Home ದೆಹಲಿ ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

0

ದೆಹಲಿ: ಒಲಿಂಪಿಕ್ ಪದಕ ವಿಜೇತ, ರೆಸ್ಲರ್ ಸುಶೀಲ್ ಕುಮಾರ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ದೆಹಲಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ ನಡೆದ ಹತ್ಯೆ ಪ್ರಕರಣದಲ್ಲಿ ಸುಶೀಲ್ ಕುಮಾರ್ ಜೈಲುಶಿಕ್ಷೆ ಎದುರಿಸುತ್ತಿದ್ದಾರೆ.

ಮಾಜಿ ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನ್ಕರ್ ಹತ್ಯೆ ಪ್ರಕರಣದಲ್ಲಿ ಸುಶೀಲ್ ಕುಮಾರ್ ವಿರುದ್ಧ ಆರೋಪಗಳಿವೆ. ಮಾರ್ಚ್ 4 ರಂದು ದೆಹಲಿ ಹೈಕೋರ್ಟ್ ಸುಶೀಲ್‌ಗೆ ಜಾಮೀನು ನೀಡಿತ್ತು. ಆದರೆ, ನ್ಯಾಯಮೂರ್ತಿ ಸಂಜಯ್ ಕರೋಲ್ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರ ಸುಪ್ರೀಂ ಕೋರ್ಟ್ ಪೀಠ ಆ ಜಾಮೀನನ್ನು ರದ್ದುಪಡಿಸಿದೆ.

ಒಂದು ವಾರದೊಳಗೆ ಸುಶೀಲ್ ಶರಣಾಗಬೇಕು ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ. ಆಸ್ತಿಯೊಂದರ ವಿಚಾರವಾಗಿ ರೆಸ್ಲರ್‌ಗಳ ನಡುವೆ ವಿವಾದ ಉಂಟಾಗಿತ್ತು. ಮೇ 2021 ರಲ್ಲಿ ಸುಶೀಲ್ ಕುಮಾರ್ ಮತ್ತು ಇತರರು ಧನ್ಕರ್ ಮೇಲೆ ಹಲ್ಲೆ ಮಾಡಿದ್ದರು. ಆ ಘಟನೆಯಲ್ಲಿ ಧನ್ಕರ್ ಅವರ ಇಬ್ಬರು ಸ್ನೇಹಿತರೂ ಗಾಯಗೊಂಡಿದ್ದರು. ಮರಣೋತ್ತರ ವರದಿಯ ಪ್ರಕಾರ, ಧನ್ಕರ್ ಅವರ ತಲೆಗೆ ತೀವ್ರ ಗಾಯಗಳಾಗಿದ್ದವು.

You cannot copy content of this page

Exit mobile version