ಕಾಸರಗೋಡು : ಸ್ನಾನಕ್ಕೆಂದು ಹೋದ ಇಬ್ಬರು ಯುವಕರು ಹೊಳೆಯಲ್ಲಿ ನೀರುಪಾಲಾಗಿದ್ದು ನಡುರಾತ್ರಿ ಮೃತದೇಹ ಪತ್ತೆಯಾಗಿರುವ ಘಟನೆ ಬುಧವಾರ ರಾತ್ರಿ ಕಾಸರಗೋಡಿನ ಪಯಸ್ವಿನಿ ಹೊಳೆಯ ಕರಿಚ್ಚೇರಿಯಲ್ಲಿ ನಡೆದಿದೆ.
ಕೊಲ್ಲಂ ನ ವಿಜಿತ್(23) ಮತ್ತು ತಿರುವನಂತಪುರದ ರಂಜು(24) ಎಂಬ ಇಬ್ಬರು ಯುವಕರು ಬುಧವಾರ ಸಂಜೆ ಸುಮಾರು 4 ಗಂಟೆಗೆ ಪಯಸ್ವಿನಿ ಹೊಳೆಯ ಬೇಡಡ್ಕ ತೂಗು ಸೇತುವೆ ಬಳಿ ಸ್ನೇಹಿತರ ಜೊತೆ ಸ್ನಾನಕ್ಕೆಂದು ಹೊಳೆಗೆ ಇಳಿದಿದ್ದಾರೆ. ಈ ವೇಳೆ ಇಬ್ಬರು ನೀರು ಪಾಲಾಗಿದ್ದು ಘಟನೆ ಕುರಿತು ಅಲ್ಲಿನ ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೋಲೀಸರು ಅಗ್ನಿಶಾಮಕದಳ, ಅಲ್ಲಿನ ಸ್ಥಳೀಯರ ಸಹಕಾರದೊಂದಿಗೆ ತೀವ್ರ ಶೋಧ ಕಾರ್ಯ ನಡೆಸಿದ್ದು, ರಾತ್ರಿ 11 ಗಂಟೆಯ ಸುಮಾರಿಗೆ ಮೃತ ದೇಹಗಳು ಪತ್ತೆಯಾಗಿವೆ ಎಂದು ಅಲ್ಲಿನ ಬೇಡಡ್ಕ ಪೋಲೀಸರು ತಿಳಿಸಿದ್ದಾರೆ.
ವಿಜಿತ್ ಮತ್ತು ರಂಜುವಿನ ದೇಹಗಳನ್ನು ಅಲ್ಲಿನ ಪೋಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ನಂತರ ಮೃತದೇಹಗಳನ್ನು ಅವರವರ ಸಂಬಂಧಿಕರಿಗೆ ಒಪ್ಪಿಸಿದ್ದಾರೆ.
🔸 ಪೀಪಲ್ ಗ್ರೂಪ್ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo
ಇದನ್ನು ನೋಡಿ : ಆಲ್ಬರ್ಟ್ ಐನ್ಸ್ಟಿನ್ ಮಹಾತ್ಮ ಗಾಂಧಿಯವರ ಅಭಿಮಾನಿಯಾಗಿದ್ದರು : Albert Einstein was the fan of Gandhi
E=MC² ಸೂತ್ರವನ್ನು ಕಂಡುಹಿಡಿದ ಆಲ್ಬರ್ಟ್ ಐನ್ಸ್ಟಿನ್ ಮಹಾತ್ಮ ಗಾಂಧಿಯವರ ಅಭಿಮಾನಿಯಾಗಿದ್ದರು ಎಂಬುದು ನಿಮಗೆ ಗೊತ್ತೆ? ಪ್ರಖ್ಯಾತ ವಾಗ್ಮಿ ನಿಕೇತ್ ರಾಜ್ ಮೌರ್ಯ ಅವರ ಮಾತುಗಳನ್ನು ಕೇಳಿಸಿಕೊಳ್ಳಿ.