Thursday, December 11, 2025

ಸತ್ಯ | ನ್ಯಾಯ |ಧರ್ಮ

ಅಲ್ಪಸಂಖ್ಯಾತರ ಇಲಾಖೆ ವಸತಿ ನಿಲಯಗಳಲ್ಲಿ ಸಿಬ್ಬಂದಿ ಭರ್ತಿಗೆ ಕ್ರಮ – ಸಚಿವ ಜಮೀರ್ ಅಹ್ಮದ್‌ 

ಬೆಳಗಾವಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಸತಿ ನಿಲಯಗಳಲ್ಲಿ ಸಿಬ್ಬಂದಿ ಕೊರತೆ ಇರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಲ್ಪಸಂಖ್ಯಾತರ ನಿರ್ದೇಶನಾಲಯದ ವೃಂದ ಮತ್ತು ನೇಮಕಾತಿ ನಿಯಮಗಳು 2011ರ ಸಮಗ್ರ ಪರಿಷ್ಕರಣೆಯ ಪುಸ್ತಾವನೆಯು ಪರಿಶೀಲನೆಯಲ್ಲಿದೆ. ಈ ನಿಯಮಗಳು ಪರಿಷ್ಕರಣೆ ಆದ ಬಳಿಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಗತ್ಯ ಕ್ರಮವಹಿಸಲಾಗುವುದು ಎಂದು ಸಚಿವ ಬಿ.ಝೆಡ್‌. ಜಮೀರ್ ಅಹ್ಮದ್‌ ಖಾನ್ ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯರಾದ ಬಲ್ಕೀಸ್ ಬಾನು ಪ್ರಶ್ನೆಗೆ ಉತ್ತರ ನೀಡಿದ ಅವರು,  ರಾಜ್ಯದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಒಟ್ಟು 405 ವಸತಿ ನಿಲಯಗಳ ಪೈಕಿ ಅಗತ್ಯವಿರುವ ವಸತಿ ನಿಲಯಗಳಿಗೆ ಮಂಚ, ಹೊದಿಕೆ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಕ್ಕೆ ಟೆಂಡರ್ ಕರೆಯಲಾಗಿದೆ ಎಂದರು.

ಪ್ರಸ್ತುತ ವಿದ್ಯಾರ್ಥಿ ನಿಲಯಗಳ ಸುಗಮ ಕಾರ್ಯನಿರ್ವಹಣೆಗಾಗಿ ಮತ್ತು ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಲಿ ಇರುವ ನಿಲಯಪಾಲಕರ ಹುದ್ದೆಗಳಿಗೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಹೆಚ್ಚುವರಿ ಪ್ರಭಾರದ ವ್ಯವ್ಯಸ್ಥೆಯನ್ನು ತಾತ್ಕಾಲಿಕವಾಗಿ ಮಾಡಲಾಗಿರುತ್ತದೆ ಎಂದು ಹೇಳಿದರು.FacebookWhatsAppTwitterShare

Related Articles

ಇತ್ತೀಚಿನ ಸುದ್ದಿಗಳು

You cannot copy content of this page