Monday, December 2, 2024

ಸತ್ಯ | ನ್ಯಾಯ |ಧರ್ಮ

ಬಣ ಬಡಿದಾಟ: ಬಿಜೆಪಿಯಿಂದ ಶಾಸಕ ಯತ್ನಾಳ್ ಗೆ ಶೋಕಾಸ್ ನೋಟಿಸ್

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರರ ನಡುವೆ ಬಣ ಬಡಿದಾಟದಲ್ಲಿ ಈಗ ಯತ್ನಾಳ್ ಗೆ ಬಿಜೆಪಿ ಶಾಕ್ ನೀಡಿದೆ. ಬಿಜೆಪಿ ಹೈಕಮಾಂಡ್ ಈಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಇಬ್ಬರ ನಡುವಿನ ಬಣ ಬಡಿದಾಟ ಕಳೆದ ಕೆಲವು ದಿನಗಳಿಂದ ತೀವ್ರ ತಾರಕಕ್ಕೆ ಏರಿತ್ತು. ಇದೀಗ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ನಿಲುವು ಹೊಂದಿದ್ದ ಹಿನ್ನೆಲೆಯಲ್ಲಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿಯು ಶೋಕಾಶ್ ನೋಟಿಸ್ ಜಾರಿ ಮಾಡಿದೆ.

ಕಳೆದೆರಡು ದಿನಗಳ ಹಿಂದೆ ಪ್ರಹ್ಲಾದ ಜೋಷಿ ನೇತೃತ್ವದಲ್ಲಿ ದೆಹಲಿ ಹೈಕಮಾಂಡ್ ಗೆ ಯತ್ನಾಳ್ ನಡೆ ಬಗ್ಗೆ ದೂರು ನೀಡಲಾಗಿತ್ತು. ಯತ್ನಾಳ್ ನಡೆ ಪಕ್ಷಕ್ಕೆ ಇನ್ನಷ್ಟು ಮುಜುಗರ ತರುವ ಸಾಧ್ಯತೆ ಇದೆ ಎನ್ನಲಾಗಿತ್ತು. ಇದರ ಬೆನ್ನಲ್ಲೇ ಶಾಸಕ ಯತ್ನಾಳ್ ಗೆ ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿಯು ಶೋಕಾಶ್ ನೋಟಿಸ್ ಜಾರಿ ಮಾಡಿದೆ.

ಅಕಸ್ಮಾತ್ ಯತ್ನಾಳ್ ಇದೇ ಚಾಳಿ ಮುಂದುವರೆಸಿ ಬಣ ಬಡಿದಾಟ ಮುಂದುವರೆದರೆ, ಉಚ್ಛಾಟನೆ ಬಿಸಿ ಕೂಡ ತಟ್ಟಲಿದೆ ಎಂದು ಬಿಜೆಪಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page