಗ್ಯ ಮಾನದಂಡಗಳಿಗೆ (ಐ.ಪಿ.ಎಚ್.ಎಸ್) ಅನುಗುಣವಾಗಿ ಸೌಲಭ್ಯಗಳನ್ನು ನೀಡಿ ಉನ್ನತೀಕರಿಸಿ ಸಬಲೀಕರಿಸುವಂತೆ ಆಗ್ರಹಿಸಿ ಹಾಸನ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟದ ನೇತೃತ್ವದಲ್ಲಿ ‘ಜನಾರೋಗ್ಯಕ್ಕಾಗಿ ಜನಾಂದೋಲನ’ ಆರಂಭಿಸಲಾಗಿದೆ. ಇದರ ಭಾಗವಾಗಿ ಆಗಸ್ಟ್ 15ರ ಸ್ವಾತಂತ್ರ÷್ಯ ದಿನದಂದು ಹಾಸನದ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಮುಂದೆ ‘ಜನಾರೋಗ್ಯದ ಸ್ವಾತಂತ್ರ‍್ಯಕ್ಕಾಗಿ ಸಾಮೂಹಿಕ ಧರಣಿ ಸತ್ಯಾಗ್ರಹ’ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಮೊದಲಿಗೆ ಜಿಲ್ಲೆಯ ವಿವಿದ ಜನಪರ ಸಂಘಟನೆಗಳು, ಸಂಘಸAಸ್ಥೆಗಳು ಮತ್ತು ನಾಗರಿಕರಿಂದ ನಿರಂತರ ಸರಣಿ ಪ್ರತಿಭಟನೆಗಳನ್ನು ನಡೆಸಲಾಗುವುದು. ಅದರ ಭಾಗವಾಗಿ ಇಂದು ಮಹಿಳೆ ಮತ್ತು ಮಹಿಳಾ ಪರ ಸಂಘಟನೆಗಳ ವತಿಯಿಂದ ಈ ಹಕ್ಕೊತ್ತಾಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆಗಸ್ಟ್ 14ರಂದು ಜಿಲ್ಲೆಯ ಜನರ ಪರವಾಗಿ ಜನಾರೋಗ್ಯದ ಹಕ್ಕೊತ್ತಾಯಗಳನ್ನು ತಮಗೆ ಸಲ್ಲಿಸಲಾಗುವುದು. ಆಗಸ್ಟ್ 15ರಂದು ನಡೆಯುವ ‘ಜನಾರೋಗ್ಯದ ಸಾಮೂಹಿಕ ಧರಣಿ ಸತ್ಯಾಗ್ರಹ’ದ ಸ್ಥಳಕ್ಕೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು, ಮಾನ್ಯ ಸಂಸದರು, ಮಾನ್ಯ ಶಾಸಕರು ಹಾಗೂ ಮಾನ್ಯ ಜಿಲ್ಲಾಧಿಕಾರಿಯವರಾದ ತಾವು ಸ್ಥಳಕ್ಕೆ ಆಗಮಿಸಿ ಜನಾರೋಗ್ಯದ ಹಕ್ಕೊತ್ತಾಯಗಳನ್ನು ಈಡೇರಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಈ ಮೂಲಕ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿದ್ದೇವೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಿ ಅವುಗಳಿಗೆ ಐ.