<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>2023 Assembly Election &#8211; Peepal Media</title>
	<atom:link href="https://peepalmedia.com/tag/2023-assembly-election/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Fri, 09 Dec 2022 06:14:43 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>2023 Assembly Election &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಗುಜರಾತ್ ಫಲಿತಾಂಶದ ಬಗ್ಗೆ ರಾಜ್ಯ ಬಿಜೆಪಿ ಉತ್ಸಾಹ: 2023ಕ್ಕೆ ಸ್ಥಳೀಯ ಸಮಸ್ಯೆಗಳು ಮುಖ್ಯ ಎಂದ ಕಾಂಗ್ರೆಸ್</title>
		<link>https://peepalmedia.com/state-bjp-excited-about-gujarat-result-congress-says-local-issues-are-important-for-2023/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 09 Dec 2022 06:14:43 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[2023 Assembly Election]]></category>
		<category><![CDATA[B S YADIYURAPPA]]></category>
		<category><![CDATA[BASAVARAJ BOMMAYI]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[congrees]]></category>
		<category><![CDATA[gujarath election]]></category>
		<category><![CDATA[himachal pradesh e;lection]]></category>
		<category><![CDATA[india]]></category>
		<category><![CDATA[JDS]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[siddaramayya]]></category>
		<guid isPermaLink="false">https://peepalmedia.com/?p=18009</guid>

					<description><![CDATA[ಬೆಂಗಳೂರು: ಗುಜತಾರ್‌ನಲ್ಲಿ ಬಿಜೆಪಿ ಗೆದ್ದಿರುವುದರಿಂದ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿಯೂ ಬಿಜೆಪಿ ಅಧಿಕಾರದ ಪಟ್ಟ ಏರುವ ಲಕ್ಷಣಗಳು ಕಂಡುಬರುತ್ತಿವೆ ಎಂದು ಅಭಿಪ್ರಾಯ ಪಟ್ಟಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ರಾಜ್ಯ ಕಾಂಗ್ರೆಸ್‌ ಪಕ್ಷ, ಒಂದು ರಾಜ್ಯದ ಚುನಾವಣೆಗೂ, ಇನ್ನೊಂದು ರಾಜ್ಯದ ಚುನಾವಣೆಗೂ ಯಾವುದೇ ಸಂಬಂಧವಿಲ್ಲ, ಹೀಗಾಗಿ ಚುನಾವಣೆಗಳಿಗೆ ಮುಖ್ಯವಾಗಿ ಬೇಕಾಕಿರುವುದು ಅಲ್ಲಿನ ಸ್ಥಳಿಯ ಸಮಸ್ಯೆಗಳು ಎಂದು ಹೇಳಿದೆ. ಕರ್ನಾಟಕದ ಎರಡೂ ಪ್ರಮುಖ ಪಕ್ಷಗಳು ಗುರುವಾರದ ವಿಧಾನಸಭಾ ಚುನಾವಣಾ ಫಲಿತಾಂಶಗಳಲ್ಲಿ ಪ್ರೋತ್ಸಾಹವನ್ನು ಕಂಡಿವೆ. ಆಡಳಿತಾರೂಢ ಬಿಜೆಪಿ ಗುಜರಾತ್‌ನಲ್ಲಿ ತನ್ನ ಪ್ರಚಂಡ ಗೆಲುವಿನಿಂದ [&#8230;]]]></description>
										<content:encoded><![CDATA[
<p><strong>ಬೆಂಗಳೂರು: </strong>ಗುಜತಾರ್‌ನಲ್ಲಿ ಬಿಜೆಪಿ ಗೆದ್ದಿರುವುದರಿಂದ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿಯೂ ಬಿಜೆಪಿ ಅಧಿಕಾರದ ಪಟ್ಟ ಏರುವ ಲಕ್ಷಣಗಳು ಕಂಡುಬರುತ್ತಿವೆ ಎಂದು ಅಭಿಪ್ರಾಯ ಪಟ್ಟಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ರಾಜ್ಯ ಕಾಂಗ್ರೆಸ್‌ ಪಕ್ಷ, ಒಂದು ರಾಜ್ಯದ ಚುನಾವಣೆಗೂ, ಇನ್ನೊಂದು ರಾಜ್ಯದ ಚುನಾವಣೆಗೂ ಯಾವುದೇ ಸಂಬಂಧವಿಲ್ಲ, ಹೀಗಾಗಿ ಚುನಾವಣೆಗಳಿಗೆ ಮುಖ್ಯವಾಗಿ ಬೇಕಾಕಿರುವುದು ಅಲ್ಲಿನ ಸ್ಥಳಿಯ ಸಮಸ್ಯೆಗಳು ಎಂದು ಹೇಳಿದೆ.</p>



