Saturday, June 21, 2025

ಸತ್ಯ | ನ್ಯಾಯ |ಧರ್ಮ

ಕುಕ್ಕರ್‌ ನಿಂದ ಹೊಡೆದು ಸಂಗಾತಿಯ ಕೊಲೆ

ಬೆಂಗಳೂರು : ಬೆಂಗಳೂರಿನ ಬಾಡಿಗೆ ಮನೆಯೊಂದರಲ್ಲಿ ತನ್ನ ಸಂಗಾತಿಯನ್ನು ಕುಕ್ಕರ್‌ನಿಂದ ಹೊಡೆದು ಸಾಯಿಸಿದ ಪ್ರಕರಣದಲ್ಲಿ 29 ವರ್ಷದ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ.

ಕೇರಳ ಮೂಲದ ವೈಷ್ಣವ್‌ (29) ಹಾಗೂ ಆತನ ಸಂಗಾತಿ ದೇವಾ (24) ಕಳೆದ ಎರಡು ವರ್ಷಗಳಿಂದ ಒಟ್ಟಿಗೆ ವಾಸಿಸುತ್ತಿದ್ದು Living Together ಸಂಬಂಧದಲ್ಲಿದ್ದರು. ತನ್ನ ಸಂಗಾತಿ ತನಗೆ ಮೋಸ ಮಾಡುತ್ತಿದ್ದಾಳೆ ಎಂಬ ಅನುಮಾನದಿಂದ ನಡೆದ ಈ ಜಗಳ ಸಂಜೆ ಐದು ಗಂಟೆಯ ಹೊತ್ತಿಗೆ ಕುಕ್ಕರ್‌ ನಿಂದ ಹೊಡೆದು ಸಾಯಿಸುವ ಮೂಲಕ ಅಂತ್ಯಕಂಡಿದೆ.

ದೇವಾ ಅವರ ಸಹೋದರಿ ದೂರವಾಣಿ ಕರೆ ಮಾಡಿ ಸಂಪರ್ಕಕ್ಕೆ ಬಾರದೇ ಇದ್ದಾಗ ನೆರೆಹೊರೆಯವರನ್ನು ಸಂಪರ್ಕಿಸಲಾಯಿತು. ಈ ವೇಳೆ ಈ ಕೊಲೆ ಬೆಳಕಿಗೆ ಬಂದಿದೆ. ಘಟನೆಯ ನಂತರ ಪರಾರಿಯಾಗಿದ್ದ ವೈಷ್ಣವ್‌ನನ್ನು ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.

ಈ ಜೋಡಿ ಒಟ್ಟಿಗೆ ವಾಸಿಸುತ್ತಿದ್ದ ವಿಚಾರ ಮನೆಯವರಿಗೂ ತಿಳಿದಿತ್ತು. ಅವರ ಮಧ್ಯೆ ಆಗಾಗ ನಡೆಯುತ್ತಿದ್ದ ಜಗಳದ ಬಗ್ಗೆ ನೆರೆಹೊರೆಯವರಿಗೂ ತಿಳಿದಿತ್ತು.

“ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಹಿಳೆಯ ಪೋಷಕರನ್ನು ಭೇಟಿ ಮಾಡಿದ್ದೇನೆ. ಕಳೆದ ಹಲವು ದಿನಗಳಿಂದ ಇಬ್ಬರು ಜಗಳವಾಡುತ್ತಿದ್ದರು ಎಂದು ಅವರು ತಿಳಿಸಿದ್ದಾರೆ. ಅವರ ಕುಟುಂಬವು ಇವರಿಬ್ಬರ ನಡುವಿನ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಿದೆ” ಎಂದು ಆಗ್ನೇಯ ಬೆಂಗಳೂರು ಉಪ ಪೊಲೀಸ್ ಆಯುಕ್ತ ಸಿ.ಕೆ.ಬಾಬಾ ಹೇಳಿದ್ದಾರೆ.

ವೈಷ್ಣವ್ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page