Sunday, June 8, 2025

ಸತ್ಯ | ನ್ಯಾಯ |ಧರ್ಮ

RSS, BJP ಕುರಿತಾದ ರಾಹುಲ್‌ ಹೇಳಿಕೆಗಳನ್ನು ಕಡತಗಳಿಂದ ತೆಗೆದು ಹಾಕಿಸಿದ ಸ್ಪೀಕರ್

ಬಿಜೆಪಿ ಮತ್ತು ಆರೆಸ್ಸೆಸ್ ಹಿಂದೂಗಳೆಂದು ಹೇಳಿಕೊಂಡು ಹಿಂದೂಗಳ ಭಾವನೆಗಳಿಗೆ ವಿರುದ್ಧವಾಗಿ ಹಿಂಸಾಚಾರ ಮತ್ತು ಜನರನ್ನು ದಾರಿ ತಪ್ಪಿಸು ವ ಕಾರ್ಯಗಳಲ್ಲಿ ತೊಡಗಿಕೊಂಡಿವೆ ಎಂದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಸಂಸತ್ತಿನ ದಾಖಲೆಗಳಿಂದ ಅಳಿಸಲಾಗಿದೆ.

ಇದೇ ತಿಂಗಳ 1ರಂದು ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ರಾಹುಲ್ ವಾಗ್ದಾಳಿ ನಡೆಸಿದರು. ಅವು ಜನರನ್ನು ದಾರಿ ತಪ್ಪಿಸುತ್ತಿವೆ ಎಂದು ಟೀಕಿಸಿದ್ದರು. ಅಗ್ನಿವೀರ್ ಯೋಜನೆಯ ಮೂಲಕ ಸೈನಿಕರನ್ನು ಅವಮಾನಿಸುತ್ತಿರುವ ರೀತಿ, ಅಲ್ಪಸಂಖ್ಯಾತರ ಮೇಲಿನ ದಾಳಿ ಮತ್ತು ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ರಾಹುಲ್ ಅತ್ಯಂತ ಪರಿಣಾಮಕಾರಿಯಾಗಿ ಪ್ರಸ್ತಾಪಿಸಿದರು. ದೇಶಾದ್ಯಂತ ಇವುಗಳ ಕುರಿತು ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ದಾಖಲೆಗಳಿಂದ ಈ ಭಾಗಗಳನ್ನು ಅಳಿಸಿ ಹಾಕಿರುವ ಬಗ್ಗೆ ವ್ಯಾಪಕ ಅಸಮಾಧಾನ ವ್ಯಕ್ತವಾಗಿದೆ. ರಾಹುಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಬಿಜೆಪಿ ನೀಡಿರುವ ದೂರಿನ ಮೇರೆಗೆ ಕ್ರಮ ಕೈಗೊಂಡಿರುವುದು ಗಮನಾರ್ಹ.

ರಾಹುಲ್ ಅಚ್ಚರಿ

ತಮ್ಮ ಭಾಷಣದ ಟೀಕೆಗಳನ್ನು ದಾಖಲೆಗಳಿಂದ ತೆಗೆದು ಹಾಕಿರುವುದಕ್ಕೆ ರಾಹುಲ್ ಗಾಂಧಿ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ತಮ್ಮ ಹೇಳಿಕೆಗಳನ್ನು ಮರುದಾಖಲೆ ಮಾಡುವಂತೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. ತಮ್ಮ ಭಾಷಣದಲ್ಲಿನ ಟೀಕೆಗಳನ್ನು ದಾಖಲೆಗಳಿಂದ ತೆಗೆದುಹಾಕಿರುವ ರೀತಿ ಆಘಾತಕಾರಿ ಮತ್ತು ಸಂಸದೀಯ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ರಾಹುಲ್ ಪತ್ರದಲ್ಲಿ ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page