Home ರಾಜ್ಯ ಸಿದ್ದರಾಮಯ್ಯ, ಡಿಕೆಶಿ ಜೊತೆ 8 ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಸಿದ್ದರಾಮಯ್ಯ, ಡಿಕೆಶಿ ಜೊತೆ 8 ಸಚಿವರಿಂದ ಪ್ರಮಾಣ ವಚನ ಸ್ವೀಕಾರ

0

ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು (ಮೇ 20) ಪ್ರಮಾಣವಚನ ಸ್ವೀಕರಿಸಲಿದ್ದು, ಅವರೊಂದಿಗೆ ಇನ್ನು ಎಂಟು ಜನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ

ಹೌದು, ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿವಿಧಾನ ಬೋಧಿಸಲಿದ್ದಾರೆ. 28 ಸಚಿವರ ಆಯ್ಕೆಗೆ ಭಾರೀ ಕಸರತ್ತು ನಡೆಸಲಾಯಿತು. ಆದರೆ, ಅಂತಿಮವಾಗಿ ಮೊದಲ ಸಚಿವ ಸಂಪುಟಕ್ಕೆ ಕೇವಲ ಎಂಟು ಮಂದಿಯನ್ನು ಮಾತ್ರ ಆಯ್ಕೆ ಮಾಡಲಾಗಿದೆ. ಸದ್ಯ ಆರು ಸಮುದಾಯಕ್ಕೆ ಅವಕಾಶ ನೀಡಲಾಗಿದೆ.

ಎಂಟು ಸಚಿವರು ಯಾರು?

  • ಎಂ. ಬಿ. ಪಾಟೀಲ್ (ಲಿಂಗಾಯತ)
  • ಡಾ. ಜಿ. ಪರಮೇಶ್ವರ್ (ದಲಿತ ಬಲ)
  • ಪ್ರಿಯಾಂಕ ಖರ್ಗೆ (ದಲಿತ ಬಲ)
  • ಕೆ.ಎಚ್. ಮುನಿಯಪ್ಪ (ದಲಿತ ಎಡ)
  • ಕೆ. ಜೆ. ಜಾರ್ಜ್ (ಕ್ರಿಶ್ಚಿಯನ್)
  • ಸತೀಶ್ ಜಾರಕಿಹೊಳಿ (ಪರಿಶಿಷ್ಠ ಪಂಗಡ) (ವಾಲ್ಮಿಕಿ)
  • ಜಮೀರ್ ಅಹ್ಮದ್ ಖಾನ್ (ಮುಸ್ಲಿಂ)
  • ರಾಮಲಿಂಗಾ ರೆಡ್ಡಿ (ರೆಡ್ಡಿ ಸಮುದಾಯ)

ಎನ್ಡಿಎ ಮೈತ್ರಿಕೂಟದ ಹೊರತಾದ ರಾಜ್ಯದ ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆಯಿದೆ.

You cannot copy content of this page

Exit mobile version