Friday, June 14, 2024

ಸತ್ಯ | ನ್ಯಾಯ |ಧರ್ಮ

ಸಂಸ್ಕೃತವನ್ನು ರಾಷ್ಟ್ರೀಯ ಭಾಷೆಯನ್ನಾಗಿ ಘೋಷಿಸಲು ಕೋರಿ ಅರ್ಜಿ : ವಜಾಗೊಳಿಸಿದ ಸುಪ್ರೀಂ ಕೋರ್ಟ್‌  

ನವದೆಹಲಿ: ಸಂಸ್ಕೃತವನ್ನು ರಾಷ್ಟ್ರ ಭಾಷೆಯಾಗಿ ಘೋಷಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ.

ಪ್ರಕರಣದ ವಿಚಾರಣೆಯನ್ನು ಆಲಿಸಿದ ನ್ಯಾಯಾಧೀಶರಾದ ಎಂ ಅರ್‌ ಶಾ ಮತ್ತು ಕೃಷ್ಣ ಮುರಾರಿ ಅವರ ನೇತೃತ್ವದ ಪೀಠವು, ʼಈ ವಿಚಾರವನ್ನು ಪರಿಗಣಿಸಲು ಸಂಸತ್ತು ಸೂಕ್ತ ವೇದಿಕೆಯೇ ಹೊರತು ನ್ಯಾಯಾಲಯವಲ್ಲʼ ಎಂದು ಹೇಳಿತು.

“ನಾವೇಕೆ ನೋಟಿಸ್‌ ನೀಡಬೇಕು ಅಥವಾ ಪ್ರಚಾರಕ್ಕಾಗಿ ಘೋಷಿಸಬೇಕು? ಇದನ್ನು ಚರ್ಚಿಸಲು ಸಂಸತ್ತು ಸೂಕ್ತವಾದ ವೇದಿಕೆ. ಇದಕ್ಕೆ ಸಂವಿಧಾನಕ್ಕೆ ತಿದ್ದುಪಡಿ ಅವಶ್ಯಕತೆ ಇದೆ. ಇದು ನೀತಿನಿರೂಪಣೆಯ ವಿಷವಾಗಿದ್ದು ನಾವು ಅದನ್ನು ಬದಲಿಸಲಾಗುವುದಿಲ್ಲ. ಹಾಗಾಗಿ ನಾವು ಈ ಮನವಿಯನ್ನು ತಿರಸ್ಕರಿಸಿತ್ತೇವೆ ಎಂದು ವಜಾಗೊಳಿಸಲಾಗಿದೆ. ಸೂಕ್ತ ಪ್ರಾಧಿಕಾರದ ಮುಂದೆ ಮನವಿ ನೀಡಲು ಅರ್ಜಿದಾರರು ಸ್ವತಂತ್ರರು” ಎಂದು ನ್ಯಾಯಾಲಯ ಹೇಳಿದೆ.

Related Articles

ಇತ್ತೀಚಿನ ಸುದ್ದಿಗಳು