<p>ಕರ್ನಾಟಕದ ಎರಡೂ ಪ್ರಮುಖ ಪಕ್ಷಗಳು ಗುರುವಾರದ ವಿಧಾನಸಭಾ ಚುನಾವಣಾ ಫಲಿತಾಂಶಗಳಲ್ಲಿ ಪ್ರೋತ್ಸಾಹವನ್ನು ಕಂಡಿವೆ. ಆಡಳಿತಾರೂಢ ಬಿಜೆಪಿ ಗುಜರಾತ್‌ನಲ್ಲಿ ತನ್ನ ಪ್ರಚಂಡ ಗೆಲುವಿನಿಂದ ಸ್ಫೂರ್ತಿ ಪಡೆದುಕೊಂಡಿದ್ದರೆ, ಕಾಂಗ್ರೆಸ್ ಪಕ್ಷವು ಹಿಮಾಚಲ ಪ್ರದೇಶದಲ್ಲಿ ಭರ್ಜರಿ ಗೆಲುವಿನಿಂದ ಸ್ಪೂರ್ತಿ ಪಡೆದುಕೊಂಡಿದೆ ಎನ್ನಲಾಗಿದೆ.</p>



<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರಕಾರ, ʼಗುಜರಾತ್ ಫಲಿತಾಂಶವು ಏಪ್ರಿಲ್ 2023 ರಲ್ಲಿ ಮತ ಚಲಾಯಿಸುವಾಗ ಕರ್ನಾಟಕದ ಚುನಾವಣಾ ಫಲಿತಾಂಶದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಹೀಗಾಗಿ ಇತರ ಪಕ್ಷಗಳು ಆಡಳಿತ ನಡೆಸುತ್ತಿರುವ ಸರ್ಕಾರಗಳ ವಿರುದ್ಧ ಆಡಳಿತ ವಿರೋಧಿ ಅಲೆ ಇದ್ದರೂ, ಜನರು ಬಿಜೆಪಿ ಸರ್ಕಾರಗಳನ್ನು ಬೆಂಬಲಿಸುವ ವಾತಾವರಣವಿದ. ಗುಜರಾತ್ ಫಲಿತಾಂಶವನ್ನು ನೋಡುವುದಾದರೆ, ಜನರು ಉತ್ತಮ ಆಡಳಿತಕ್ಕೆ ಪ್ರತಿಫಲ ನೀಡುತ್ತಾರೆ ಎಂದೆನಿಸುತ್ತಿದೆ ಎಂದು ಹೇಳಿದ್ದಾರೆ.</p>



<p>ʼಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ಸಂಘಟನೆಯಿಂದಾಗಿ ಪಶ್ಚಿಮ ರಾಜ್ಯದಲ್ಲಿ ಸತತ ಏಳನೇ ಬಾರಿಗೆ ಬಿಜೆಪಿ ಅಧಿಕಾರ ಹಿಡಿಯಲು ಸಾಧ್ಯವಾಗಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.</p>



