Home ಬ್ರೇಕಿಂಗ್ ಸುದ್ದಿ ಬಿಜೆಪಿ ನಾಯಕ ಸುವೆಂಧು ಅಧಿಕಾರಿ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ್ದ ಮನವಿ ನಿರಾಕರಣೆ

ಬಿಜೆಪಿ ನಾಯಕ ಸುವೆಂಧು ಅಧಿಕಾರಿ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ್ದ ಮನವಿ ನಿರಾಕರಣೆ

0

ನವದೆಹಲಿ: ತನ್ನ ಚುನಾವಣಾ ಗೆಲುವನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿಯನ್ನು ಕಲ್ಕತ್ತಾ ಹೈಕೋರ್ಟ್ ಹೊರತುಪಡಿಸಿ ಬೇರೆ ಯಾವುದೇ ಹೈಕೋರ್ಟ್‌ಗೆ ವರ್ಗಾಯಿಸುವಂತೆ ಬಿಜೆಪಿ ನಾಯಕ ಸುವೆಂಧು ಅಧಿಕಾರಿ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ್ದ ಮನವಿಯನ್ನು ಹಿಂಪಡೆದಿದ್ದಾರೆ.

ನಂದಿಗ್ರಾಮದಿಂದ ಬಿಜೆಪಿ ನಾಯಕ ಸುವೆಂಧು ಅಧಿಕಾರಿಯ ಗೆಲುವನ್ನು ಪ್ರಶ್ನಿಸಿ ಮಮತ ಬ್ಯಾನರ್ಜಿ ಸಲ್ಲಿಸಿದ್ದ ಚುನಾವಣಾ ಅರ್ಜಿಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಯು ಸುಪ್ರೀಂ ಕೊರ್ಟ್‌ಗೆ ಮೇಲ್ಮನವಿ ಹೋಗಿದ್ದರು. ಇದನ್ನು ಸುಪ್ರೀಂ ಕೋರ್ಟ್‌ ನಿರಾಕರಿಸಿದ ನಂತರ ತನ್ನ ಮನವಿಯನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ.

"ಹೈಕೋರ್ಟ್ ಈ ವಿಷಯದ ಬಗ್ಗೆ ಅಧಿಕಾರವನ್ನು ಹೊಂದಿದ್ದರು, ಸುಪ್ರೀಂ ಕೋರ್ಟ್‌ ಯಾರಿಗೂ ಉಚ್ಚ ನ್ಯಾಯಾಲಯಗಳನ್ನು ಆಯ್ಕೆ ಮಾಡಲು ಅನುಮತಿ ನೀಡುವುದಿಲ್ಲ" ಎಂದು ನ್ಯಾಯಧೀಶರಾದ ಡಿ ವೈ ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ಹೇಳಿದೆ.

You cannot copy content of this page

Exit mobile version