<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ಸಿದ್ದರಾಮಯ್ಯ &#8211; Peepal Media</title>
	<atom:link href="https://peepalmedia.com/tag/%e0%b2%b8%e0%b2%bf%e0%b2%a6%e0%b3%8d%e0%b2%a6%e0%b2%b0%e0%b2%be%e0%b2%ae%e0%b2%af%e0%b3%8d%e0%b2%af/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Mon, 18 Nov 2024 07:31:34 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>ಸಿದ್ದರಾಮಯ್ಯ &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ</title>
		<link>https://peepalmedia.com/only-bpl-cards-of-ineligible-people-will-be-cancelled-cm-siddaramaiah-clarifies/</link>
		
		<dc:creator><![CDATA[Murali Maluru]]></dc:creator>
		<pubDate>Mon, 18 Nov 2024 07:27:57 +0000</pubDate>
				<category><![CDATA[ರಾಜ್ಯ]]></category>
		<category><![CDATA[apl card]]></category>
		<category><![CDATA[belowpoverty line]]></category>
		<category><![CDATA[bpl card]]></category>
		<category><![CDATA[Siddaramaiah]]></category>
		<category><![CDATA[ಅಂತ್ಯೋದಯಾ ಕಾರ್ಡ್‌]]></category>
		<category><![CDATA[ಸಿದ್ದರಾಮಯ್ಯ]]></category>
		<guid isPermaLink="false">https://peepalmedia.com/?p=49178</guid>

					<description><![CDATA[ನಬಾರ್ಡ್ ನಿಂದ ರಾಜ್ಯಕ್ಕೆ ಶೇ58 ರಷ್ಟು ಹಣ ಕಡಿತ: ಕೇಂದ್ರದಿಂದ ರಾಜ್ಯಕ್ಕೆ ಮತ್ತೊಂದು ಮಹಾ ದ್ರೋಹ: ಸಿಎಂ ಆಕ್ರೋಶ ಬೆಂಗಳೂರು, ನವೆಂಬರ್ 18: ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹ ಬಡವರಿಗೆ ಕಾರ್ಡು ತಪ್ಪಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದರು. ಅವರು ಇಂದು ಕನಕ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾಧ್ಯಮದೊಂದಿಗೆ ಮಾತನಾಡಿದರು. ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು [&#8230;]]]></description>
										<content:encoded><![CDATA[
<p>ನಬಾರ್ಡ್ ನಿಂದ ರಾಜ್ಯಕ್ಕೆ ಶೇ58 ರಷ್ಟು ಹಣ ಕಡಿತ: ಕೇಂದ್ರದಿಂದ ರಾಜ್ಯಕ್ಕೆ ಮತ್ತೊಂದು ಮಹಾ ದ್ರೋಹ: ಸಿಎಂ ಆಕ್ರೋಶ</p>



<p>ಬೆಂಗಳೂರು, ನವೆಂಬರ್ 18: ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹ ಬಡವರಿಗೆ ಕಾರ್ಡು ತಪ್ಪಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದರು.</p>



<p>ಅವರು ಇಂದು ಕನಕ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾಧ್ಯಮದೊಂದಿಗೆ ಮಾತನಾಡಿದರು.</p>



<p>ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ ಹೊರತು, ಬಿಜೆಪಿಯಾಗಲಿ ಜೆಡಿಎಸ್ ಆಗಲಿ ನೀಡಿಲ್ಲ.</p>



<p>ಕಾರ್ಯಕ್ರಮ ಜಾರಿ ಮಾಡಿದ್ದು ಈ ಸಿದ್ದರಾಮಯ್ಯ. 2017ರಲ್ಲಿ ಒಂದು ರೂಪಾಯಿಗೆ ನೀಡುತ್ತಿದ್ದ ಅಕ್ಕಿಯನ್ನು ಉಚಿತವಾಗಿ ನೀಡಲಾಯಿತು. ಇದನ್ನು ಬಿಜೆಪಿ ಮಾಡಿಲ್ಲ. ಸುಮ್ಮನೆ ಮಾತನಾಡುತ್ತಾರೆ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯದಲ್ಲಿ ಇಂಥ ಯೋಜನೆಯನ್ನು ಜಾರಿ ಮಾಡಿದ್ದಾರೆ. ಗುಜರಾತ್, ಮಧ್ಯಪ್ರದೇಶ, ಬಿಹಾರ, ಉತ್ತರ ಪ್ರದೇಶ, ಹರಿಯಾಣ ಎಲ್ಲಿ ಮಾಡಿದ್ದಾರೆ ಹೇಳಿ ಎಂದು ಪ್ರಶ್ನಿಸಿದರು.</p>



