ಮುಂಬೈ: ನವೆಂಬರ್ 23 ರಿಂದ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ನಡೆಯಲಿರುವ ಐದು ಪಂದ್ಯಗಳ ಟಿ 20 ಸರಣಿಯಲ್ಲಿ ನಂಬರ್ ಒನ್ ಟಿ20 ಬ್ಯಾಟರ್ ಸೂರ್ಯಕುಮಾರ್ ಯಾದವ್ ಭಾರತವನ್ನು ಮುನ್ನಡೆಸಲಿದ್ದಾರೆ.
“ಪುರುಷರ ಆಯ್ಕೆ ಸಮಿತಿಯು ವಿಶಾಖಪಟ್ಟಣದಲ್ಲಿ ನವೆಂಬರ್ 23, 2023ರಿಂದ ಆಸ್ಟ್ರೇಲಿಯಾ ವಿರುದ್ಧದ ಮುಂಬರುವ 5 ಪಂದ್ಯಗಳ T20 ಸರಣಿಗೆ ತಂಡವನ್ನು ಪ್ರಕಟಿಸಿದೆ” ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹೇಳಿಕೆ ತಿಳಿಸಿದೆ.
ಎರಡನೇ T20 ನವೆಂಬರ್ 26ರಂದು ತಿರುವನಂತಪುರಂನಲ್ಲಿ ಮತ್ತು ಮೂರನೇ ಪಂದ್ಯ ನವೆಂಬರ್ 28ರಂದು ಗುವಾಹಟಿಯಲ್ಲಿ ನಡೆಯಲಿದೆ. ನಾಲ್ಕನೇ ಪಂದ್ಯ ಡಿಸೆಂಬರ್ 1ರಂದು ರಾಯ್ಪುರದಲ್ಲಿ ನಡೆಯಲಿದ್ದು, ಐದನೇ ಮತ್ತು ಅಂತಿಮ ಪಂದ್ಯ ಡಿಸೆಂಬರ್ 3ರಂದು ಬೆಂಗಳೂರಿನಲ್ಲಿ ನಡೆಯಲಿದೆ.
ಈ ವರ್ಷ ಹಲವು ಸರಣಿಗಳಲ್ಲಿ T20 ಗಳಲ್ಲಿ ಮೆನ್ ಇನ್ ಬ್ಲೂ ತಂಡವನ್ನು ಮುನ್ನಡೆಸಿದ ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಬಾಂಗ್ಲಾದೇಶ ವಿರುದ್ಧದ ಕ್ರಿಕೆಟ್ ವಿಶ್ವಕಪ್ ಲೀಗ್ ಹಂತದ ಪಂದ್ಯದ ವೇಳೆ ಪಾದದ ಗಾಯದಿಂದಾಗಿ ತಪ್ಪಿಸಿಕೊಂಡಿದ್ದರು.
ಶ್ರೇಯಸ್ ಅಯ್ಯರ್ ರಾಯ್ಪುರ ಮತ್ತು ಬೆಂಗಳೂರಿನಲ್ಲಿ ನಡೆಯಲಿರುವ ಕೊನೆಯ ಎರಡು ಟಿ20ಐಗಳಿಗೆ ಉಪನಾಯಕನಾಗಿ ತಂಡವನ್ನು ಸೇರಿಕೊಳ್ಳಲಿದ್ದಾರೆ. ಮೊದಲ ಮೂರು ಟಿ20ಐಗಳಿಗೆ ರುತುರಾಜ್ ಗಾಯಕ್ವಾಡ್ ಅವರು ಉಪನಾಯಕನಾಗಿರಲಿದ್ದಾರೆ.
ಸಂಜು ಸ್ಯಾಮ್ಸನ್ ತಂಡದಲ್ಲಿ ಸ್ಥಾನ ಪಡೆದಿಲ್ಲ. ಹ್ಯಾಂಗ್ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ನಲ್ಲಿ ಭಾರತದ ಚಿನ್ನದ ಪದಕ ವಿಜೇತ ತಂಡದ ಭಾಗವಾಗಿದ್ದ ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್ ಮತ್ತು ಜಿತೇಶ್ ಶರ್ಮಾ ಸಹ ತಂಡದಲ್ಲಿದ್ದಾರೆ.
ಈ ವರ್ಷ ಕ್ರಿಕೆಟ್ ವಿಶ್ವಕಪ್ನಲ್ಲಿ ಆಡಿದ ಸೂರ್ಯಕುಮಾರ್, ಶ್ರೇಯಸ್, ಇಶಾನ್ ಕಿಶನ್ ಮತ್ತು ವೇಗಿ ಪ್ರಸಿದ್ಧ್ ಕೃಷ್ಣ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ತಂಡದಲ್ಲಿಲ್ಲ.
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (WK), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್.