<p>ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಗುಜರಾತ್ ಫಲಿತಾಂಶವು ಮುಂದಿನ ಕರ್ನಾಟಕ &nbsp;ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಘಟಕಕ್ಕೆ 140 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಭರವಸೆ ಮಾಡಿಸಿದೆ. ಹೀಗಾಗಿ ವಿರೋಧ ಪಕ್ಷಗಳು ಈಗಲಾದರೂ ರಾಜ್ಯದಲ್ಲಿ ಅಧಿಕಾರ ಪಡೆಯುವ ಬಗ್ಗೆ ಹಗಲುಗನಸು ಕಾಣುವುದನ್ನು ನಿಲ್ಲಿಸಬೇಕುʼ ಎಂದು ಹೇಳಿದ್ದಾರೆ.</p>



<p>ʼಗುಜರಾತ್ ಫಲಿತಾಂಶವು ಕರ್ನಾಟಕದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷವು ಯಾವುದೇ ಪ್ರಚಾರವಿಲ್ಲದೆ ಸುಲಭವಾಗಿ ಗೆಲ್ಲುತ್ತದೆ ಎಂದು ಅಭಿಪ್ರಾಪಟ್ಟಿದ್ದಾರೆ.</p>



<p>ʼಕರ್ನಾಟಕವು ಅತ್ಯಂತ ಭ್ರಷ್ಟ ಸರ್ಕಾರವನ್ನು ಹೊಂದಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದು, &nbsp;ವಿಧಾನಸಭಾ ಚುನಾವಣೆಯ ಫಲಿತಾಂಶವು ಸ್ಥಳೀಯ ವಿಷಯಗಳ ಮೇಲೆ ಅವಲಂಬಿತವಾಗಿರುತ್ತದೆ ಎಂದು ಹೇಳಿದ್ದಾರೆ.</p>



<p>ಗುಜರಾತ್‌ ನಲ್ಲಿ ಆಮ್ ಆದ್ಮಿ ಪಕ್ಷವು ಕಾಂಗ್ರೆಸ್ ಮತಗಳನ್ನು ಕಬಳಿಸಿದೆ ಎಂದು ಆರೋಪಿಸಿದ ಸಿದ್ದರಾಮಯ್ಯನವರು, ʼಬಿಜೆಪಿಯೂ, ಎಎಪಿಗೆ ಹಣಕಾಸು ನೆರವು ನೀಡುವ ಮತ್ತು ಅದರ ಗೆಲುವನ್ನು ಖಚಿತಪಡಿಸಿಕೊಳ್ಳಲು ಮತಗಳನ್ನು ವಿಭಜಿಸುವ ತಂತ್ರವನ್ನು ಬಳಸಿದೆ ಎಂದು ಹೇಳಿದ್ದಾರೆ.</p>



<p>ಕರ್ನಾಟಕದಲ್ಲಿ &nbsp;ಜೆಡಿಎಸ್ ಅನ್ನು ಬಳಸುವ ಮೂಲಕ ಅದೇ ತಂತ್ರವನ್ನು ಅನುಸರಿಸಬಹುದು. ಆದರೆ ಅದು ಇಲ್ಲಿ ಕೆಲಸ ಮಾಡುವುದಿಲ್ಲʼ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ಗುಜರಾತ್ ಚುನಾವಣೆ ಫಲಿತಾಂಶ: ಅನೇಕ ಕಾಂಗ್ರೆಸ್ ನಾಯಕರು ಬಿಜೆಪಿಗೆ ಪಲಾಯನ- ಸಚಿವ ಆರ್.ಅಶೋಕ್</title>
		<link>https://peepalmedia.com/gujarat-election-result-many-congress-leaders-fled-to-bjp-minister-r-ashok/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 09 Dec 2022 03:43:16 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[2023 Assembly Election]]></category>
		<category><![CDATA[B S YADIYURAPPA]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[congrees]]></category>
		<category><![CDATA[gujarath election]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[r ashok]]></category>
		<guid isPermaLink="false">https://peepalmedia.com/?p=18000</guid>