<p>ಏಕಾಏಕಿ ಬಿಪಿಎಲ್ ಕಾರ್ಡುಗಳನ್ನು ಕಡಿತಗೊಳಿಸಲಾಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅರ್ಹರಿಗೆ ತಪ್ಪಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.</p>



<p>ಗ್ಯಾರಂಟಿಗಳ ಬಗ್ಗೆ ಮಾತನಾಡಲು ಹೆಚ್.ಡಿ .ಕುಮಾರಸ್ವಾಮಿ ಯವರಿಗೆ ಯಾವ ನೈತಿಕ ಹಕ್ಕಿದೆ</p>



<p>ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರ ಕೇವಲ ಗ್ಯಾರಂಟಿ ಎನ್ನುತ್ತಿದೆ ತೆರಿಗೆ ಹಣ ಎಲ್ಲಿ ಹೋಗುತ್ತಿದೆ ಎಂದು ಜನರಿಗೆ ಉತ್ತರ ನೀಡಬೇಕು ಎಂದು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿ ಇರುವಾಗ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದರೆ? ಅವರಿಗೆ ಮಾತನಾಡಲು ಯಾವ ನೈತಿಕ ಹಕ್ಕಿದೆ ಎಂದರು.</p>



<p>ರಾಜ್ಯಕ್ಕೆ ತೆರಿಗೆ ಹಣ ಕೊಡಿಸಲಿ</p>



<p>ನಾವು ಕರ್ನಾಟಕ ರಾಜ್ಯದಿಂದ ಕೇಂದ್ರಕ್ಕೆ 4.50 ಲಕ್ಷ ಕೋಟಿ ತೆರಿಗೆಯನ್ನು ಕಟ್ಟುತ್ತೇವೆ. ನಮಗೆ ವಾಪಸ್ಸು ಬರುವುದು 59 ಸಾವಿರ ಕೋಟಿ ಮಾತ್ರ. ಉಳಿದ ದುಡ್ಡು ಕೇಂದ್ರದಲ್ಲಿಯೇ ಇರುತ್ತದೆ. ಅದನ್ನು ರಾಜ್ಯಕ್ಕೆ ಕೊಡಿಸಲಿ ಎಂದರು. ಬರೀ ಮಾತನಾಡಿದರೆ ಪ್ರಯೋಜನವೇನು? ಹೆಚ್.ಡಿ.ದೇವೇಗೌಡರಾಗಲಿ, ಕುಮಾರಸ್ವಾಮಿಯವರಾಗಲಿ ಕರ್ನಾಟಕಕ್ಕೆ ಅನ್ಯಾಯವಾದಾಗ ಮಾತನಾಡಿದ್ದರೆಯೇ ಎಂದು ಪ್ರಶ್ನಿಸಿದರು.</p>



<p>ಕುಮಾರ ಸ್ವಾಮಿ, ಪ್ರಹ್ಲಾದ ಜೋಷಿಯವರುಗಳು ಕರ್ನಾಟಕದ ಮಂತ್ರಿಗಳಾಗಿ ಏನು ಮಾಡುತ್ತಿದ್ದಾರೆ ?</p>



