ಬಜ್ಪೆ: ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ತಾಯಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಹತ್ಯೆಗೈದ ಆಘಾತಕಾರಿ ಘಟನೆಯೊಂದರಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಅಕ್ಟೋಬರ್ 26ರಂದು ಮೂಲ್ಕಿ ತಾಲೂಕಿನ ಕೊಂಡೇಲ ಗ್ರಾಮದಲ್ಲಿ ಈ ಪ್ರಕರಣ ನಡೆದಿದ್ದು, ಘಟನೆ ಮೂರು ದಿನಗಳ ನಂತರ ಸಂತ್ರಸ್ತೆಯ ಮನೆಯಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದಾಗ ಬೆಳಕಿಗೆ ಬಂದಿದೆ.
ಕೊಲೆಯಾದವರನ್ನು ರತ್ನಾ ಶೆಟ್ಟಿ (62) ಎಂದು ಗುರುತಿಸಲಾಗಿದ್ದು, ಆರೋಪಿ ಪುತ್ರ ರವಿರಾಜ್ ಶೆಟ್ಟಿ ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ, ಆರೋಪಿ ಭೀಕರ ಕೃತ್ಯಗಳ ನಂತರ, ಮನೆಗೆ ಬೀಗ ಹಾಕಿ ಪರಾರಿಯಾಗಿದ್ದ.
ಸ್ಥಳೀಯ ಬಜ್ಪೆ ಠಾಣಾ ಸಿಬ್ಬಂದಿ ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಅಕ್ಟೋಬರ್ 26ರಂದು ರಾತ್ರಿ ತನ್ನ ತಾಯಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಆಕೆ ವಿರೋಧಿಸಿದಾಗ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.
ಮುಂದಿನ ತನಿಖೆ ಪ್ರಗತಿಯಲ್ಲಿದೆ.