Home ರಾಜಕೀಯ ಅಕ್ರಮ ಹಣ ವರ್ಗಾವಣೆ: ಸತ್ಯೇಂದ್ರ ಜೈನ್‌ಗೆ ಸುಪ್ರೀಂ ಕೋರ್ಟ್‌ನಿಂದ ಮತ್ತೆ ರಿಲೀಫ್, ಮಧ್ಯಂತರ ಜಾಮೀನು ಸೆಪ್ಟೆಂಬರ್...

ಅಕ್ರಮ ಹಣ ವರ್ಗಾವಣೆ: ಸತ್ಯೇಂದ್ರ ಜೈನ್‌ಗೆ ಸುಪ್ರೀಂ ಕೋರ್ಟ್‌ನಿಂದ ಮತ್ತೆ ರಿಲೀಫ್, ಮಧ್ಯಂತರ ಜಾಮೀನು ಸೆಪ್ಟೆಂಬರ್ 12 ರವರೆಗೆ ವಿಸ್ತರಣೆ

0

ದೆಹಲಿಯ ಮಾಜಿ ಸಚಿವ ಮತ್ತು ಆಪ್ ನಾಯಕ ಸತ್ಯೇಂದ್ರ ಜೈನ್ ಅವರು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಇನ್ನಷ್ಟು ರಿಲೀಫ್‌ ನೀಡಿದೆ. ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ಕೋರ್ಟು ಸೆಪ್ಟೆಂಬರ್ 12ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ವೈದ್ಯಕೀಯ ಕಾರಣಗಳಿಗಾಗಿ ಈ ವಿಸ್ತರಣೆ ಮಾಡಲಾಗಿದೆಯೆಂದು ಜೈನ್‌ ಅವರ ವಕೀಲರು ಹೇಳಿದ್ದಾರೆ.

ದೆಹಲಿ ಸರ್ಕಾರದಲ್ಲಿ ಸಚಿವರಾಗಿದ್ದ ಸಮಯದಲ್ಲಿ ಜೈನ್‌ ವಿರುದ್ಧ ಅಕ್ರಮ ಹಣ ವರ್ಗಾವಣೆಯ ಆರೋಪ ಕೇಳಿ ಬಂದಿತ್ತು. ಮತ್ತು ಈ ಕುರಿತು ED ತನಿಖೆ ಮಾಡುತ್ತಿತ್ತು. ಈ ಪ್ರಕರಣದಲ್ಲಿ ಬಂಧಿತರಾಗಿ ಸುಮಾರು ಒಂದು ವರ್ಷ ಜೈಲಿನಲ್ಲಿದ್ದರು. ಜೈಲಿನಲ್ಲಿರುವಾಗಲೇ ಅವರ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ, ಅವರ ಆರೋಗ್ಯ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮೇ 26 ರಂದು ಸತ್ಯೇಂದ್ರ ಜೈನ್‌ಗೆ ಸುಪ್ರೀಂ ಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ನೀಡಿತ್ತು. ಈಗ ಈ ಜಾಮೀನಿನ ಅವಧಿಯನ್ನು ಹೆಚ್ಚಿಸಿ ಕೋರ್ಟ್‌ ಆದೇಶ ನೀಡಿದೆ.

You cannot copy content of this page

Exit mobile version