<p>ನಬಾರ್ಡ್ ವತಿಯಿಂದ ಕಳೆದ ವರ್ಷ 5600 ಕೋಟಿ ಸಾಲ ರಾಜ್ಯಕ್ಕೆ ನೀಡಲಾಗಿತ್ತು. ಈ ವರ್ಷ 2340 ಕೋಟಿ ನೀಡಿದ್ದಾರೆ ಇದು ಅನ್ಯಾಯವಲ್ಲವೇ? ಸಾಲದ ಪ್ರಮಾಣವನ್ನು 58% ರಷ್ಟು ಕಡಿಮೆ ಮಾಡಿದ್ದಾರೆ. ಕುಮಾರ ಸ್ವಾಮಿ, ಪ್ರಹ್ಲಾದ ಜೋಷಿಯವರುಗಳು ಕರ್ನಾಟಕದ ಮಂತ್ರಿಗಳಾಗಿ ಏನು ಮಾಡುತ್ತಿದ್ದಾರೆ ಎಂದರು. ರೈತರಿಗೆ ಅನ್ಯಾಯ ಮಾಡಬೇಡಿ ಇದು ದ್ರೋಹದ ಕೆಲಸ ಎಂದು ಪ್ರಧಾನ ಮಂತ್ರಿಗಳಿಗೆ, ಹಣಕಾಸು ಸಚಿವ ನಿರ್ಮಾಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದೇನೆ ಎಂದರು.</p>



<p>ನಾನು ಅಧಿಕಾರಕ್ಕೆ ಬಂದ ನಂತರ 5 ಲಕ್ಷದವರೆಗೆ ಬಡ್ಡಿರಹಿತ ಸಾಲ. 15 ಲಕ್ಷದವರೆಗೆ ಶೇಕಡಾ 3% ದರದಲ್ಲಿ ಸಾಲ ನೀಡಲಾಗಿದೆ. ನಬಾರ್ಡ್ ಬರುವುದು ಹಣಕಾಸಿನ ಮಂತ್ರಿಗಳ ಕೆಳಗೆ ಬರುತ್ತದೆ. ನಿರ್ಮಲಾ ಸೀತಾರಾಮನ್ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.‌</p>



<p>2023-24 ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ. ಅನುದಾನ ನೀಡುವುದಾಗಿ ಹೇಳಿದ್ದರು. ಕುಮಾರಸ್ವಾಮಿ ಈ ಬಗ್ಗೆ ಏನು ಕೇಳಿದ್ದಾರೆ? 15ನೇ ಹಣಕಾಸು ಯೋಜನೆಯಡಿ 11595 ಕೋಟಿ ಘೋಷಣೆ ಮಾಡಿದ್ದರು. ಎಲ್ಲಿ ಕೊಟ್ಟರು. ಇದನ್ನು ನೀವು ಕೇಳುವುದಿಲ್ಲ ಎಂದರು. 56000 ಕೋಟಿ ರೂಪಾಯಿಗಳ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿದ್ದೇವೆ . ಬಿಜೆಪಿ ಅಧಿಕಾರದಲ್ಲಿರುವ ರಾಜ್ಯ ಗಳಲ್ಲಿ ಏಕೆ ಕೊಡುತ್ತಿಲ್ಲ ಎಂದರು.</p>



<p>ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳು ಜಾಹೀರಾತು: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ನಡೆಸಲು ಪರಿಶೀಲನೆ</p>



<p>ಮಹಾರಾಷ್ಟ್ರ ಜನರನ್ನು ದಾರಿತಪ್ಪಿಸಲು ಮತಗಳಿಸಲು ಮಹಾರಾಷ್ಟ್ರ ಸರ್ಕಾರ ನೀಡಿರುವ ಸುಳ್ಳು ಜಾಹೀರಾತು ಎಂದರು. ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ನಡೆಸಲು ಪರಿಶೀಲನೆ ಮಾಡಲಾಗುತ್ತಿದೆ ಎಂದರು.</p>
]]></content:encoded>
					
		
		
			</item>
		<item>
		<title>ಕೇಂದ್ರ ಸರ್ಕಾರದ ಬೆಲೆಯೇರಿಕೆಯಿಂದ ಬಳಲಿದ್ದ ಪ್ರಜೆಗಳಿಗೆ &#8216;ಗ್ಯಾರಂಟಿ&#8217; ಸರ್ಕಾರದ ಭರವಸೆ : ಸಿಎಂ ಸಿದ್ದರಾಮಯ್ಯ</title>
		<link>https://peepalmedia.com/governments-promise-of-guarantee-cm-siddaramaiah/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 07 Jul 2023 13:56:38 +0000</pubDate>
				<category><![CDATA[ರಾಜಕೀಯ]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[ಸಿದ್ದರಾಮಯ್ಯ]]></category>
		<guid isPermaLink="false">https://peepalmedia.com/?p=23361</guid>

