Home ಬ್ರೇಕಿಂಗ್ ಸುದ್ದಿ ಹಾಸನ ಏ.12 ಮತ್ತು 13 ರಂದು ಹಾಸನದಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ

ಏ.12 ಮತ್ತು 13 ರಂದು ಹಾಸನದಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ

 ಹಾಸನ: ಪತ್ರಕರ್ತರ ಸಂಘ, ಹಾಗೂ ಜಿಲ್ಲಾ ಪತ್ರಕರ್ತರ ಸಂಘದ ಸಹಯೋಗ ದಲ್ಲಿ ಏ.12 ಮತ್ತು 13 ರಂದು ನಗರದ ವಿಜ್ಞಾನ ಹಾಗೂ ಕಲಾ ಕಾಲೇಜು ಮೈದಾನದ ಆವರಣದಲ್ಲಿ ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ ಯನ್ನು ಹಮ್ಮಿ ಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೆ.ಹೆಚ್.  ವೇಣುಕುಮಾರ್ ತಿಳಿಸಿದರು. 

 ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ನಗರದ ಸರ್ಕಾರಿ ಕಲಾ, ವಿಜ್ಞಾನ ಕಾಲೇಜು ಹಾಗೂ ಎಮ್ ಸಿಇ ಕಾಲೇಜು ಮೈದಾನದಲ್ಲಿ ಎರಡು ದಿನಗಳ ಕಾಲ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ಅಂದು ಬೆಳಿಗ್ಗೆ 9 ಗಂಟೆಗೆ ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ, ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡ ಅವರ ಆಶೀರ್ವಾದ ದೊಂದಿಗೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ವಿಧಾನಸಭೆ ಸಭಾಪತಿ ಯು.ಟಿ ಖಾದರ್ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಉದ್ಘಾಟನೆ ನಡೆಸಲಿದ್ದಾರೆ.

