Home ದೇಶ ರಸ್ತೆ ಗುಂಡಿಗೆ ಸಿಲುಕಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಕಾರು. ವಿಡಿಯೋ ವೈರಲ್!

ರಸ್ತೆ ಗುಂಡಿಗೆ ಸಿಲುಕಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಕಾರು. ವಿಡಿಯೋ ವೈರಲ್!

0

ರಾಂಚಿ: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ಕಾರು ರಸ್ತೆಯ ನೀರಿನ ಗುಂಡಿಯಲ್ಲಿ ಸಿಲುಕಿಕೊಂಡು ಅವರನ್ನು ಪೇಚಿಗೆ ಸಿಲುಕಿಸಿದ ಘಟನೆ ಜಾರ್ಖಂಡ್‌ ರಾಜ್ಯದಲ್ಲಿ ನಡೆದಿದೆ. ಇದರಿಂದಾಗಿ ಅವರು ಕೆಲ ಹೊತ್ತು ಸ್ಥಳದಲ್ಲೇ ನಿಲ್ಲಬೇಕಾದ ಪರಿಸ್ಥಿತಿ ಉಂಟಾಯಿತು

ಇದರೊಂದಿಗೆ ಶಿವರಾಜ್ ಸಿಂಗ್ ಚೌಹಾಣ್ ಕಾರಿನಿಂದ ಕೆಳಗಿಳಿದಿದ್ದಾರೆ. ಬಳಿಕ ಭದ್ರತಾ ಸಿಬ್ಬಂದಿ ಸ್ಥಳೀಯರ ನೆರವಿನಿಂದ ವಾಹನವನ್ನು ಗುಂಡಿಯಿಂದ ಹೊರಕ್ಕೆ ತಳ್ಳಿದರು. ಈ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಜಾರ್ಖಂಡ್‌ನ ಬಹರ್‌ಗೋರಾಕ್ಕೆ ಚುನಾವಣಾ ಪ್ರಚಾರಕ್ಕಾಗಿ ಬೆಂಗಾವಲು ಪಡೆಯೊಂದಿಗೆ ತೆರಳಿದ್ದರು. ಆದರೆ ಭಾರೀ ಮಳೆಯಿಂದಾಗಿ ಅವರ ಕಾರು ಮಳೆ ನೀರಿನಿಂದ ತುಂಬಿದ ಗುಂಡಿಯಲ್ಲಿ ಸಿಲುಕಿಕೊಂಡಿತು.

ಆದರೆ, ಚಾಲಕ ಎಷ್ಟೇ ಪ್ರಯತ್ನಿಸಿದರೂ ಗುಂಡಿಯಿಂದ ವಾಹನ ಹೊರಬರಲಿಲ್ಲ. ಭದ್ರತಾ ಸಿಬ್ಬಂದಿ ಛತ್ರಿ ಹಿಡಿದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಕಾರಿನಿಂದ ಕೆಳಗಿಳಿಸಿದರು. ಬಳಿಕ ಭದ್ರತಾ ಸಿಬ್ಬಂದಿ ಸ್ಥಳೀಯರ ನೆರವಿನಿಂದ ಕಾರನ್ನು ಗುಂಡಿಯಿಂದ ಹೊರಕ್ಕೆ ತಳ್ಳಿದ್ದಾರೆ. ನಂತರ ಆ ವಾಹನದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಪ್ರಯಾಣ ಮುಂದುವರಿಸಿದರು. ಇದರಿಂದಾಗಿ ಸಾರ್ವಜನಿಕ ಸಭೆ ನಡೆಯುವ ಸ್ಥಳಕ್ಕೆ ಸ್ವಲ್ಪ ತಡವಾಗಿ ತಲುಪಿದರು. ಆದರೆ, ಕೇಂದ್ರ ಸಚಿವ ಚೌಹಾಣ್ ಅವರ ಕಾರು ರಸ್ತೆಯ ಗುಂಡಿಯಲ್ಲಿ ಸಿಲುಕಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

You cannot copy content of this page

Exit mobile version