ದೆಹಲಿ: ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಅಪರಾಧಿಗಳನ್ನು ಬಿಡುಗಡೆಗೊಳಿಸಿರುವ ಗುಜರಾತ್ ಸರ್ಕಾರದ ವಿನಾಯತಿ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ. 2002ರಲ್ಲಿ ನಡೆದ ಗುಜರಾತ್ ಗಲಭೆಯಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಿ, ಮಗು ಮತ್ತು ಮನೆಯವರನ್ನು ಸಾಯಿಸಿದ 11 ಮಂದಿ ಆರೋಪಿಗಳ ಬಿಡುಗಡೆಯನ್ನು ಪ್ರಶ್ನಿಸಿ ಬಿಲ್ಕಿಸ್ ಬಾನು ((Bilkis Bano)ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಾನ್ಯಮಾಡಿದೆ. ಈ ಅರ್ಜಿ ವಿಚಾರಣೆ ಮುಂದುವರಿಸುವುದಾಗಿ ಎಂದು ಸುಪ್ರೀಂ ಹೇಳಿದೆ. ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಈ ತೀರ್ಪು ನೀಡಿದ್ದು, ಅಪರಾಧಿಗಳು ಮತ್ತೆ ಕಂಬಿ ಎಣಿಸಬೇಕಾಗಿದೆ.
ಗುಜರಾತ್ ಸರ್ಕಾರಕ್ಕೆ ಈ ಆರೋಪಿಗಳನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್ ನಿರ್ಧಾರ ಮಹಾರಾಷ್ಟ್ರ ಸರ್ಕಾರಕ್ಕೆ ಬಿಟ್ಟದ್ದು ಎಂದು ಹೇಳಿದೆ.
2022ರ ಸ್ವಾತಂತ್ರ್ಯ ದಿನದಂದು ಗುಜರಾತ್ ಸರ್ಕಾರವು ಈ ಅಪರಾಧಿಗಳನ್ನು ಬಿಡುಗಡೆ ಮಾಡಿತ್ತು. ಇದರ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ರವಾಗಿತ್ತು. ಅಪರಾಧಿಗಳು ಬಿಡುಗಡೆಯಾದಾಗ ಅದ್ಧೂರಿ ಸ್ವಾಗತವನ್ನು ನೀಡಲಾಗಿತ್ತು. ಇವರ ಜೊತೆಗೆ ಬಿಜೆಪಿ ಸಂಸದರು, ಶಾಸಕರು, ವೇದಿಕೆಯನ್ನು ಹಂಚಿಕೊಂಡಿದ್ದರು. ಈ ಅಪರಾಧಿಗಳಲ್ಲಿ ಒಬ್ಬನಾದ ರಾಧೇಶ್ಯಾಮ್ ಶಾ ತನ್ನ ವಕೀಲಿ ವೃತ್ತಿಯನ್ನೂ ಆರಂಭಿಸಿದ್ದ.