					<description><![CDATA[ಎಂಟು ವರ್ಷಗಳಿಂದ ಕೇಂದ್ರ ಸರ್ಕಾರದ ಬೆಲೆ ಏರಿಕೆಯಿಂದ ಬಳಲಿದ್ದ ನಮ್ಮ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಪೂರ್ಣಪ್ರಮಾಣದ ಆಯವ್ಯಯ ಮಂಡನೆ- ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಕಿ ಕೊಡ್ತೀವಿ ಅಂದಾಗ ಬೇಡ ಹಣ ಕೊಡಿ ಅಂದ್ರು-ಈಗ ಹಣ ಕೊಡ್ತಿದ್ದೀವಿ. ಬೇಡ ಅಕ್ಕಿ ಕೊಡಿ ಅಂತಾರೆ: ಬಿಜೆಪಿಯವರ ಡಬ್ಬಲ್ ಟಂಗ್ ನಮ್ಮ ಗ್ಯಾರಂಟಿಗಳಿಗೆ ನಾಡಿನ ಶೇ90 ರಷ್ಟು ಮಂದಿ ಫಲಾನುಭವಿಗಳು ಈಗಾಗಲೇ ಕೋಟಿ ಮಂದಿ ನೋಂದಣಿ ಮಾಡಿಸಿದ್ದಾರೆ. ಪ್ರತೀ ದಿನ 49 ಲಕ್ಷ ಮಹಿಳೆಯರು ಉಚಿತ ಪ್ರಯಾಣಿಸುತ್ತಿದ್ದಾರೆ ಬೆಂಗಳೂರು : ದುರ್ಬಲ ವರ್ಗದ [&#8230;]]]></description>
										<content:encoded><![CDATA[
<p><em><strong>ಎಂಟು ವರ್ಷಗಳಿಂದ ಕೇಂದ್ರ ಸರ್ಕಾರದ ಬೆಲೆ ಏರಿಕೆಯಿಂದ ಬಳಲಿದ್ದ ನಮ್ಮ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಪೂರ್ಣಪ್ರಮಾಣದ ಆಯವ್ಯಯ ಮಂಡನೆ- ಮುಖ್ಯಮಂತ್ರಿ ಸಿದ್ದರಾಮಯ್ಯ</strong></em></p>



<p><em><strong>ಅಕ್ಕಿ ಕೊಡ್ತೀವಿ ಅಂದಾಗ ಬೇಡ ಹಣ ಕೊಡಿ ಅಂದ್ರು-ಈಗ ಹಣ ಕೊಡ್ತಿದ್ದೀವಿ. ಬೇಡ ಅಕ್ಕಿ ಕೊಡಿ ಅಂತಾರೆ: ಬಿಜೆಪಿಯವರ ಡಬ್ಬಲ್ ಟಂಗ್</strong></em></p>



<p><em><strong>ನಮ್ಮ ಗ್ಯಾರಂಟಿಗಳಿಗೆ ನಾಡಿನ ಶೇ90 ರಷ್ಟು ಮಂದಿ ಫಲಾನುಭವಿಗಳು</strong></em></p>



<p><em><strong>ಈಗಾಗಲೇ ಕೋಟಿ ಮಂದಿ ನೋಂದಣಿ ಮಾಡಿಸಿದ್ದಾರೆ. ಪ್ರತೀ ದಿನ 49 ಲಕ್ಷ ಮಹಿಳೆಯರು ಉಚಿತ ಪ್ರಯಾಣಿಸುತ್ತಿದ್ದಾರೆ</strong></em></p>



<p>ಬೆಂಗಳೂರು : ದುರ್ಬಲ ವರ್ಗದ ಜನರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಪೂರ್ಣ ಪ್ರಮಾಣದ ಬಜೆಟ್ ನ್ನು ಮಂಡಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p>



<p>ಅವರು ಇಂದು ತಮ್ಮ 14 ನೇ ಆಯವ್ಯಯ ಮಂಡಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.</p>



