Home ಬ್ರೇಕಿಂಗ್ ಸುದ್ದಿ ರಾಜ್ಯದ 48 ಕಡೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ : ಭ್ರಷ್ಟ ಅಧಿಕಾರಿಗಳು ಬಲೆಗೆ

ರಾಜ್ಯದ 48 ಕಡೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ : ಭ್ರಷ್ಟ ಅಧಿಕಾರಿಗಳು ಬಲೆಗೆ

0

ಗುರುವಾರ ಬೆಳ್ಳಂಬೆಳಗ್ಗೆ ರಾಜ್ಯದ 48 ಕಡೆಗಳಲ್ಲಿ ಸುಮಾರು 200 ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ 10 ಕಡೆ ಸೇರಿದಂತೆ ದಾವಣಗೆರೆ, ಚಿತ್ರದುರ್ಗ, ಮಡಿಕೇರಿ, ರಾಮನಗರ, ಕೊಪ್ಪಳ, ಬೀದರ್​ನಲ್ಲಿ ಈ ದಾಳಿ ನಡೆದಿದ್ದು, ಕೋಟ್ಯಂತರ ಮೌಲ್ಯದ ಹಣ, ಬಂಗಾರ, ಆಸ್ತಿಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ದಾವಣಗೆರೆ ಜಿಲ್ಲೆಯ ಹೊಳಲ್ಕೆರೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಮನೆ ಮೇಲೆ, ದಾವಣಗೆರೆ ಜಯನಗರದ ಮಹೇಶ್ ಗೌಡ ಮನೆ, ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅರಣ್ಯ ಇಲಾಖೆ ಅಧಿಕಾರಿ ಆರ್.ಎಫ್.ಒ ಸತೀಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕೊಪ್ಪಳದ ನಿರ್ಮಿತಿ ಕೇಂದ್ರದ ಕಚೇರಿ ವ್ಯವಸ್ಥಾಪಕ‌ ಮಂಜುನಾಥ್ ಅವರ ಬನ್ನಿಕೊಪ್ಪ ಮನೆ ಹಾಗೂ ಕಚೇರಿ ಮೇಲೆ‌ ಲೋಕಾಯುಕ್ತ ದಾಳಿ ನಡೆದಿದೆ.

ಮಡಿಕೇರಿ ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಅವರ ಮನೆಯ ಮೇಲೂ ದಾಳಿಯಾಗಿದೆ. ಆದಾಯಕ್ಕೆ ಮೀರಿದ ಆಸ್ತಿ ಗಳಿಕೆ ಆರೋಪದ ಮೇಲೆ ಅಪಾರ ಪ್ರಮಾಣದ ಹಣ, ಬಂಗಾರ ಹಾಗೂ ಆಸ್ತಿಪಾಸ್ತಿ ವಶಕ್ಕೆ ಪಡೆಯಲಾಗಿದೆ.

ಬೀದರ್ ಜಿಲ್ಲೆಯ ಚಿಟಗುಪ್ಪ ಠಾಣೆಯಲ್ಲಿ ಹೆಡ್​ ಕಾನ್ಸ್​ಟೇಬಲ್​ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಹುಮ್ನಾಬಾದ್ ಟೀಚರ್ ಕಾಲೋನಿ, ಹುಚಕನಳ್ಳಿ ಗ್ರಾಮದ ಮನೆ ಮೇಲೆ ಡಿವೈಎಸ್​​ಪಿ ಓಲೇಕಾರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಕನಕಪುರದಲ್ಲಿ ಇರುವ ಬಿಬಿಎಂಪಿ‌ ಅಧಿಕಾರಿ ಮನೆ ಮೇಲೆ‌ ಲೋಕಾಯುಕ್ತ ದಾಳಿ ನಡೆದಿದೆ. ಕನಕಪುರ ತಾಲೂಕಿನ ಶಿವನಹಳ್ಳಿ ಗ್ರಾಮದಲ್ಲಿರುವ ಮನೆ ಮೇಲೆ ದಾಳಿಯಾಗಿದ್ದು, ಮನೆ ಜೊತೆ ಫಾರಂ ಹೌಸ್ ಅನ್ನೂ ಸೀಝ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಕಚೇರಿಗಳಲ್ಲೂ ಈ ದಿನ ದಾಳಿ ಆಗಬಹುದು ಎಂದು ನಿರೀಕ್ಷಿಸಲಾಗಿದೆ.

You cannot copy content of this page

Exit mobile version