					<description><![CDATA[ಬೆಂಗಳೂರು: 2023ರ ಮೊದಲಾರ್ಧದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದ್ದು, ಗುಜರಾತ್‌ ಚುನಾವಣೆಯಲ್ಲಿನ ಬಿಜೆಪಿಯ ಭರ್ಜರಿ ಗೆಲುವನ್ನು ನೋಡಿ, ಕಾಂಗ್ರೆಸ್ ನಾಯಕರು ಮತ್ತು ಶಾಸಕರು ಬಿಜೆಪಿಗೆ ಪಲಾಯನ ಮಾಡಲು ಬಯಸುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ʼಹಲವಾರು ಕಾಂಗ್ರೆಸ್ ನಾಯಕರಲ್ಲಿ ಸುಮಾರು 12 ಜನರು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ, ಏಕೆಂದರೆ ಅವರು ತಮ್ಮ ಪಕ್ಷವನ್ನು ತೊರೆದು ಬಿಜೆಪಿಗೆ ಸೇರಲು ಬಯಸುತ್ತಿದ್ದಾರೆʼ ಎಂದು ತಿಳಿಸಿದ್ದಾರೆ. ʼಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> 2023ರ ಮೊದಲಾರ್ಧದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದ್ದು, ಗುಜರಾತ್‌ ಚುನಾವಣೆಯಲ್ಲಿನ ಬಿಜೆಪಿಯ ಭರ್ಜರಿ ಗೆಲುವನ್ನು ನೋಡಿ, ಕಾಂಗ್ರೆಸ್ ನಾಯಕರು ಮತ್ತು ಶಾಸಕರು ಬಿಜೆಪಿಗೆ ಪಲಾಯನ ಮಾಡಲು ಬಯಸುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.</p>



<p>ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ʼಹಲವಾರು ಕಾಂಗ್ರೆಸ್ ನಾಯಕರಲ್ಲಿ ಸುಮಾರು 12 ಜನರು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ, ಏಕೆಂದರೆ ಅವರು ತಮ್ಮ ಪಕ್ಷವನ್ನು ತೊರೆದು ಬಿಜೆಪಿಗೆ ಸೇರಲು ಬಯಸುತ್ತಿದ್ದಾರೆʼ ಎಂದು ತಿಳಿಸಿದ್ದಾರೆ.</p>



<p>ʼಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯು ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸಹಾಯ ಮಾಡಲಿಲ್ಲ.ಆದರ ಬದಲು ಎಎಪಿ ಕಾಂಗ್ರೆಸ್ ಮತಗಳನ್ನು ಪಡೆದುಕೊಂಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ ಎಎಪಿ ಸುಮಾರು 5 ಪ್ರತಿಶತದಷ್ಟು ಮತಗಳನ್ನು ಪಡೆದರೂ, ಕರ್ನಾಟಕದಲ್ಲೂ ಕಾಂಗ್ರೆಸ್ ನಿರ್ನಾಮವಾಗುತ್ತದೆʼ ಎಂದು ಟೀಕಿಸಿದ್ದಾರೆ.</p>



<p>ಗುರುವಾರ ಗುಜರಾತ್‌ ಚುನಾವಣೆಯ ಫಲಿತಾಂಶದ ಕುರಿತು ಮಾತನಾಡಿದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರು,ʼ ಬಿಜೆಪಿ ಪಕ್ಷವು ರಾಜ್ಯದಲ್ಲೂ ತನ್ನ ಗುಜರಾತ್ ಸಾಧನೆಯನ್ನು ಪುನರಾವರ್ತಿಸಲಿದೆ, ಹಾಗೆಯೇ ಮುಂಬರುವ 224 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.</p>
]]></content:encoded>
					
		
		
			</item>
		<item>
		<title>ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿ: ಶಾಸಕ ಯತೀಂದ್ರ</title>
		<link>https://peepalmedia.com/2023-assembly-election-siddaramaiah-from-varuna-constituency-mla-yatindra-siddaramaiah/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 05 Dec 2022 07:10:39 +0000</pubDate>
				<category><![CDATA[ರಾಜ್ಯ]]></category>
		<category><![CDATA[2023 Assembly Election]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[siddaramayya]]></category>
		<category><![CDATA[Varuna Assembly Constituency]]></category>
		<category><![CDATA[Yatindra Siddaramaiah]]></category>
		<guid isPermaLink="false">https://peepalmedia.com/?p=17549</guid>

