Monday, June 23, 2025

ಸತ್ಯ | ನ್ಯಾಯ |ಧರ್ಮ

ಮುರುಘಾ ಮಠದ ಶಿವಮೂರ್ತಿಗಳ ಜಾಮೀನು ಅರ್ಜಿ ವಿಚಾರಣೆ ನವೆಂಬರ್ 15 ಕ್ಕೆ ಮುಂದೂಡಿಕೆ

ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ನವೆಂಬರ್ 15ಕ್ಕೆ ಮುಂದೂಡಿದೆ. ಈಗಾಗಲೇ ಜಾಮೀನು ಅರ್ಜಿ ಸಲ್ಲಿಕೆಯಾಗಿದ್ದು, ಅದನ್ನು ಪರಿಶೀಲಿಸುವ ಹಿನ್ನೆಲೆಯಲ್ಲಿ ವಿಚಾರಣೆಯನ್ನು ನವೆಂಬರ್ 15 ಕ್ಕೆ ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.

ಶಿವಮೂರ್ತಿಗಳಿಗೆ ಜಾಮೀನು‌ ನೀಡುವ ಸಂಬಂಧ ಈಗಾಗಲೇ ಹೈಕೋರ್ಟ್ ನೀಡಿರುವ ಪ್ರತಿಯನ್ನು ಆರೋಪಿಯ ಪರ ವಕೀಲರಾದ ಸಂದೀಪ್ ಪಾಟೀಲ್ ಶುಕ್ರವಾರ ಮಧ್ಯಾಹ್ನ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದರು.

ಶ್ಯೂರಿಟಿ ಪ್ರತಿಗಳನ್ನು ಪರಿಶೀಲಿಸುವ ಸಂಬಂಧ ನ್ಯಾಯಾಲಯ ವಿಚಾರಣೆಯನ್ನು ನವೆಂಬರ್ 15ಕ್ಕೆ ಮುಂದೂಡಿದೆ. ಶಾಸಕ ಕೆ.ಸಿ.ವಿರೇಂದ್ರ(ಪಪ್ಪಿ) ಅವರ ಸಹೋಧರ ಕೆ.ಸಿ.ನಾಗರಾಜ್ ಹಾಗೂ ಮಧುಸೂದನ್ ಎಂಬುವರಿಂದ ಶ್ಯೂರಿಟಿ ಹಾಕಿದ್ದು, ಇದರೊಟ್ಟಿಗೆ ಎರಡು ಲಕ್ಷ ರೂ. ಬಾಂಡ್ ಸಲ್ಲಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page