ಸಂಸದ ಶ್ರೇಯಸ್ ಪಟೇಲ್, ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ. ವಿ ಪ್ರಭಾಕರ್ ಆಶಯ ನುಡಿಗಳ ನಾಡಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಟಿ.ವಿ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಚ್ .ಬಿ ಮದನ ಗೌಡ ಪ್ರಸ್ತಾವಿಕ ನುಡಿಗಳನ್ನಾ ಡಲಿದ್ದಾರೆ. ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಚ್ ವೇಣುಕುಮಾರ್ ಪ್ರೇರಣಾ ನುಡಿಗಳ ನಾಡಲಿದ್ದಾರೆ .ಶಾಸಕರಾದ ಕೆ.ಎಂ ಶಿವಲಿಂಗೇಗೌಡ, ಸಿ.ಎನ್.ಬಾಲಕೃಷ್ಣ,ಎಚ್.ಪಿ ಸ್ವರೂಪ, ನಗರಸಭೆ ಅಧ್ಯಕ್ಷ ಚಂದ್ರೇಗೌಡ, ವಿಧಾನಪರಿಷತ್ ಮಾಜಿ ಸದಸ್ಯ ಎಂ.ಎ. ಗೋಪಾಲಸ್ವಾಮಿ, ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಮಂಜು ಸುಜಿತ, ಬಿ.ಆರ್.ಪೂರ್ಣಿಮಾ, ಡಿ.ಸಿ.ಎಫ್ ಸೌರಭ್ ಕುಮಾರ್, ನಗರಸಭೆ ಅಧ್ಯಕ್ಷ ಕೆ.ಎಂ.ರಮೇಶ್, ಕೆ.ಎಂ.ರಾಜೇಗೌಡ, ಜಿಲ್ಲಾಧಿಕಾರಿ ಕೆ.ಎಂ. ಗಣ್ಯರು ಭಾಗವಹಿಸಲಿದ್ದಾರೆ. ಏಪ್ರಿಲ್ 13ರಂದು ಸಮಾರೋಪ ಸಮಾರಂಭ ಜರುಗಲಿದ್ದು ಮಾಜಿ ಸಚಿವ ಎಚ್. ಡಿ ರೇವಣ್ಣ ಬಹುಮಾನ ವಿತರಣೆ ಮಾಡಲಿದ್ದಾರೆ .ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಟಿ.ವಿ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ. ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಚ್.ವೇಣು ಕುಮಾರ್ ಧನ್ಯತಾ ನುಡಿಗಳ ನಾಡಲಿದ್ದಾರೆ. ಶಾಸಕರಾದ ಸ್ವರೂಪ್ ಪ್ರಕಾಶ್, ಎಚ್. ಕೆ ಸುರೇಶ್, ಸಿಮೆಂಟ್ ಮಂಜು, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ಮಲೆನಾಡು ತಾಂತ್ರಿಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಆ‌ರ್.ಟಿ ದ್ಯಾವೇಗೌಡ, ಹೆಚ್ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷ ನಾಗರಾಜ್,ರಾಜ್ಯ ವಕ್ಕಲಿಗರ ಸಂಘದ ನಿರ್ದೇಶಕ ಎಸ್. ಎಸ್ ರಘು ಗೌಡ,ಸರ್ಕಾರಿ ನೌಕರರ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಪಿ ಕೃಷ್ಣಗೌಡ, ರಾಜ್ಯ ಒಕ್ಕಲಿಗರ ಸಂಘದ ನಿರ್ದೆಶಕ ಬಾಗೂರು ಮಂಜೇಗೌಡ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ಉಪ ನಿರ್ದೇಶಕಿ ಮೀನಾಕ್ಷಮ್ಮ, ರಾಜ್ಯ ಸಣ್ಣ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಘದ ರಾಜ್ಯ ಘಟಕದ ಅಧ್ಯಕ್ಷ ಜಿ.ಆ‌ರ್ ಕೆಂಚೇಗೌಡ, ರಾಜ್ಯ ಕಾರ್ಯಕಾರಿ ಸಮಿತಿ ಆಹ್ವಾನಿತ ಸದಸ್ಯ ರವಿ ನಾಗಲಗೂಡು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಬಾಳು ಗೋಪಾಲ್, ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು. ಕ್ರಿಕೆಟ್ ಪಂದ್ಯಾವಳಿಗೆ 23 ತಂಡಗಳು ಭಾಗವಹಿಸಲಿದ್ದು, 400ಕ್ಕೂ ಹೆಚ್ಚು ಕ್ರೀಡಾ ಪಟುಗಳಿಗೆ ಎರಡು ದಿನಗಳ ಕಾಲ ಊಟ ಹಾಗೂ ವಸತಿ ಸೌಲಭ್ಯ ಒದಗಿಸಲಾಗಿದೆ. ಪ್ರಥಮ, ದ್ವಿತೀಯ, ತೃತೀಯ ನಗದು ಬಹುಮಾನ ದೊಂದಿಗೆ ಟ್ರೋಫಿ, ಪಂದ್ಯ ಶ್ರೇಷ್ಠ,ಉತ್ತಮ ಬ್ಯಾಟ್ಸನ್, ಕ್ಷೇತ್ರ ರಕ್ಷಕ ಹಾಗೂ ಬೌಲರ್ ಗಳಿಗೆ ಪ್ರತ್ಯೇಕ ಟ್ರೋಫಿಗಳನ್ನು ವಿತರಿಸಲಾಗುವುದು ಕ್ರಿಕೆಟ್ ಪಂದ್ಯಾವಳಿಯ ಪ್ರೆಸ್ ಕ್ಲಬ್ ಹಾಸನ್ ಯೂಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ನೇರ ಪ್ರಸಾರವನ್ನು ವೀಕ್ಷಿಸಬಹುದಾಗಿದೆ ಎಂದರು.

ಅಂದು ಸಮಯಕ್ಕೆ ಸರಿಯಾಗಿ ಜಿಲ್ಲೆಯ ಎಲ್ಲಾ ಪತ್ರಕರ್ತರು ಆಗಮಿಸಿ, ಪಂದ್ಯಾವಳಿಯನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಕೆ.ಆರ್ ಮಂಜುನಾಥ್, ರಾಷ್ಟ್ರೀಯ ಮಂಡಳಿ ಸದಸ್ಯ ಜಿ ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಬಿ.ಸಿ ಶಶಿಧರ್, ಉಪಾಧ್ಯಕ್ಷ ಎಚ್.ಟಿ. ಮೋಹನ್ ಕುಮಾರ್, ಕಾರ್ಯದರ್ಶಿ ಸಿ.ಬಿ.ಸಂತೋಷ್, ಖಜಾಂಚಿ ಕುಮಾರ್ ಇದ್ದರು.

You cannot copy content of this page

Exit mobile version