ಪಿ.ಎಚ್.ಎಸ್. ಮಾನದಂಡಗಳ ಅನುಸಾರ ಪ್ರಾಥಮಿಕ ಸೌಲಭ್ಯಗಳಾದ ಸುಸಜ್ಜಿತ ವೈದ್ಯಕೀಯ ಪ್ರಯೋಗಾಲಯ, ಇಸಿಜಿ, ಎಕೋ, ತುರ್ತು ಚಿಕಿತ್ಸಾ ಘಟಕ ಮತ್ತು ಅಂಬುಲೆನ್ಸ್ ಹಾಗೂ ತಜ್ಞ ವೈದ್ಯರು ಮತ್ತು ಸಿಬ್ಬಂದಿಗಳನ್ನು ಒದಗಿಸಬೇಕು. ತಾಲ್ಲೂಕು ಆಸ್ಪತ್ರೆಗಳನ್ನು ಐ.ಪಿ.ಎಚ್.ಎಸ್. ಮಾನದಂಡಗಳಿಗೆ ಅನುಗುಣವಾಗಿ ಮೇಲ್ದರ್ಜೆಗೇರಿಸಿ ಹೃದಯ ಮತ್ತು ಮೂತ್ರಪಿಂಡ ಸಂಬಂಧಿ ಹಾಗೂ ಇನ್ನಿತರೆ ಮಾರಣಾಂತಿಕ ಖಾಯಿಲೆಗಳ ತುರ್ತು ಚಿಕಿತ್ಸಾ ಘಟಕಗಳನ್ನು ತೆರೆಯಬೇಕು ಎಂದರು. ಯಾವುದೇ ಹಾನಿಕಾರಕ ರಾಸಾಯನಿಕ, ಕೃತಕ ಹಾಗೂ ಕಲುಷಿತ ಎಣ್ಣೆ ಮತ್ತು ಕೃತಕ ಬಣ್ಣಗಳು ಬಳಕೆಯಾಗದಂತೆ ಎಚ್ಚರಿಕೆವಹಿಸಬೇಕು ಎಂದರು. ಕೃಷಿಯಲ್ಲಿ ಅಪಾಯಕಾರಿ ಕ್ರಿಮಿ/ಕೀಟನಾಶಕಗಳು ಮತ್ತು ರಾಸಾಯನಿಕಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯ ಮೇಲೆ ನಿಯಂತ್ರಣ ಹೇರಬೇಕು ಎಂಧು ಹೇಳಿದರು. ಈ ಬೇಡಿಕೆಗಳು ಈಡೇರುವವರೆಗೂ, ಹಾಸನ ಜಿಲ್ಲೆಯ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವವರೆಗೂ- ಹಾಸನ ಜಿಲ್ಲೆಯ ಎಲ್ಲಾ ಜನಪರ ಸಂಘಟನೆಗಳು, ಸಂಘ ಸಂಸ್ಥೆಗಳು ಮತ್ತು ನಾಗರಿಕರು ನಿರಂತರವಾದ ಪ್ರತಿಭಟನೆ ನಡೆಸಿ ಆಗಸ್ಟ್ 15 ರ ಸ್ವಾತಂತ್ರ‍್ಯ ದಿನದಂದು ನಡೆಯುತ್ತಿರುವ ‘ಜನಾರೋಗ್ಯದ ಸ್ವಾತಂತ್ರ÷್ಯಕ್ಕಾಗಿ ಸಾಮೂಹಿಕ ದರಣಿ ಸತ್ಯಾಗ್ರಹದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಈ ಮೂಲಕ ಮನವಿ ಈ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದೇವೆ ಎಂದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರು ಹೋರಾಟ ಸ್ಥಳಕ್ಕೆ ಬರಬೇಕೆಂದು ಮನವಿ ಮಾಡಿದರು.


ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಿ ಅವುಗಳಿಗೆ ಐ.ಪಿ.ಎಚ್.ಎಸ್. ಮಾನದಂಡಗಳ ಅನುಸಾರ ಪ್ರಾಥಮಿಕ ಸೌಲಭ್ಯಗಳಾದ ಸುಸಜ್ಜಿತ ವೈದ್ಯಕೀಯ ಪ್ರಯೋಗಾಲಯ, ಇಸಿಜಿ, ಎಕೋ, ತುರ್ತು ಚಿಕಿತ್ಸಾ ಘಟಕ ಮತ್ತು ಅಂಬುಲೆನ್ಸ್ ಹಾಗೂ ತಜ್ಞ ವೈದ್ಯರು ಮತ್ತು ಸಿಬ್ಬಂದಿಗಳನ್ನು ಒದಗಿಸಬೇಕು. ತಾಲ್ಲೂಕು ಆಸ್ಪತ್ರೆಗಳನ್ನು ಐ.ಪಿ.ಎಚ್.ಎಸ್. ಮಾನದಂಡಗಳಿಗೆ ಅನುಗುಣವಾಗಿ ಮೇಲ್ದರ್ಜೆಗೇರಿಸಿ ಹೃದಯ ಮತ್ತು ಮೂತ್ರಪಿಂಡ ಸಂಬಂಧಿ ಹಾಗೂ ಇನ್ನಿತರೆ ಮಾರಣಾಂತಿಕ ಖಾಯಿಲೆಗಳ ತುರ್ತು ಚಿಕಿತ್ಸಾ ಘಟಕಗಳನ್ನು ತೆರೆಯಬೇಕು ಎಂದರು. ಯಾವುದೇ ಹಾನಿಕಾರಕ ರಾಸಾಯನಿಕ, ಕೃತಕ ಹಾಗೂ ಕಲುಷಿತ ಎಣ್ಣೆ ಮತ್ತು ಕೃತಕ ಬಣ್ಣಗಳು ಬಳಕೆಯಾಗದಂತೆ ಎಚ್ಚರಿಕೆವಹಿಸಬೇಕು ಎಂದರು. ಕೃಷಿಯಲ್ಲಿ ಅಪಾಯಕಾರಿ ಕ್ರಿಮಿ/ಕೀಟನಾಶಕಗಳು ಮತ್ತು ರಾಸಾಯನಿಕಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯ ಮೇಲೆ ನಿಯಂತ್ರಣ ಹೇರಬೇಕು ಎಂಧು ಹೇಳಿದರು. ಈ ಬೇಡಿಕೆಗಳು ಈಡೇರುವವರೆಗೂ, ಹಾಸನ ಜಿಲ್ಲೆಯ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವವರೆಗೂ- ಹಾಸನ ಜಿಲ್ಲೆಯ ಎಲ್ಲಾ ಜನಪರ ಸಂಘಟನೆಗಳು, ಸಂಘ ಸಂಸ್ಥೆಗಳು ಮತ್ತು ನಾಗರಿಕರು ನಿರಂತರವಾದ ಪ್ರತಿಭಟನೆ ನಡೆಸಿ ಆಗಸ್ಟ್ 15 ರ ಸ್ವಾತಂತ್ರ÷್ಯ ದಿನದಂದು ನಡೆಯುತ್ತಿರುವ ‘ಜನಾರೋಗ್ಯದ ಸ್ವಾತಂತ್ರ÷್ಯಕ್ಕಾಗಿ ಸಾಮೂಹಿಕ ದರಣಿ ಸತ್ಯಾಗ್ರಹದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಈ ಮೂಲಕ ಮನವಿ ಈ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದೇವೆ ಎಂದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರು ಹೋರಾಟ ಸ್ಥಳಕ್ಕೆ ಬರಬೇಕೆಂದು ಮನವಿ ಮಾಡಿದರು. ಇದೆ ವೇಳೆ ಹಸಿರು ಭೂಮಿ ಪ್ರತಿಷ್ಠಾನದ ಸಂಸ್ಥಾಪಕ ಆರ್.ಪಿ. ವೆಂಕಟೇಶ್ ಮೂರ್ತಿ, ಹಿರಿಯ ಮಾದಿಗ ದಂಡೋರ ಜಿಲ್ಲಾಧ್ಯಕ್ಷ ಟಿ.ಆರ್. ವಿಜಯಕುಮಾರ್, ಬಿಜಿವಿಎಸ್ ನ ಸ್ವಾಮಿ ಚಿನ್ನೇನಹಳಿ, ಮಮತಾ ಶಿವು, ಬಾಳೆಹಣ್ಣು ವರ್ತಕರ ಸಂಘದ ಅಧ್ಯಕ್ಷ ಸಮೀರ್ ಅಹಮದ್ ಇತರರು ಉಪಸ್ಥಿತರಿದ್ದರು.

You cannot copy content of this page

Exit mobile version