Home ರಾಜ್ಯ ಇಂದೇ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಇಂದೇ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ : ಸಿಎಂ ಸಿದ್ದರಾಮಯ್ಯ ಘೋಷಣೆ

0

ಕರ್ನಾಟಕದ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ರಾಜ್ಯದ ನೂತನ ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್‌ ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಇಂದೇ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದಿದ್ದಾರೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಸಮಾರಂಭದಲ್ಲಿ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ,  ಇಂದೇ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ಘೋಷಿಸಿದ್ದಾರೆ. ಕರ್ನಾಟಕದ ಜನರ ಆಶೀರ್ವಾದಿಂದ ನಮ್ಮ ಸರ್ಕಾರ ಬಂದಿದೆ. ರಾಹುಲ್, ಖರ್ಗೆ, ಪ್ರಿಯಾಂಕಾ ಸೇರಿ ಅನೇಕರು ಪ್ರಚಾರ ಮಾಡಿದ್ದರು. ಕಾಂಗ್ರೆಸ್​ ಪಕ್ಷದ ಪರ ಪ್ರಚಾರ ಮಾಡಿದ ಎಲ್ಲರಿಗೂ ಧನ್ಯವಾದ. ಸಾಹಿತಿಗಳು, ಚಿಂತಕರು, ಸಂಘಟನೆಗಳಿಗೂ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿರುವ ಜಯ ರಾಜ್ಯದ ಜನರಿಗೆ ಸಿಕ್ಕಿರುವ ಗೆಲುವು. ಜನರ ಆಶೀರ್ವಾದದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ರಾಜ್ಯದಲ್ಲಿ ಪ್ರಚಾರ ಆರಂಭವಾಗಿದ್ದು, ರಾಹುಲ್ ಗಾಂಧಿ ಅವರ ಭಾರತ ಜೋಡೋ ಯಾತ್ರೆ ಮೂಲಕ. ಇದರ ಜತೆಗೆ ರಾಹುಲ್ ಗಾಂಧಿ, ಖರ್ಗೆ, ಪ್ರಿಯಾಂಕಾ ಗಾಂಧಿ ಹಾಗೂ ಅನೇಕ ನಾಯಕರು ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿದ್ದು ಎಲ್ಲರಿಗೂ ಹೃದಯಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ. ಇದರ ಜತೆಗೆ ಸಾಹಿತಿಗಳು, ಚಿಂತಕರು, ಸಂಘಟನೆ ನಾಯಕರುಗಳು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದು, ಧನ್ಯವಾದ ಅರ್ಪಿಸುತ್ತೇನೆ. ರಾಜ್ಯದ ಯುವಕರು, ರೈತರು, ಕಾರ್ಮಿಕರು, ಮಹಿಳೆಯರಿಗೂ ಧನ್ಯವಾದ ತಿಳಿಸುತ್ತೇನೆ.

ಈ ಕಾರ್ಯಕ್ರಮಕ್ಕೆ ಬಂದು ನಮಗೆ ಶುಭ ಕೋರಿ ಆಶೀರ್ವಾದ ಮಾಡಲು ಬಂದಿರುವ ಎಲ್ಲಾ ಪ್ರಮುಖ ನಾಯಕರು ಹಾಗೂ ಗಣ್ಯರಿಗೆ ಧನ್ಯವಾದ ತಿಳಿಸುತ್ತೇನೆ. ನಾವು ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡುತ್ತೇವೆ. ಜನ ಬದಲಾವಣೆ ಬಯಸಿದ್ದು, ನಾವು ಜನರಿಗೆ ಕೊಟ್ಟಿರುವ ಭರವಸೆ, ಗ್ಯಾರಂಟಿ ಯೋಜನೆಗಳನ್ನು ಇವತ್ತೇ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿ ಆದೇಶ ಹೊರಡಿಸಿ ಜಾರಿಗೆ ತರುತ್ತೇವೆ. ಇದು ಕನ್ನಡನಾಡಿನ ಜನತೆಗೆ ನೂತನ ಸರ್ಕಾರದ ಕೊಡುಗೆಯಾಗಿದೆ. ನಮ್ಮ ಪ್ರಮಾಳಿಕೆಯಲ್ಲಿ ಕೊಟ್ಟಿರುವ ಎಲ್ಲಾ ಕಾರ್ಯಕ್ರಮಗಳನ್ನು ಮುಂದಿನ ಐದು ವರ್ಷಗಳಲ್ಲಿ ಈಡೇರಿಸುತ್ತೇವೆ.  

ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೆಲ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ಪುದುಚೆರಿ ಮುಖ್ಯಮಂತ್ರಿ ಎನ್‌. ರಂಗಸ್ವಾಮಿ ಸೇರಿದಂತೆ ಹಲವು ಭಾಗವಹಿಸಿದ್ದಾರೆ.

You cannot copy content of this page

Exit mobile version