					<description><![CDATA[ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚುನಾವಣೆಗಳಲ್ಲಿ ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದಾಗಲೆಲ್ಲಾ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಮುಂಬರುವ ವಿಧಾನಸಭಾ ʼವರುಣಾದಿಂದ ಸ್ಪರ್ಧಿಸಬೇಕೆಂದು ನಾವು ಬಯಸುತ್ತೇವೆʼ ಎಂದು ಸಿದ್ದರಾಮಯ್ಯನವರ ಪುತ್ರ, ವರುಣಾ ಕ್ಷೇತ್ರದ ಶಾಸಕರಾದ ಯತೀಂದ್ರ ಸಿದ್ದರಾಮಯ್ಯನವರು ಅಭಿಪ್ರಯಾಪಟ್ಟಿದ್ದಾರೆ. ಕಳೆದ ಒಂದು ವರ್ಷದಿಂದ ಸಿದ್ದರಾಮಯ್ಯ ಅವರು, ಮುಂದಿನ ವರ್ಷ(2023) ಏಪ್ರಿಲ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ, ತಾವು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುವುದರ ಬಗ್ಗೆ ತಮ್ಮ ಆಯ್ಕೆಗಳನ್ನು ತೆರೆದಿಟ್ಟಿದ್ದಾರೆ. ಸಿದ್ದರಾಮಯ್ಯ ಅವರು ಈ ಹಿಂದೆ ಹೇಳಿದಂತೆ ʼರಾಜ್ಯದ [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚುನಾವಣೆಗಳಲ್ಲಿ ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದಾಗಲೆಲ್ಲಾ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಮುಂಬರುವ ವಿಧಾನಸಭಾ ʼವರುಣಾದಿಂದ ಸ್ಪರ್ಧಿಸಬೇಕೆಂದು ನಾವು ಬಯಸುತ್ತೇವೆʼ ಎಂದು ಸಿದ್ದರಾಮಯ್ಯನವರ ಪುತ್ರ, ವರುಣಾ ಕ್ಷೇತ್ರದ ಶಾಸಕರಾದ ಯತೀಂದ್ರ ಸಿದ್ದರಾಮಯ್ಯನವರು ಅಭಿಪ್ರಯಾಪಟ್ಟಿದ್ದಾರೆ.</p>



<p>ಕಳೆದ ಒಂದು ವರ್ಷದಿಂದ ಸಿದ್ದರಾಮಯ್ಯ ಅವರು, ಮುಂದಿನ ವರ್ಷ(2023) ಏಪ್ರಿಲ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ, ತಾವು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುವುದರ ಬಗ್ಗೆ ತಮ್ಮ ಆಯ್ಕೆಗಳನ್ನು ತೆರೆದಿಟ್ಟಿದ್ದಾರೆ. ಸಿದ್ದರಾಮಯ್ಯ ಅವರು ಈ ಹಿಂದೆ ಹೇಳಿದಂತೆ ʼರಾಜ್ಯದ ಯಾವುದೇ ಕ್ಷೇತ್ರದಿಂದ ‌ಸ್ಪರ್ಧಿಸಿದರು ಗೆಲ್ಲುವ ವಿಶ್ವಾಸವಿದೆʼ ಎಂದಿದ್ದರು. ಆದರೆ ಚುನಾವಣೆಗೆ ಕೇವಲ ನಾಲ್ಕು ತಿಂಗಳುಗಳು ಮಾತ್ರ ಬಾಕಿ ಇದೆ. ಆದರೆ ಅವರಿಗೆ ಈಗ ಚುನಾವಣೆಯಲ್ಲಿ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕೆಂಬ ಗೊಂದಲ ಉಂಟಾಗಿದೆ. ಇದು ಅವರು ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಿದರು ಗೆಲ್ಲುವ ಕೊರತೆ ಕಂಡುಬರುತ್ತಿದೆಯೇ? ಎನ್ನುವ ಊಹಾಪೋಹಗಳಿಗೆ ಕಾರಣವಾಗಿದೆ.</p>



