Monday, June 23, 2025

ಸತ್ಯ | ನ್ಯಾಯ |ಧರ್ಮ

SC, ST ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡದೆ ಆತಂಕ ಸೃಷ್ಟಿಸುತ್ತಿರುವ ಸಮಾಜ ಕಲ್ಯಾಣ ಇಲಾಖೆ ಮತ್ತು ಮೈಸೂರು ವಿ.ವಿ

ಮೈಸೂರು ವಿವಿ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಸಮಸ್ಯೆ ಎದುರಾಗಿ ಈಗಾಲೆ ಮೂರು ವರ್ಷಗಳಿಂದ ಪದವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸರಿಯಾಗಿ ನೀಡದೆ ಇರುವುದರಿಂದ ಕಾಲೇಜುಗಳಲ್ಲಿ ಪರೀಕ್ಷೆಗೆ ನಿರಾಕರಿಸುವ ಘಟನೆಗಳು ಹೆಚ್ಚಾಗಿ ನಡೆಯುತ್ತಿವೆ. ಹಾಸನದ ಮಹಿಳಾ ಪ್ರಥಮ ದರ್ಜೆಯಲ್ಲಿ ಕಳೆದ ವರ್ಷಗಳ ಶುಲ್ಕ ಪಾವತಿ ಮಾಡಬೇಕು ಇಲ್ಲವಾದಲ್ಲಿ ಪರೀಕ್ಷೆಗೆ ಕೂರಿಸುವುದಿಲ್ಲಾ ಎಂದು ಪ್ರಾಂಶುಪಾಲರು ಹೇಳುತ್ತಿದ್ದಾರೆ. ಈ ಕಾರಣದಿಂದ ವಿದ್ಯಾರ್ಥಿಗಳಲ್ಲಿ ಆತಂಕ ಮನೆ ಮಾಡಿದೆ ಜೊತೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆದ ಕೆಲ ತಾಂತ್ರಿಕ ದೋಷಗಳಿಂದಲು ಕೂಡ ವಿದ್ಯಾರ್ಥಿಗಳು ಇಂದು ಸಮಸ್ಯೆ ಎದುರಿಸಿತ್ತಿದ್ದಾರೆ . ಜಿಲ್ಲಾ ಕೇಂದ್ರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ನಿರ್ಲಕ್ಷ್ಯ ದೋರಣೆಯೂ ಕೂಡ ಇಂದು ವಿದ್ಯಾರ್ಥಿ ವೇತನ ವಿದ್ಯಾರ್ಥಿಗಳಿಗೆ ತಲುಪದೆ ಇರುಲು ಕಾರಣ ವಾಗಿದೆ ಈ ಎಲ್ಲಾ ಬೆಳವಣಿಗೆಯನ್ನು ವಿರೋಧಿಸಿ ಎಸ್.ಎಫ್.ಐ ಜಿಲ್ಲಾ ಸಮಿತಿ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಕಛೇರಿಯ ಮುಂದೆ ಪ್ರತಿಭಟನೆ ಮಾಡಿ ಜಿಲ್ಲಾ‌ಸಮಾಜ ಕಲ್ಯಾಣ ಅಧಿಕಾರಿಗಳ ಜೊತೆ ಸಭೆ ಮಾಡಿ ವಿದ್ಯಾರ್ಥಿಗಳಿಗೆ ಕೂಡಲೆ‌ ಪರೀಕ್ಷೆ ಬರೆಯಯಲು ಪತ್ರ ಕಳಿಸುವಂತೆ ಒತ್ತಾಯಿಸಿ ಸಭೆ ನಡೆಸಲಾಯಿತು ಇನ್ನೂ ಎರಡು‌ ದಿನಗಳಲ್ಲಿ ಎಲ್ಲಾ‌ ಕಾಲೇಜುಗಳಿಗೂ ಸುತ್ತೋಲೆ‌ ಕಳಿಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡುತ್ತೇವೆ ಎಂದು ಬರವಸೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಎಸ್.ಎಫ್.ಐ ಜಿಲ್ಲಾ ಕಾರ್ಯದರ್ಶಿ ರಮೇಶ್ ಹಾಸನ್, Dyfi ಸಂಘಟನೆಯ ಪೃಥ್ವಿ ಎಂ.ಜಿ, ಪ್ರಸನ್ನ, ಸಹ ಕಾರ್ಯದರ್ಶಿ ವಿವೇಕ್, ಹೇಮಂತ್ ಸ್ವರೂಪ್, ಪ್ರಮಿತ್ , ಹೇಮಂತ್, ಚಿತ್ರ, ವಿಧ್ಯಾ, ಪೂಜ, ಪುಟ್ಟ ಲಕ್ಷ್ಮೀ ಉಪಸ್ಥಿತರಿದ್ದರು.

ಪದವಿ ವಿದ್ಯಾರ್ಥಿಗಳ ಬೇಡಿಕೆಗಳು

1. ಕೂಡಲೆ 3 ವರ್ಷದ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಬೇಕು.

2. ಮುಂದಿನ ಸೆಮಿಸ್ಟರ್ ಪರೀಕ್ಷಗೆ ಅನುಮತಿ ಕೊಡಬೇಕು.

3. ಮೈಸೂರು ವಿಶ್ವ ವಿಧ್ಯಾಲಯದ ಪದವಿ ವಿದ್ಯಾರ್ಥಿಗಳ ಶುಲ್ಕ ಕಡಿಮೆ ಮಾಡಬೇಕು.

4. ಸಮಾಜ ಕಲ್ಯಾಣ ಇಲಾಖೆ ಕಾಲೇಜುಗಳಲ್ಲಿ ಸಭೆ ನಡೆಸಬೇಕು.

4. ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿ ಸಮಸ್ಯೆಗಳ ಬಗ್ಗೆ ಹೆಚ್ಚು ಗಮನಹರಿಸಬೇಕು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page