Monday, January 12, 2026

ಸತ್ಯ | ನ್ಯಾಯ |ಧರ್ಮ

ಇಂದು ಶಿವಮೂರ್ತಿಗಳು ಜಾಮೀನು ಅರ್ಜಿ ಸಲ್ಲಿಕೆ ಸಾಧ್ಯತೆ

ಮಠದ ಹಾಸ್ಟೆಲ್ ನಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಪೊಲೀಸ್ ಕಸ್ಟಡಿಯಲ್ಲಿರುವ ಶಿವಮೂರ್ತಿಗಳು ಇಂದೂ ಕೋರ್ಟಿಗೆ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

ಈ ಹಿಂದೆ ಪೊಲೀಸ್ ಕಸ್ಟಡಿಯಲ್ಲಿ ಇದ್ದ ಶಿವಮೂರ್ತಿಗಳ ಜಾಮೀನು ಅರ್ಜಿ ವಿಚಾರಣೆಗೂ ಮುನ್ನವೇ ಅನಾರೋಗ್ಯದ ನೆಪವೊಡ್ಡಿ ಆಸ್ಪತ್ರೆಗೆ ದಾಖಲಾಗಿದ್ದರು. ಯಾವುದೇ ವಿಚಾರಣೆ ನಡೆಯದ ಹಿನ್ನೆಲೆಯಲ್ಲಿ ಪೊಲೀಸರು 5 ದಿನಗಳ ನ್ಯಾಯಾಂಗ ಬಂಧನ ವಿಸ್ತರಣೆಗೆ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ತಮ್ಮ ಗಮನಕ್ಕೆ ತರದೇ ಶಿವಮೂರ್ತಿಗಳನ್ನು ಆಸ್ಪತ್ರೆಗೆ ಕೊಂಡೊಯ್ದ ಬಗ್ಗೆ ಕೋರ್ಟ್ ಪೊಲೀಸರನ್ನು ಪ್ರಶ್ನಿಸಿತ್ತು. ನಂತರ ಜಾಮೀನು ಅರ್ಜಿ ವಜಾ ಮಾಡಿ 3 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು.

ಅನಾರೋಗ್ಯದ ನೆಪದಿಂದ ಪೊಲೀಸ್ ವಿಚಾರಣೆಯಿಂದ ದೂರವಿದ್ದ ಶಿವಮೂರ್ತಿಗಳು ನಿನ್ನೆ ರಾತ್ರಿಗೆ ಚಿತ್ರದುರ್ಗದ ಡಿವೈಎಸ್ಪಿ ಕಛೇರಿಗೆ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ ಎನ್ನಲಾಗಿದೆ. ಇಂದೂ ಸಹ ಶಿವಮೂರ್ತಿಗಳ ವಿಚಾರಣೆ ನಡೆಯಲಿದ್ದು ಇದರ ಬೆನ್ನಲ್ಲೇ ಆರೋಪಿ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

ಸಧ್ಯ ಪೋಕ್ಸೊ ಕಾಯ್ದೆ ಮತ್ತು ಅಟ್ರಾಸಿಟಿ ಕಾಯ್ದೆಯ ಅಡಿಯಲ್ಲಿ ಶಿವಮೂರ್ತಿಗಳ ಮೇಲೆ ಪ್ರಕರಣ ದಾಖಲಾಗಿವೆ. ಇವು ಗಂಭೀರ ಪ್ರಕರಣಗಳಾಗಿದ್ದು, ವಿಚಾರಣೆ ನಂತರ ಆರೋಪ ಸಾಭೀತಾದರೆ ಜೈಲು ಶಿಕ್ಷೆ ಕಾಯಂ ಆಗುವ ಸಾಧ್ಯತೆಯಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page