Tuesday, January 21, 2025

ಸತ್ಯ | ನ್ಯಾಯ |ಧರ್ಮ

ಯುಜಿಸಿ ಕರಡು ನಿಯಮಗಳ ವಿರುದ್ಧ ನಿರ್ಣಯ ಅಂಗೀಕರಿಸಿ: ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸ್ಟಾಲಿನ್ ಪತ್ರ

ಬಿಜೆಪಿಯೇತರ ರಾಜ್ಯಗಳ ಮುಖ್ಯಮಂತ್ರಿಗಳು ಯುಜಿಸಿ ಕರಡು ನಿಯಮಗಳ ವಿರುದ್ಧ ವಿಧಾನಸಭೆಗಳಲ್ಲಿ ನಿರ್ಣಯಗಳನ್ನು ಅಂಗೀಕರಿಸುವಂತೆ ತಮಿಳುನಾಡು ಸಿಎಂ ಸ್ಟಾಲಿನ್ ಒತ್ತಾಯಿಸಿದ್ದಾರೆ.

ಈ ನಿಟ್ಟಿನಲ್ಲಿ ಅವರು ಸೋಮವಾರ ತೆಲಂಗಾಣ, ದೆಹಲಿ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಕರ್ನಾಟಕ, ಕೇರಳ, ಪಂಜಾಬ್ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳಿಗೆ ಪತ್ರಗಳನ್ನು ಬರೆದಿದ್ದಾರೆ.

ವಿಶ್ವವಿದ್ಯಾನಿಲಯಗಳಲ್ಲಿ ಉಪಕುಲಪತಿಗಳ ನೇಮಕಾತಿಯಲ್ಲಿ ರಾಜ್ಯ ಸರ್ಕಾರಗಳ ಭಾಗವಹಿಸುವಿಕೆಯನ್ನು ನಿಯಂತ್ರಿಸಲು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಯುಜಿ ಮತ್ತು ಪಿಜಿ ಕೋರ್ಸ್‌ಗಳ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಗಳನ್ನು ನಿಯಂತ್ರಿಸಲು ಕೇಂದ್ರ ಪ್ರಯತ್ನಿಸುತ್ತಿದೆ ಎಂದು ಅವರು ದೂರಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page