ಬಾರಿ ವಿವಾದಕ್ಕೆ ಕಾರಣವಾಗಿದ್ದ ಹೈಕೋರ್ಟ್ ನ್ಯಾಯಾಧೀಶರ ಹೇಳಿಕೆಗೆ ಈಗ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಸ್ತನಗಳನ್ನು ಹಿಡಿಯುವುದು, ಪೈಜಾಮಾ ದಾರ ಎಳೆಯುವ ಕೃತ್ಯಗಳು ಅತ್ಯಾಚಾರ ಅಥವಾ ಅತ್ಯಾಚಾರಕ್ಕೆ ಪ್ರಯತ್ನವಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ನೀಡಿದ ಹೇಳಿಕೆಗೇ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಹೈಕೋರ್ಟ್ ನ್ಯಾಯಮೂರ್ತಿಗಳ ಹೇಳಿಕೆಯನ್ನು ಕಟುವಾಗಿ ಟೀಕಿಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ನ್ಯಾಯಪೀಠ, ಇದೊಂದು ಗಂಭೀರ ವಿಷಯವಾಗಿದೆ ಹಾಗೂ ಈ ತೀರ್ಪು ನೀಡಿದ ನ್ಯಾಯಾಧೀಶರ ಸಂವೇದನಾಶೀಲತೆ ಎಂತಹದು ಎಂದು ಎತ್ತಿ ತೋರಿಸಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಪ್ರಕರಣದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, “ಇಂತಹ ತೀರ್ಪು ನೀಡಿದ ನ್ಯಾಯಾಧೀಶರದು ಸಂವೇದನಾ ರಹಿತ ನಡೆಯಾಗಿದೆ. ಕನಿಷ್ಠ ವಿವೇಚನೆ ಇಲ್ಲದೆ ಈ ರೀತಿಯ ಹೇಳಿಕೆ ನೀಡಲಾಗಿದೆ. ಇದನ್ನು ಹೇಳಲು ನಮಗೆ ನೋವಾಗಿದೆ” ಎಂದು ಪೀಠವು ಹೇಳಿದೆ.
ಇಂತಹ ತೀರ್ಪು ಅಥವಾ ಹೇಳಿಕೆಯಿಂದ ಜನಸಾಮಾನ್ಯರಿಗೆ ನ್ಯಾಯಾಲಯದ ಮೇಲಿರುವ ಗೌರವ ತೀರಾ ಕಡಿಮೆ ಆಗಲಿದೆ. ಈ ಬಗ್ಗೆ ನಾವು (ಸುಪ್ರೀಂಕೋರ್ಟ್ ಪೀಠ) ವಿಷಾದ ವ್ಯಕ್ತಪಡಿಸಿದೆ. ಲೈಂಗಿಕ ದೌರ್ಜನ್ಯ ಕಾನೂನುಗಳ ನ್ಯಾಯಾಂಗ ವ್ಯಾಖ್ಯಾನಗಳ ಬಗ್ಗೆ ಹೆಚ್ಚುತ್ತಿರುವ ಆಕ್ರೋಶದ ಮಧ್ಯೆ, ಸುಪ್ರೀಂ ಕೋರ್ಟ್ನ ಹಸ್ತಕ್ಷೇಪವು ಲೈಂಗಿಕ ಹಿಂಸಾಚಾರದ ಪ್ರಕರಣಗಳನ್ನು ನಿರ್ವಹಿಸುವಲ್ಲಿ ನ್ಯಾಯಾಲಯ ಸೋತಿದೆ ಎಂಬ ಅಭಿಪ್ರಾಯ ಬರಬಾರದು ಎಂಬುದಾಗಿ ತಿಳಿಸಿದ್ದಾರೆ.