Home ಅಪರಾಧ ಗೌರಿ ಲಂಕೇಶ್‌ ಹತ್ಯೆ ಆರೋಪಿಯ ಜಾಮೀನು ರದ್ದುಗೊಳಿಸಲು ಸುಪ್ರೀಂ ನಿರಾಕರಣೆ

ಗೌರಿ ಲಂಕೇಶ್‌ ಹತ್ಯೆ ಆರೋಪಿಯ ಜಾಮೀನು ರದ್ದುಗೊಳಿಸಲು ಸುಪ್ರೀಂ ನಿರಾಕರಣೆ

0

ಹೊಸದಿಲ್ಲಿ: ಹಿರಿಯ ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಕೊಲೆ ಆರೋಪಿ ಮೋಹನ್ ನಾಯಕ್‌ಗೆ ನೀಡಲಾಗಿದ್ದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠವು ಈ ಸಂಬಂಧ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಎತ್ತಿಹಿಡಿದಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳ ಪೈಕಿ ಮೋಹನ್ ನಾಯಕ್‌ಗೆ ಜಾಮೀನು ನೀಡಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ವಿರೋಧಿಸಿ ಕೆಲವರು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳ ವಿಚಾರಣೆ ನಡೆಸಿದ ಪೀಠವು ಈ ತೀರ್ಪನ್ನು ನೀಡಿದೆ.

ಕರ್ನಾಟಕ ಹೈಕೋರ್ಟ್ 2023 ರ ಡಿಸೆಂಬರ್‌ನಲ್ಲಿ ನಾಯಕ್‌ಗೆ ಜಾಮೀನು ನೀಡಿತ್ತು. 2017ರಲ್ಲಿ ಪತ್ರಕರ್ತೆ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಡಿಸೆಂಬರ್ 7, 2023 ರಂದು, ಕರ್ನಾಟಕ ಹೈಕೋರ್ಟ್ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಮೋಹನ್ ನಾಯಕ್‌ಗೆ ಜಾಮೀನು ನೀಡಿತ್ತು. ಪ್ರಕರಣದಲ್ಲಿ ಜಾಮೀನು ಪಡೆದ ಮೊದಲ ವ್ಯಕ್ತಿ ಮೋಹನ್‌ ಆಗಿದ್ದಾನೆ.

You cannot copy content of this page

Exit mobile version