ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಶೀಘ್ರದಲ್ಲೇ ವಾರದಲ್ಲಿ ಆರು ದಿನ ಬೇಯಿಸಿದ ಮೊಟ್ಟೆ ಸಿಗಲಿದೆ, ಈ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಕೋಟ್ಯಾಧಿಪತಿ ಅಜೀಂ ಪ್ರೇಮ್ಜಿ ಅವರ ಸಿಎಸ್ಆರ್ ವಿಭಾಗದಿಂದ 1,500 ಕೋಟಿ ರೂಪಾಯಿ ಅನುದಾನವನ್ನು ಸ್ವೀಕರಿಸಲು ನಿರ್ಧರಿಸಿದೆ.
ಇಲಾಖೆಯ ಅಧಿಕೃತ ಮೂಲಗಳ ಪ್ರಕಾರ ಸರ್ಕಾರ ಮತ್ತು ಅಜೀಂ ಪ್ರೇಮ್ಜಿ ಫೌಂಡೇಶನ್ ನಡುವಿನ ಔಪಚಾರಿಕ ಒಪ್ಪಂದಕ್ಕೆ ಶನಿವಾರ ಸಹಿ ಹಾಕುವ ಸಾಧ್ಯತೆಯಿದೆ.
ಮೂರು ವರ್ಷಗಳ ಅವಧಿಗೆ ನೀಡಲಾಗುವ ಅನುದಾನವನ್ನು ಪ್ರಸ್ತುತ ಎರಡು ದಿನಗಳ ಬದಲು ವಾರದಲ್ಲಿ ಆರು ದಿನ ಬೇಯಿಸಿದ ಮೊಟ್ಟೆಗಳನ್ನು ಪೂರೈಸಲು ಬಳಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.