Saturday, June 21, 2025

ಸತ್ಯ | ನ್ಯಾಯ |ಧರ್ಮ

ಮಹಿಳೆಯರ ಸಮಸ್ಯೆಗಳಿಗೆ ಆತ್ಮಹತ್ಯೆಯೆ ಪರಿಹಾರವಲ್ಲ: ನ್ಯಾ.ವಿನುತ ಬಿ.ಎಸ್‌

ಆನೇಕಲ್‌: ಮಹಿಳೆಯರ ಸಮಸ್ಯೆಗಳಿಗೆ ಆತ್ಮಹತ್ಯೆಯೆ ಪರಿಹಾರವಲ್ಲ. ಆಧುನಿಕತೆಯಿಂದ ನಮ್ಮ ಸಂಸ್ಕೃತಿಯನ್ನು ನಾವು ಮರೆಯುತ್ತಿದ್ದೇವೆ,ಹೀಗಾಗಿ ಮಹಿಳೆಯರು ಕಾನೂನು ತಿಳಿದುಕೊಳ್ಳಬೇಕು ಎಂದು 1 ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿನುತ ಬಿ.ಎಸ್ ರವರು ಹೇಳಿದರು.

ಆನೇಕಲ್ ತಾಲೂಕಿನಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮವನ್ನು, ನಗರದ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು.

ನಂತರ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಹೆಣ್ಷುಮಕ್ಕಳು ಸಮಾಜದಲ್ಲಿ ತುಂಬಾ ಹಿಂದೆ ಉಳಿದ್ದಾರೆ,ಸಮಾಜದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೆಣ್ಣುಮಕ್ಕಳು ಮುಂದೆಬರಬೇಕು,ಮಹಿಳೆಯರಿಗೆ ಆಗುತ್ತಿರುವಂತಹ ದೌರ್ಜನ್ಯವನ್ನು ವಿರೋಧಿಸಿ ಧ್ವನಿ ಎತ್ತಬೇಕು ಮತ್ತು  ಕಾನೂನಿನ ಬಗ್ಗೆ ಮಾಹಿತಿಗಳನ್ನು ತಿಳಿಸಿದುಕೊಂಡಿರಬೇಕು ಎಂದು ಹೇಳಿದರು.

ಟೆಲಿ ಲಾ ಕರ್ನಾಟಕ ವಕೀಲರಾದ ಪುರುಷೋತ್ತಮ ಎ. ಮಾತನಾಡಿ, ನ್ಯಾಯಾಧೀಶರು ಜನರ ಬಳಿಬರಬೇಕು, ಸಾಮಾನ್ಯ ಜನರಿಗೂ ಕಾನೂನು ತಲುಪಬೇಕು ಮತ್ತು ಕಾನೂನು ಉಚಿತವಾಗಿ ಸಿಗಬೇಕು ಎಂಬುದೇ ನವೆಂಬರ್ ತಿಂಗಳ 9 ನೇ ತಾರೀಖಿನ ರಾಷ್ಟ್ರೀಯ ಕಾನೂನು ಸೇವೆಗಳ ದಿನ ಆಚರಣೆಯ ಉದ್ದೇಶ ಮತ್ತು 1987 ರ ಕಾನೂನು ಸೇವೆಗಳ ಕಾಯ್ದೆಯ ಉದ್ದೇಶ ಎಂದು ತಿಳಿಸಿದರು.

ಸಹಾಯಕ ಸರ್ಕಾರಿ ಅಭಿಯೋಜಕರಾದ ಆರ್.ಚಂದ್ರಶೇಖರ ಮಾತನಾಡಿ, ಹೊಲಿಗೆ ಯಂತ್ರದಿಂದ ಒಂದು ಕುಟುಂಬವನ್ನು ಸಾಕಬಹುದು, ನಮ್ಮ ತಂದೆ ಕೂಡ ಹೊಲಿಗೆ ಯಂತ್ರದಿಂದ ನಾವು ಈ ಮಟ್ಟಕ್ಕೆ ಬಂದಿದ್ದೇವೆ. ಆದರೆ ಕಾನೂನು ತಿಳಿದುಕೊಳ್ಳುವುದು ನಮ್ಮ ಜವಾಬ್ದಾರಿ ಎಲ್ಲರೂ ಕಾನೂನು ತಿಳಿದುಕೊಳ್ಳಬೇಕು ಎಂದು ಹೇಳಿದರು.

ವಕೀಲರ ಸಂಘದ ಅಧ್ಯಕ್ಷರಾದ ಆರ್.ರಮೇಶರವರು ಮಾತನಾಡಿ, ಮನುಷ್ಯ ‌ಹುಟ್ಟಿದಾಗಿನಿಂದ ಕಾನೂನು ನಿಮ್ಮನ್ನು ಹಿಂಬಾಲಿಸುತ್ತದೆ ಹಾಗೆಯೇ ಸತ್ತಮೇಲೂ ಕೂಡ ಕಾನೂನು ಬೇಕಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ವಕೀಲರ ಸಂಘ ಕಾರ್ಯದರ್ಶಿ ವೈ ಮಂಜುನಾಥ,  ಕಖಜಾಂಚಿ ಕೆ.ವಿ ರವಿ,  ವಕೀಲರಾದ ಶಿವರಾಜು, ಭಾಗ್ಯ, ನಾಗರತ್ನ, ನಿರ್ಮಲ,  ಕೌಶಲ್ಯ  ತರಬೇತಿ ಕೇಂದ್ರದ ರಾಜು, ಸೌಮ್ಯ, ಮಂಜುಳಾ, ಮುರಳಿ, ಜಯಶ್ರೀ ಮತ್ತು ಕಂಪ್ಯೂಟರ್ ತರಬೇತಿ ವಿದ್ಯಾರ್ಥಿಗಳು, ಮತ್ತು ಹೊಲಿಗೆ ತರಬೇತಿ ಶಿಬಿರದ ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page