Home ರಾಜ್ಯ ಮಣಿಪಾಲ್ ಆಸ್ಪತ್ರೆಗೆ ಸಿದ್ದರಾಮಯ್ಯ ದಾಖಲು!

ಮಣಿಪಾಲ್ ಆಸ್ಪತ್ರೆಗೆ ಸಿದ್ದರಾಮಯ್ಯ ದಾಖಲು!

0

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು, ಶುಕ್ರವಾರ ಸಣ್ಣ ಶಸ್ತ್ರಚಿಕಿತ್ಸೆಗೋಸ್ಕರ ಬೆಂಗಳೂರಿನ ಹೆಚ್ ಎಎಲ್ ಏರ್ ಪೋರ್ಟ್ ರಸ್ತೆಯಲ್ಲಿರುವ  ಮಣಿಪಾಲ್ ಆಸ್ಪತ್ರೆಯಲ್ಲಿ  ಇಂದು ಬೆಳಗ್ಗೆ ದಾಖಲಾಗಿದ್ದಾರೆ.

ಈ ಕುರಿತು ಮಾಧ್ಯಮದವರಿಗೆ ಆಸ್ಪತ್ರೆಯಲ್ಲಿನ ವೈದ್ಯರು ಮಾಹಿತಿ ನೀಡಿದ್ದು, ಸಿದ್ದರಾಮಯ್ಯನವರು ಹೊರರೋಗಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರು ಈ ಮೊದಲು ಮೂಲವ್ಯಾಧಿ ಸಮಸ್ಯೆಗೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದರು. ಈಗ ಅದೇ ಸಮಸ್ಯೆ ಮತ್ತೆ ಮರಳಿದ್ದು, ಅದಕ್ಕಾಗಿ ಅವರು ಸಣ್ಣ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ಕಾರಣ, ಶಸ್ತ್ರಚಿಕಿತ್ಸೆ ನಂತರ ನಾಲ್ಕು ದಿನಗಲ ಕಾಲ ಸಿದ್ದರಾಮಯ್ಯನವರು ವಿಶ್ರಾಂತಿ ಪಡೆಯಲಿದ್ದಾರೆ. ಈ ಸಂದರ್ಭದಲ್ಲಿ ಸಾರ್ವಜನಿಕರ ಭೇಟಿಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಲಾಗಿದೆ.

You cannot copy content of this page

Exit mobile version