Home ಬ್ರೇಕಿಂಗ್ ಸುದ್ದಿ ವಾರದ ಆಸುಪಾಸಿನಲ್ಲಿ ಕಾಡಾನೆ ದಾಳಿಗೆ ಎರಡನೇ ಬಲಿ

ವಾರದ ಆಸುಪಾಸಿನಲ್ಲಿ ಕಾಡಾನೆ ದಾಳಿಗೆ ಎರಡನೇ ಬಲಿ

0

ಕೊಡಗು : ಕಾಡಾನೆ ದಾಳಿಗೆ ಸಕಲೇಶಪುರದ ‘ಆನೆ ವೆಂಕಟೇಶ್’ ಮೃತಪಟ್ಟ ಸುದ್ದಿಯ ಬೆನ್ನಲ್ಲೇ ಮಡಿಕೇರಿಯಲ್ಲಿ ಮತ್ತೊಂದು ಕಾಡಾನೆ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಮೃತಪಟ್ಟಿದ್ದಾರೆ. ಜಿಲ್ಲೆಯ ಶುಂಠಿಕೊಪ್ಪದಲ್ಲಿ ನಡೆದ ಆನೆ ದಾಳಿಗೆ ಸಂಬಂಧಿಸಿದಂತೆ ನಡೆದ ಕಾರ್ಯಾಚರಣೆಯಲ್ಲಿ ಈ ದಾಳಿ ನಡೆದಿದೆ.

ಸೋಮವಾರ ಬೆಳಗ್ಗೆ ಕಾಡಾನೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಬೈಕ್ ನಿಂದು ಬಿದ್ದು ವ್ಯಕ್ತಿಗೆ ಗಾಯವಾಗಿತ್ತು. ಈ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ಸಮಯದಲ್ಲಿ ಅದೇ ಕಾಡಾನೆ ಮತ್ತೊಮ್ಮೆ ದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಆನೆಯನ್ನು ಓಡಿಸುವ ಸಲುವಾಗಿ ಬೆಳಗ್ಗಿನಿಂದಲೇ ಅರಣ್ಯ ಇಲಾಖೆ ಸಹಯೋಗದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.

ಈ ತಂಡದಲ್ಲಿಆರ್ ಆರ್ ಟಿ ಸಿಬ್ಬಂದಿ ಗಿರೀಶ್(35) ಕೂಡ ಇದ್ದರು. ಆನೆಯನ್ನು ಕಾಡಿಗಟ್ಟುವ ಸಂದರ್ಭದಲ್ಲಿ ಕಾಡಾನೆ ಗಿರೀಶ್ ಅವರ ಮೇಲೆ ಎರಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಗಿರೀಶ್ ಅವರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

ಗಂಭೀರವಾಗಿ ಗಾಯಗೊಂಡಿದ್ದ ಗಿರೀಶ್ ಕಳೆದ ಹಲವು ವರ್ಷಗಳಿಂದ ಆನೆಕಾಡು ಆರ್ ಆರ್ ಟಿ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

You cannot copy content of this page

Exit mobile version