Home ದೇಶ ರಾಮ ಮಂದಿರ ದೇಣಿಗೆ ಅಕ್ರಮ ವಿವಾದ: ಸರ್ಕಾರಕ್ಕೆ 150 ಪುಟಗಳ ವರದಿ ಸಲ್ಲಿಸಿದ ಎಸ್‌ಐಟಿ; ಎಫ್‌ಐಆರ್...

ರಾಮ ಮಂದಿರ ದೇಣಿಗೆ ಅಕ್ರಮ ವಿವಾದ: ಸರ್ಕಾರಕ್ಕೆ 150 ಪುಟಗಳ ವರದಿ ಸಲ್ಲಿಸಿದ ಎಸ್‌ಐಟಿ; ಎಫ್‌ಐಆರ್ ದಾಖಲಿಸಲು ಶಿಫಾರಸು!

0

ಲಕ್ನೋ: ಅಯೋಧ್ಯೆಯ ರಾಮ ಮಂದಿರದ ಕಾಣಿಕೆ ಮತ್ತು ದೇಣಿಗೆ ಹಣದ ಅಕ್ರಮಗಳಿಗೆ ಸಂಬಂಧಿಸಿದ ವಿವಾದದಲ್ಲಿ ವಿಶೇಷ ತನಿಖಾ ತಂಡವು ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಸಮಗ್ರ ತನಿಖಾ ವರದಿಯನ್ನು ಸಲ್ಲಿಸಿದೆ.

ಈ ಹಗರಣಕ್ಕೆ ಸಂಬಂಧಿಸಿದಂತೆ ತಕ್ಷಣವೇ ಅಧಿಕೃತ ಎಫ್‌ಐಆರ್ ದಾಖಲಿಸಬೇಕು, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅನ್ನು ಪುನರ್ರಚಿಸಬೇಕು ಮತ್ತು ಮಂದಿರದ ಸಂಪೂರ್ಣ ಆಡಳಿತ ಉಸ್ತುವಾರಿಗಾಗಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಒಬ್ಬರು ಹಿರಿಯ ಅಧಿಕಾರಿಯನ್ನು ನೇಮಕ ಮಾಡಬೇಕು ಎಂದು ಎಸ್‌ಐಟಿ ತನ್ನ ವರದಿಯಲ್ಲಿ ಪ್ರಮುಖವಾಗಿ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಸದ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿರುವ ಈ 150 ಪುಟಗಳ ವರದಿಯು ಕೇವಲ ಪ್ರಾಥಮಿಕ ವರದಿಯಾಗಿದ್ದು, ಪ್ರಕರಣದ ಆಳವಾದ ಮತ್ತು ಮುಂದಿನ ಹಂತದ ತನಿಖೆಗಾಗಿ ತನಗೆ ಇನ್ನು ಕೆಲವು ದಿನಗಳ ಕಾಲಾವಕಾಶ ಬೇಕು ಎಂದು ತನಿಖಾ ತಂಡವು ಸರ್ಕಾರದ ಬಳಿ ವಿನಂತಿಸಿದೆ.

You cannot copy content of this page

Exit mobile version