<p>ಒಂದು ವಾರದ ಹಿಂದಷ್ಟೇ ಅವರ ಪುತ್ರ ಯತೀಂದ್ರ ಅವರ ಹೇಳಿಕೆ ಪ್ರಕಾರ, ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸಬಹುದು ಎನ್ನುವ ಸುದ್ದಿ ಕೇಳಿಬರುತ್ತಿದೆ. ಈ ಕ್ಷೇತ್ರವನ್ನು ಅವರ ತಂದೆ 2018 ರಲ್ಲಿ ಖಾಲಿ ಮಾಡಿದ್ದರು. ಆದರೆ ಅವರು ವರುಣಾಕ್ಕೆ ಬಂದು ಗೆದ್ದರೆ, ಅವರು ಸಿಎಂ ಆಗುವ ಸಾಧ್ಯತೆ ಇದೆ. ಅವರು ವರುಣಾದಿಂದ ಸ್ಪರ್ಧಿಸಿದಾಗಲೆಲ್ಲಾ ಅವರು ಅಧಿಕಾರ ವಹಿಸಿಕೊಂಡಿದ್ದಾರೆ ʼಆದ್ದರಿಂದ, ಅವರು ಇಲ್ಲಿಂದ ಸ್ಪರ್ಧಿಸಬೇಕೆಂದು ನಾವು ಬಯಸುತ್ತೇವೆʼ ಎಂದು ಯತೀಂದ್ರರವರು ಹೇಳಿದ್ದಾರೆ.</p>



<p>2018 ರ ಚುನಾವಣೆಗೆ ಮೊದಲು, ಸಿದ್ದರಾಮಯ್ಯ ಅವರು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು, ಆದರೆ ಅವರು ಸ್ಪರ್ಧಿಸಿದ ಎರಡು ಕ್ಷೇತ್ರಗಳಲ್ಲಿ ಒಂದರಲ್ಲಿ ಸೋತು, ಇನ್ನೊಂದರಲ್ಲಿ ಅಲ್ಪ ಅಂತರದಿಂದ ಗೆದ್ದಿದ್ದರಿಂದ ಮುಖಭಂಗ ಅನುಭವಿಸಬೇಕಾಯಿತು.</p>



<p>ಸಿದ್ದರಾಮಯ್ಯನವರು 2018 ರ ಚುನಾವಣೆಗೆ ಮೊದಲು ಮೈಸೂರು ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ನ ಜಿ.ಟಿ.ದೇವೇಗೌಡ ವಿರುದ್ಧ 36,042 ಮತಗಳ ಅಂತರದಿಂದ ಸೋತಿದ್ದರೆ, ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ವಿರುದ್ಧ ಸಿದ್ದರಾಮಯ್ಯ ಕೇವಲ 1,696 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.</p>



<p>ಕಳೆದ ಒಂದು ವರ್ಷದಿಂದ, ಸಿದ್ಧರಾಮಯ್ಯ ಅವರನ್ನು ವಿವಿಧ ಕ್ಷೇತ್ರಗಳ ಜನರು ತಮ್ಮ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ವಿನಂತಿಸುತ್ತಿರುವುದರಿಂದ ತಮ್ಮ ಆಯ್ಕೆಗಳು ಮುಕ್ತವಾಗಿವೆ ಎಂದು ಸಿದ್ದರಾಮಯ್ಯ ತಿಳಿಸಿದ್ದರು. ಆದರೆ ಅವರು ಯಾವ ಕ್ಷೇತ್ರದಲ್ಲಿ ಸ್ಪರ್ಧೆಗೆ ಇಳಿಯುವ ಮೊದಲು ಅಲ್ಲಿನ ವಾತಾವರಣ ಪರೀಕ್ಷೆ ಮಾಡುತ್ತಿದ್ದಾರೆ. ಹೀಗಾಗಿಯೇ ಅವರು ಹೆಬ್ಬಾಳ, ಬಾದಾಮಿ, ಚಾಮರಾಜಪೇಟೆ ಮತ್ತು ಇತ್ತೀಚೆಗೆ ಕೋಲಾರವನ್ನು ಆಯ್ಕೆಮಾಡಿದ್ದರು ಎನ್ನಲಾಗಿದೆ.</p>