<p>ನಮ್ಮ ಸರ್ಕಾರ ನೀಡಿದ ಭರವಸೆಗಳು , ಜನರ ಹೊಸ ಆಶೋತ್ತರಗಳಿಗೆ ಸ್ಪಂದಿಸುತ್ತಿದೆ. 2023-24 ರ ಬಜೆಟ್ ಗಾತ್ರ 3,27,747 ಕೋಟಿ ರೂ.ಗಳಾಗಿದೆ. 2022-23 ರಲ್ಲಿ ಬಜೆಟ್ 265720 ಕೋಟಿ ರೂ. ಗಳ ಚುನಾವಣಾ ಪೂರ್ವ ಬಜೆಟ್ ನ್ನು ಹಿಂದಿನ ಸರ್ಕಾರ ಮಂಡಿಸಿತ್ತು.<br>ಈ ಬಜೆಟ್ ನಾವು ಜನತೆಗೆ ನೀಡಿದ್ದ 5 ಗ್ಯಾರಂಟಿಗಳು, ಆಶ್ವಾಸನೆಗಳು ಮತ್ತು ನಮ್ಮ ಪ್ರಣಾಳಿಕೆಯಲ್ಲಿ ಹೇಳಿದ್ದ ಕೆಲವು ಭರವಸೆಗಳನ್ನು ಒಳಗೊಂಡಿರುವ ಹಾಗೂ ಜಾರಿಮಾಡುತ್ತಿರುವ ಗ್ಯಾರಂಟಿ ಬಜೆಟ್ ಆಗಿದೆ ಎಂದರು.</p>



<p>ನಮ್ಮ 5 ಗ್ಯಾರೆಂಟಿಗಳಿಗೆ ಈ ವರ್ಷದ ಉಳಿದ ಅವಧಿಗೆ ಒಟ್ಟು 35410 ರೂ. ಕೋಟಿ ಅಗತ್ಯವಿದೆ. ಐದು ಗ್ಯಾರೆಂಟಿಗಳಿಗೆ ವರ್ಷಕ್ಕೆ ಒಟ್ಟು 52000 ಕೋಟಿ ರೂ. ಗಳಿಗೂ ಹೆಚ್ಚು ಅನುದಾನ ಅಗತ್ಯವಿದೆ. ವಿರೋಧ ಪಕ್ಷದವರು , ಇವುಗಳಿಗೆ ದುಡ್ಡು ಹೇಗೆ ಸರಿದೂಗಿಸುತ್ತಾರೆ. ಗ್ಯಾರೆಂಟಿ ಜಾರಿ ಸಾಧ್ಯವಿಲ್ಲ ಎಂದು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಯವರು ನಾವು ಘೋಷಣೆ ಮಾಡಿದಾಗ, ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಲಿದೆ ಎಂದು ಟೀಕಿಸಿದ್ದರು. ನಾವು ಗ್ಯಾರೆಂಟಿಗಳಿಗೆ ಹಣ ಕ್ರೋಢೀಕರಣ ಮಾಡುತ್ತೇವೆ. ಎಲ್ಲ ಗ್ಯಾರೆಂಟಿಗಳನ್ನು ನೂರಕ್ಕೆ ನೂರು ಜಾರಿಗೊಳಿಸುತ್ತೇವೆ. ನಮ್ಮ ಮಾತಿನಂತೆ ನಡೆದುಕೊಂಡಿದ್ದೇವೆ. ರಾಜ್ಯ ದಿವಾಳಿಯಾಗದಂತೆ ನೋಡಿಕೊಳ್ಳಲಾಗಿದೆ. ಪ್ರಣಾಳಿಕೆಯಲ್ಲಿ ಹೇಳಿದ 76 ಕಾರ್ಯಕ್ರಮಗಳನ್ನು ಜಾರಿ ಮಾಡಲು ಘೋಷಣೆ ಮಾಡಲಾಗಿದೆ. ಅವುಗಳಿಗೆ ಅನುದಾನವನ್ನೂ ಮೀಸಲಿರಿಸಲಾಗಿದೆ ಎಂದರು.</p>



