Home ಬ್ರೇಕಿಂಗ್ ಸುದ್ದಿ ಧಾರ್ಮಿಕ ಭಾವನೆಗೆ ದಕ್ಕೆ ತಂದ ಆರೋಪ ; ಶರ್ಮಿಷ್ಠೆ ಪನೋಲಿಗೆ ಜಾಮೀನು ಮಂಜೂರು

ಧಾರ್ಮಿಕ ಭಾವನೆಗೆ ದಕ್ಕೆ ತಂದ ಆರೋಪ ; ಶರ್ಮಿಷ್ಠೆ ಪನೋಲಿಗೆ ಜಾಮೀನು ಮಂಜೂರು

0

ಇನ್ಸ್ಟಾಗ್ರಾಮ್ ವಿಡಿಯೋದಲ್ಲಿ ನಿರ್ದಿಷ್ಟ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದಲ್ಲಿ ಬಂಧಿತರಾಗಿರುವ ಪುಣೆಯ ಕಾನೂನು ವಿದ್ಯಾರ್ಥಿನಿ ಶರ್ಮಿಷ್ಠೆ ಪನೋಲಿ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ.

ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಉಲ್ಲೇಖಿಸಿ, ವಿಧ್ಯಾರ್ಥಿನಿ ಶರ್ಮಿಷ್ಠೆ ಪನೋಲಿ ನಿರ್ದಿಷ್ಟ ಸಮುದಾಯ ಮತ್ತು ಆ ಸಮುದಾಯಕ್ಕೆ ಸೇರಿದ ಪ್ರಮುಖ ವ್ಯಕ್ತಿಗಳ ವಿರುದ್ಧ ಹರಿಹಾಯ್ದಿದ್ದರು. ಸಧ್ಯ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಜಾಹತ್ ಖಾನ್ ಖಾದ್ರಿ ಎನ್ನುವವರ ದೂರಿನ ಮೇರೆಗೆ ಶರ್ಮಿಷ್ಠ ಪನೋಲಿಯನ್ನು ಮೇ 31ರಂದು ಬಂಧಿಸಲಾಗಿತ್ತು.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಂಧಿತರಾದ ಇನಿಸ್ಟಾಗ್ರಾಂ ಇನ್ಫ್ಲೂಯೆನ್ಸರ್ ಶರ್ಮಿಷ್ಠೆ ಪನೋಲಿಗೆ ಈಗ ಕೊಲ್ಕತ್ತಾ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ವಿಚಾರಣೆ ನಡೆಸಿದ ಕೋಲ್ಕತ್ತಾ ಹೈಕೋರ್ಟ್, ‘ನಮಗೆ ವಾಕ್ ಸ್ವಾತಂತ್ರ್ಯವಿದೆ. ಆದರೆ ಅದರ ಅರ್ಥ ನೀವು ಇತರರ ಭಾವನೆಗಳಿಗೆ ನೋವುಂಟು ಮಾಡಬಹುದು ಎಂದಲ್ಲ. ನಮ್ಮ ದೇಶವು ವೈವಿಧ್ಯತೆಯಿಂದ ತುಂಬಿದೆ. ನಾವು ಜಾಗರೂಕರಾಗಿರಬೇಕು’ ಎಂದು ಎಚ್ಚರಿಸಿ ಮಧ್ಯಂತರ ಜಾಮೀನು ಮಂಜೂರು ಮಾಡಿದೆ ಎಂದು ವರದಿಯಾಗಿದೆ

You cannot copy content of this page

Exit mobile version