<p>ಕೇವಲ ಒಂದು ಚುನಾವಣೆಯ ನಂತರ ಯತೀಂದ್ರ ಅವರು ತಮ್ಮ ಸ್ಥಾನವನ್ನು ಖಾಲಿ ಮಾಡಲು ಮುಂದಾಗಿರುವುದು ಸಿದ್ದರಾಮಯ್ಯ ಅವರು ವರುಣಾಕ್ಕೆ ಮರಳಬಹುದು ಎನ್ನುವ ಅನುಮಾನ ಸೃಷ್ಟಿಯಾಗಿದೆ ಎಂದು ಕಾಂಗ್ರೆಸ್‌ ಪಕ್ಷದ ಕೆಲವು ಶಾಸಕರು ಅಭಿಪ್ರಾಯಪಟ್ಟಿದ್ದಾರೆ. ಅವರ ಪ್ರಕಾರ ʼಸಿದ್ದರಾಮಯ್ಯನವರು ಮತ್ತೆ ಬಾದಾಮಿಯನ್ನು ಗೆಲ್ಲುವ ಸಾಧ್ಯತೆಗಳು ತುಂಬಾ ಕಡಿಮೆ. ಹೆಬ್ಬಾಳ ಮತ್ತು ಚಾಮರಾಜಪೇಟೆಯಂತಹ ನಗರ ಕ್ಷೇತ್ರಗಳು ಸಹ ಅವರಿಗೆ ಕಠಿಣವಾಗಿರುತ್ತವೆ. ಹೀಗಾಗಿ ಕೋಲಾರದಿಂದ ಸ್ಪರ್ಧಿಸುವ ಬಗ್ಗೆ ಅವರು ಸುಳಿವು ನೀಡಿದ್ದರೂ, ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿದ್ದಕ್ಕಾಗಿ ಈ ವರ್ಷ ಜೆಡಿಎಸ್‌ನಿಂದ ಉಚ್ಛಾಟಿಸಲ್ಪಟ್ಟ ಕೆ.ಶ್ರೀನಿವಾಸ್ ಗೌಡ ಅವರನ್ನು ಕಣಕ್ಕಿಳಿಸುವುದು ಹೆಚ್ಚು ವಿವೇಕಯುತವಾಗಿದೆ ಎಂದು ಕಾಂಗ್ರೆಸ್ ಭಾವಿಸಿರುವುದರಿಂದ ಅದು ತಪ್ಪು ಎನ್ನುವುದು ಕೆಲವರ ಅಭಿಪ್ರಯಾವಾಗಿದೆ.</p>



<p>ಎಂಟು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರವನ್ನು ಐದು ಬಾರಿ, ವರುಣಾ ಕ್ಷೇತ್ರವನ್ನು ಎರಡು ಬಾರಿ ಮತ್ತು ಬಾದಾಮಿಯನ್ನು ಒಂದು ಬಾರಿ ಪ್ರತಿನಿಧಿಸಿದ್ದಾರೆ.</p>



<p>ಮುಂದಿನ ಚುನಾವಣೆಗೆ ಸಿದ್ದರಾಮಯ್ಯನವರು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎನ್ನವು ಗೊಂದಲವು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಒಂದು ರೀತಿಯ ಅನುಕೂಲಕರ ಎಂದು ಹೇಳಲಾಗುತ್ತಿದೆ, ಏಕೆಂದರೆ 2023 ರಲ್ಲಿ ಕಾಂಗ್ರೆಸ್ ಬಹುಮತ ಗಳಿಸಿದರೆ, ಇಬ್ಬರೂ ನಾಯಕರು ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆಸಬೇಕಾಗುತ್ತದೆ ಎನ್ನಲಾಗಿದೆ.</p>
]]></content:encoded>
					
		
		
			</item>
	</channel>
</rss>
