Friday, January 30, 2026

ಸತ್ಯ | ನ್ಯಾಯ |ಧರ್ಮ

ರಾಹುಲ್ ಗಾಂಧಿ, ಖರ್ಗೆಯವರನ್ನು ಭೇಟಿಯಾದ ಶಶಿ ತರೂರ್; ವದಂತಿಗಳಿಗೆ ತೆರೆ

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಮತ್ತು ಶಶಿ ತರೂರ್ ನಡುವೆ ಅಂತರ ಹೆಚ್ಚಾಗಿದೆ ಎಂಬ ಟೀಕೆಗಳಿಗೆ ಸ್ವತಃ ಶಶಿ ತರೂರ್ ಅವರೇ ತೆರೆ ಎಳೆದಿದ್ದಾರೆ (ಚೆಕ್ ಇಟ್ಟಿದ್ದಾರೆ). ಗುರುವಾರ ಅವರು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮತ್ತೊಬ್ಬ ಅಗ್ರ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು.

ಸಂಸತ್ ಭವನದಲ್ಲಿರುವ ಖರ್ಗೆ ಅವರ ಚೇಂಬರ್‌ನಲ್ಲಿ ತಾವು ಇಬ್ಬರೂ ನಾಯಕರನ್ನು ಭೇಟಿಯಾಗಿರುವುದಾಗಿ ಶಶಿ ತರೂರ್ ಸೋಶಿಯಲ್ ಮೀಡಿಯಾ ಮೂಲಕ ಬಹಿರಂಗಪಡಿಸಿದ್ದಾರೆ. ಈ ಸಂದರ್ಭದಲ್ಲಿ ಅವರೊಂದಿಗೆ ತೆಗೆಸಿಕೊಂಡ ಫೋಟೋವನ್ನೂ ಹಂಚಿಕೊಂಡಿದ್ದು, ಇಬ್ಬರಿಗೂ ಧನ್ಯವಾದ ತಿಳಿಸಿದ್ದಾರೆ.

ಅನೇಕ ವಿಷಯಗಳ ಬಗ್ಗೆ ಚರ್ಚಿಸಿರುವುದಾಗಿ ಹಾಗೂ ದೇಶಸೇವೆಯ ವಿಷಯದಲ್ಲಿ ಒಟ್ಟಾಗಿ ಸಾಗುತ್ತಿರುವುದಾಗಿ ಶಶಿ ತರೂರ್ ಉಲ್ಲೇಖಿಸಿದ್ದಾರೆ. ಸುಮಾರು 30 ನಿಮಿಷಗಳ ಕಾಲ ಇವರು ಹಲವು ರಾಜಕೀಯ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಸಂಸತ್ ಅಧಿವೇಶನಕ್ಕೆ ಹಾಜರಾಗಲು ಬಂದಿದ್ದ ಸಂದರ್ಭದಲ್ಲಿ ಇಬ್ಬರು ನಾಯಕರನ್ನು ಭೇಟಿಯಾದೆ, ಇದರಲ್ಲಿ ವಿಶೇಷವೇನಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಕಳೆದ ಕೆಲ ಸಮಯದಿಂದ ಶಶಿ ತರೂರ್ ಮತ್ತು ಪಕ್ಷದ ಹೈಕಮಾಂಡ್ ನಡುವೆ ಅಂತರ ಹೆಚ್ಚಾಗಿದೆ ಎಂಬ ಪ್ರಚಾರ ನಡೆದಿತ್ತು. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಸಭೆಗೂ ಶಶಿ ತರೂರ್ ಗೈರುಹಾಜರಾಗಿದ್ದರು. ಇದರಿಂದ ಅವರು ಕಾಂಗ್ರೆಸ್ ಪಕ್ಷದಿಂದ ದೂರವಾಗುತ್ತಿದ್ದಾರೆಯೇ ಎಂಬ ಅನುಮಾನಗಳು ಶುರುವಾಗಿದ್ದವು. ಇದೇ ವಿಷಯವಾಗಿ ಕೆಲವು ಕಾಂಗ್ರೆಸ್ ನಾಯಕರು ಶಶಿ ತರೂರ್ ವಿರುದ್ಧ ಕಿಡಿಕಾರಿದ್ದರು.

ತರೂರ್ ಕಳೆದ 17 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿದಿದ್ದಾರೆ. ಅವರು ಕಾಂಗ್ರೆಸ್ ಪರವಾಗಿ ಕೇರಳದ ತಿರುವನಂತಪುರದಿಂದ ಸಂಸದರಾಗಿ 2009 ರಿಂದ ಸತತವಾಗಿ ಸ್ಪರ್ಧಿಸಿ ಗೆಲ್ಲುತ್ತಿದ್ದಾರೆ. ಆದರೆ, ‘ಆಪರೇಷನ್ ಸಿಂಧೂರ್’ ವಿಷಯದಲ್ಲಿ ಅವರು ಕೇಂದ್ರ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದು ಮತ್ತು ಕಾಂಗ್ರೆಸ್ ಪಕ್ಷವು ಸರ್ಕಾರವನ್ನು ವಿರೋಧಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಇದೀಗ ಈ ವಿವಾದಕ್ಕೆ ತೆರೆ ಎಳೆಯುತ್ತಾ, ಅವರು ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page