<p><em><strong>ಗೃಹಲಕ್ಷ್ಮಿ :</strong></em><br>1 ಕೋಟಿ 30 ಲಕ್ಷ ಫಲಾನುಭವಿಗಳಿಗೆ ಲಾಭವಾಗಲಿದೆ. ಈ ವರ್ಷದ ಉಳಿದ ಅವಧಿಗೆ 17,500 ಕೋಟಿ ರೂ. ಹಾಗೂ ಇಡೀ ವರ್ಷಕ್ಕೆ 26,250 ಕೋಟಿ ರೂ. ಅಗತ್ಯವಿದೆ. ಜುಲೈ 16 ರಿಂದ ನೋಂದಣಿ ಪ್ರಾರಂಭವಾಗಿ, ಆಗಸ್ಟ್ 15 ಅಥವಾ 16 ಕ್ಕೆ ಮೊದಲನೇ ಕಂತು ಬಿಡುಗಡೆಯಾಗಲಿದೆ. ಕುಟುಂಬದ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂ. ಅವರ ಖಾತೆಗೆ ವರ್ಗಾಯಿಸಲಾಗುವುದು ಎಂದರು.</p>



<p><em><strong>ಗೃಹಜ್ಯೋತಿ :</strong></em><br>ಈ ಯೋಜನೆಯಡಿ ರಾಜ್ಯದ ಶೇ.99 ರಷ್ಟು ಕುಟುಂಬಗಳು ಯೋಜನೆಗೆ ವ್ಯಾಪ್ತಿಗೊಳಪಡುತ್ತವೆ. 1 ಕೋಟಿಗೂ ಹೆಚ್ಚು ನೋಂದಣಿಯಾಗಿದ್ದು, ಈ ವರ್ಷದ ಬಾಕಿ ಅವಧಿಗೆ 9000 ಕೋಟಿ ರೂ. ಇಡೀ ವರ್ಷಕ್ಕೆ 13500 ಕೋಟಿ ರೂ. ಅಗತ್ಯವಿದೆ ಎಂದರು.</p>



<p><em><strong>ಶಕ್ತಿ ಯೋಜನೆ :</strong></em><br>ಜೂನ್ 11 ರಿಂದ ಜಾರಿಗೊಳಿಸಲಾಗಿದ್ದು, ಪ್ರತಿದಿನ ಸುಮಾರು 49.6 ಲಕ್ಷ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಇಲ್ಲಿಯವರೆಗೆ 13.56 ಕೋಟಿ ಉಚಿತ ಟ್ರಿಪ್ ಮಾಡಲಾಗಿದೆ. ಜೂನ್ 11 ರಿಂದ ಮಾರ್ಚ್ ಅಂತ್ಯದವರೆಗೆ 2,800 ಕೋಟಿ ರೂ. ಹಾಗೂ ಇಡೀ ವರ್ಷಕ್ಕೆ 4000 ಕೋಟಿ ರೂ. ಅಗತ್ಯವಿದೆ ಎಂದರು.</p>



<p><em><strong>ಅನ್ನಭಾಗ್ಯ :</strong></em><br>ಹಿಂದೆ ನಾನು ಸಿಎಂ ಆಗಿದ್ದಾಗ, ಪ್ರತಿ ಬಿಪಿಎಲ್ ಅವರಿಗೆ 7 ಕೇಜಿ ಅಕ್ಕಿ ನೀಡಲಾಗುತ್ತಿತ್ತು. ಹಸಿವು ಮುಕ್ತ ಕರ್ನಾಟಕ ಮಾಡಬೇಕು. ಯಾರು ಹಸಿದು ಮಲಗಬಾರದು. ಈ ಬಾರಿ 10 ಕೆಜಿ ಆಹಾರ ಧಾನ್ಯ ಕೊಡುತ್ತೇವೆ ಎಂದು ಘೋಷಿಸಿದ್ದೆವು. ಎಲ್ಲಾ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ದಾರರು 4.42 ಕೋಟಿ ಜನರಿಗೆ ಈ ಯೋಜನೆಯ ಲಾಭವಾಗಲಿದೆ. ಈ ವರ್ಷಕ್ಕೆ 10275 ಕೋಟಿ ರೂ. ಬೇಕಾಗುತ್ತದೆ. ಜುಲೈ 1 ರಿಂದ ಅಕ್ಕಿ ನೀಡುವುದಾಗಿ ನೀಡಿರುವ ಮಾತನ್ನು ತಪ್ಪಬಾರದು ಎಂದು ಜುಲೈ 10 ರಿಂದ 5 ಕೆಜಿಗೆ 170 ರೂ.ಗಳನ್ನು ಪ್ರತಿಯೊಬ್ಬ ಫಲಾನುಭವಿಗೆ ನೀಡಲಾಗುವುದು. ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿಸಲು ಟೆಂಡರ್ ಕರೆಯಲಾಗಿದೆ. ಅಕ್ಕಿ ಸಿಗುವವರೆಗೆ ಫಲಾನುಭವಿಗಳ ಖಾತೆಗೆ 170 ರೂ. ನೀಡಲಾಗುವುದು ಎಂದರು.</p>



