Tuesday, April 29, 2025

ಸತ್ಯ | ನ್ಯಾಯ |ಧರ್ಮ

ಪಹಲ್ಗಾಮ್ ದಾಳಿಯಲ್ಲಿ ಉಗ್ರರಿಗೆ ತಲ್ವಾರ್ ತೋರಿಸಬೇಕಿತ್ತು : ಕಲ್ಲಡ್ಕ ಪ್ರಭಾಕರ ಭಟ್

ಪಹಲ್ಗಾಮ್ ಉಗ್ರ ದಾಳಿಯಲ್ಲಿ ಭಯೋತ್ಪಾದಕರಿಗೆ ತಲ್ವಾರ್ ತೋರಿಸಿದರೆ ಅದರ ಕಥೆಯೇ ಬೇರೆ ಇರುತ್ತಿತ್ತು ಎಂದು ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲಿ ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್ ಬಂದೂಕು ಹಿಡಿದು ಬಂದ ಭಯೋತ್ಪಾದಕರಿಗೆ ತಲ್ವಾರ್ ತೋರಿಸಬೇಕು ಎಂದು ಹೇಳಿದ್ದಾರೆ.

ಹೆಣ್ಣುಮಕ್ಕಳು ವ್ಯಾನಿಟಿ ಬ್ಯಾಗ್​​ನಲ್ಲಿ ಪೌಡರ್, ಬಾಚಣಿಗೆ ಜೊತೆಗೆ ಚಾಕು ಇಟ್ಟುಕೊಳ್ಳಿ. 6 ಇಂಚಿನ ಚಾಕು ಚೂರಿ ಇಟ್ಟುಕೊಳ್ಳಲು ಯಾವುದೇ ಲೈಸೆನ್ಸ್ ಬೇಡ. ಸಂಜೆ ಮೇಲೆ ಓಡಾಡಿದ್ರೆ ನಿಮ್ಮ ಮೇಲೆ ಖಂಡಿತಾ ಅಕ್ರಮಣ ಮಾಡುತ್ತಾರೆ. ಆಕ್ರಮಣ ಮಾಡಬೇಡಿ ಎಂದು ಬೇಡಿಕೊಂಡ್ರೆ ನಿಮ್ಮ ಕಥೆ ಮುಗಿಯಿತು. ಅದರ ಬದಲು ಚೂರಿ ತೋರಿಸಿ, ”ಬಾ” ಎಂದು ಸವಾಲು ಹಾಕಿದರೆ ಸಾಕು ಹೆದರಿ ಓಡುತ್ತಾರೆ ಎಂದು ಅವರು ಹೇಳಿದರು.

ಮುಸ್ಲಿಮರು ಹೊಡಿತಾರೆ ಹಿಂದೂಗಳು ಓಡುತ್ತಾರೆ ಅಂತ ಇತ್ತು. ಈಗ ಹಿಂದೂ ತಿರುಗಿ ಬಿದ್ದಿದ್ದಾನೆ ಇನ್ನು ಹೊಡೆಯಲು ಶುರು ಮಾಡಿಲ್ಲ. ಮನೆಯಲ್ಲಿ ಒಂದು ತಲ್ವಾರ್ ಇಟ್ಕೊಳ್ಳಿ ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ನೀಡಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page