Home ಬ್ರೇಕಿಂಗ್ ಸುದ್ದಿ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ರಾವಣ್ ಮೇಲೆ ಗುಂಡಿನ ದಾಳಿ ; ಸ್ವಲ್ಪದರಲ್ಲೇ ಪಾರು

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ರಾವಣ್ ಮೇಲೆ ಗುಂಡಿನ ದಾಳಿ ; ಸ್ವಲ್ಪದರಲ್ಲೇ ಪಾರು

0

ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ್ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ ಎಂದು ಉತ್ತರ ಪ್ರದೇಶದ ಪೊಲೀಸರು ತಿಳಿಸಿದ್ದಾರೆ.

“ಚಂದ್ರ ಶೇಖರ್ ಆಜಾದ್ ಅವರ ಬೆಂಗಾವಲು ಪಡೆಗೆ ಅಪರಿಚಿತ ಕಾರಿನಲ್ಲಿ ಬಂದ ಕೆಲವು ಶಸ್ತ್ರಸಜ್ಜಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ಗುಂಡು ಚಂದ್ರಶೇಖರ್ ರಾವಣ್ ಅವರ ಹಿಂಭಾಗಕ್ಕೆ ತಗುಲಿದ್ದು ಸಣ್ಣಪುಟ್ಟ ಗಾಯಗಳನ್ನು ಹೊರತುಪಡಿಸಿ ಅವರು ಆರೋಗ್ಯವಾಗಿದ್ದಾರೆ, ಮತ್ತು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ” ಎಂದು ಉತ್ತರ ಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿ ವಿಪಿನ್ ತಾಡಾ ಹೇಳಿದ್ದಾರೆ.

ಚಂದ್ರಶೇಖರ್ ಆಜಾದ್ ರಾವಣ್ ಅವರ ಕಾರಿನ ಮೇಲೆ ಎದುರಾಳಿಗಳು ಎರಡು ಸುತ್ತು ಗುಂಡುಗಳನ್ನು ಹಾರಿಸಲಾಗಿದೆ. ಮೊದಲ ಬುಲೆಟ್ ಕಾರಿನ ಡೋರ್ ಮೂಲಕ ವಾಹನದ ಸೀಟನ್ನು ಪ್ರವೇಶಿಸಿದೆ. ಎರಡನೇ ಗುಂಡು ಹಿಂಬಾಗಿಲಿಗೆ ತಗುಲಿ, ಸ್ವಲ್ಪದರಲ್ಲೇ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗುಂಡಿನ ದಾಳಿಗೆ ಸಣ್ಣಪುಟ್ಟ ತರಚಿದ ಗಾಯಗಳಾಗಿವೆ ಎಂದು ವರದಿಯಾಗಿದೆ.

ಭೀಮ್ ಆರ್ಮಿ ಮುಖ್ಯಸ್ಥರ ಮೇಲಿನ ಈ ದಾಳಿ ಬಹುಜನ ಮಿಷನ್ ಆಂದೋಲನವನ್ನು ನಿಲ್ಲಿಸುವ ಹೇಡಿತನದ ಕೃತ್ಯವಾಗಿದೆ! ಆರೋಪಿಗಳ ತ್ವರಿತ ಬಂಧನ, ಕಟ್ಟುನಿಟ್ಟಿನ ಕ್ರಮ ಮತ್ತು ಚಂದ್ರಶೇಖರ್ ಆಜಾದ್ ಅವರ ಭದ್ರತೆಗೆ ಭೀಮ್ ಆರ್ಮಿ ಬೇಡಿಕೆ ಇಟ್ಟಿದೆ.

You cannot copy content of this page

Exit mobile version