<p><em><strong>ಯುವನಿಧಿ</strong></em><br>2022-23 ರಲ್ಲಿ ತೇರ್ಗಡೆಯಾದ ಪದವೀಧರರು, ಡಿಪ್ಲೋಮಾ ಪಡೆದವರು 6 ತಿಂಗಳವರೆಗೆ ಉದ್ಯೋಗ ಸಿಗದಿದ್ದರೆ, ಅಂತಹವರಿಗೆ 24 ತಿಂಗಳವರೆಗೆ ಪದವೀಧರರಿಗೆ ಮಾಹೆಯಾನ 3000 ರೂ. ಹಾಗೂ ಡಿಪ್ಲೋಮಾ ಪಡೆದವರಿಗೆ 1500 ರೂ. ನೀಡಲಾಗುವುದು. ಈ ವರ್ಷಕ್ಕೆ 215 ಕೋಟಿ ರೂ. ಅಗತ್ಯವಿದ್ದು , ಇಡೀ ವರ್ಷಕ್ಕೆ 1000 ಕೋಟಿ ರೂ.ಗಳಾಗುತ್ತದೆ. ಒಟ್ಟು 3ಲಕ್ಷ70 ಸಾವಿರ ವಿದ್ಯಾರ್ಥಿಗಳಿಗೆ ಈ ಯೋಜನೆಯ ಲಾಭ ದೊರೆಯಲಿದೆ ಎಂದು ತಿಳಿಸಿದರು.</p>



<p>ಎಸ್ ಸಿಎಸ್ ಪಿ/ ಟಿಎಸ್ ಪಿ ಕಾರ್ಯಕ್ರಮಗಳಿಗೆ 34,294 ಕೋಟಿ ರೂ. ನೀಡಿದ್ದೇವೆ , 6,060 ಕೋಟಿ ರೂ.ಗಳಷ್ಟು ಹಂಚಿಕೆಯನ್ನು ಹೆಚ್ಚಿಸುವ ಮೂಲಕ,ಈ ವರ್ಗಗಳಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಾಗಿದೆ.<br>ಮಹಿಳಾ ಉದ್ದೇಶಿತ ಆಯವ್ಯಯ 70,427 ಕೋಟಿ ರೂ.ಗಳಿದ್ದು , ಹಿಂದಿನ ಸಾಲಿಗೆ ಹೋಲಿಸಿದರೆ 27,793 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ. ಇಂದಿರಾ ಕ್ಯಾಂಟೀನ್ ಮರು ಪ್ರಾರಂಭಿಸಲಾಗಿದ್ದು , ಇನ್ನೂ ಹೆಚ್ಚಿನ ಕ್ಯಾಂಟೀನ್ ಗಳನ್ನು ರಾಜ್ಯದ ವಿವಿಧ ಸ್ಥಳಗಳಲ್ಲಿ ಪ್ರಾರಂಭಿಸಲಾಗುವುದು ಎಂದರು.</p>



<p>ಹಿಂದಿನ ಸರ್ಕಾರ ಮೂರ್ಖತನದಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳಾಗಿದೆ. ನಮ್ಮ ಸರ್ಕಾರ ಪ್ರಗತಿದಾಯಕ, ಬಡವರ ಕೈಗೆ ದುಡ್ಡು,ಉದ್ಯೋಗ ನೀಡುವ , ರಾಜ್ಯವನ್ನು ಹಸಿವು ಮುಕ್ತ ಮಾಡುವ ಹಾಗೂ ಬಂಡವಾಳ ಆಕರ್ಷಿಸುವಂತಹ ಬಜೆಟ್ ಮಂಡಿಸಲಾಗಿದೆ ಎಂದರು.</p>
]]></content:encoded>
					
		
		
			</item>
	</channel>
</rss>
