<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>aap celebration &#8211; Peepal Media</title>
	<atom:link href="https://peepalmedia.com/tag/aap-celebration/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Fri, 31 May 2024 10:49:51 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>aap celebration &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಗಂಭೀರ ಖಾಯಿಲೆಯ ಲಕ್ಷಣಗಳಿವೆ, ಆದ್ರೂ ನಾಡಿದ್ದು ಜೈಲಿಗೆ ಹೋಗ್ತಿನಿ: ಕೇಜ್ರಿವಾಲ್‌</title>
		<link>https://peepalmedia.com/has-symptoms-of-serious-illness-but-will-go-to-jail-kejriwal/</link>
		
		<dc:creator><![CDATA[Hanumanth Halageri]]></dc:creator>
		<pubDate>Fri, 31 May 2024 10:16:45 +0000</pubDate>
				<category><![CDATA[Uncategorized]]></category>
		<category><![CDATA[ದೇಶ]]></category>
		<category><![CDATA[AAP]]></category>
		<category><![CDATA[AAP Bangalore Spokesperson Usha Mohan]]></category>
		<category><![CDATA[aap celebration]]></category>
		<category><![CDATA[aravind kejrival]]></category>
		<category><![CDATA[arvind kejriwal]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[court]]></category>
		<category><![CDATA[Court notice]]></category>
		<category><![CDATA[dehali]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[kejrival]]></category>
		<category><![CDATA[modi]]></category>
		<category><![CDATA[New Delhi]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=40168</guid>

					<description><![CDATA[ನವದೆಹಲಿ: ನನ್ನ ದೇಹದೊಳಗೆ ಗಂಭಿರ ಖಾಯಿಲೆಗಳ ಲಕ್ಷಣಗಳಿವೆ. ಆದರೂ ನಾಡಿದ್ದು ಜೂನ್‌ 2ರಂದು ಜೈಲಿಗೆ ಹೋಗಿ ಶರಣಾಗ್ತಿನಿ. ದೇಶದ ಸರ್ವಾಧಿಕಾರಿಗೆ ಬುದ್ಧಿ ಕಲಿಸುವುದಕ್ಕಾಗಿ ನಾನು ಮತ್ತೆ ಜೈಲಿಗೆ ಹೋಗಲಿದ್ದೇನೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಹೇಳಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ‘ನನ್ನನ್ನು ಎಷ್ಟು ದಿನ ಜೈಲಿನಲ್ಲಿ ಇರಿಸಲಾಗುತ್ತದೆ ಎಂದು ನನಗೆ ತಿಳಿದಿಲ್ಲ. ನಾಡಿದ್ದು ತಿಹಾರ್ ಜೈಲಿನಲ್ಲಿ ಪೊಲೀಸರ ಮುಂದೆ ಶರಣಾಗುತ್ತೇನೆ ಎಂದು ಶುಕ್ರವಾರ ಹೇಳಿದ್ದಾರೆ. ಮೇ 10 ರಿಂದ ಮಧ್ಯಂತರ ಜಾಮೀನಿನ ಮೇಲೆ ಹೊರಗಿರುವ ಕೇಜ್ರಿವಾಲ್ [&#8230;]]]></description>
										<content:encoded><![CDATA[
<p></p>



<p> <strong>ನವದೆಹಲಿ:</strong> ನನ್ನ ದೇಹದೊಳಗೆ ಗಂಭಿರ ಖಾಯಿಲೆಗಳ ಲಕ್ಷಣಗಳಿವೆ. ಆದರೂ ನಾಡಿದ್ದು  ಜೂನ್‌ 2ರಂದು ಜೈಲಿಗೆ ಹೋಗಿ ಶರಣಾಗ್ತಿನಿ. ದೇಶದ ಸರ್ವಾಧಿಕಾರಿಗೆ ಬುದ್ಧಿ ಕಲಿಸುವುದಕ್ಕಾಗಿ ನಾನು ಮತ್ತೆ ಜೈಲಿಗೆ ಹೋಗಲಿದ್ದೇನೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಹೇಳಿದ್ದಾರೆ. </p>



<p>ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ‘ನನ್ನನ್ನು ಎಷ್ಟು ದಿನ ಜೈಲಿನಲ್ಲಿ ಇರಿಸಲಾಗುತ್ತದೆ ಎಂದು ನನಗೆ ತಿಳಿದಿಲ್ಲ. ನಾಡಿದ್ದು ತಿಹಾರ್ ಜೈಲಿನಲ್ಲಿ ಪೊಲೀಸರ ಮುಂದೆ ಶರಣಾಗುತ್ತೇನೆ ಎಂದು ಶುಕ್ರವಾರ ಹೇಳಿದ್ದಾರೆ. </p>



<p>ಮೇ 10 ರಿಂದ ಮಧ್ಯಂತರ ಜಾಮೀನಿನ ಮೇಲೆ ಹೊರಗಿರುವ ಕೇಜ್ರಿವಾಲ್ ಹೊರಗಿದ್ದರು. ಅವರ ದೇಹವು “ಗಂಭೀರ ಕಾಯಿಲೆ”ಯ ಕೆಲವು ಲಕ್ಷಣಗಳನ್ನು ಹೊಂದಿರಬಹುದು ಎಂದು ವೈದ್ಯರು ತಿಳಿಸಿದ್ದರು.</p>



<p><strong>ಚಿತ್ರಹಿಂಸೆಗೆ ತಲೆಬಾಗುವುದಿಲ್ಲ: </strong> ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕೇಜ್ರಿವಾಲ್, “ಅವರು ನನ್ನನ್ನು ಬಗ್ಗಿಸಲು ಮತ್ತು ನನ್ನ ಬಾಯಿ ಮುಚ್ಚಿಸಲು ಹಲವು ರೀತಿಯಲ್ಲಿ ಪ್ರಯತ್ನಿಸಿದರು. ಆದರೆ, ಯಶಸ್ವಿಯಾಗಲಿಲ್ಲ, ನಾನು ಜೈಲಿನಲ್ಲಿದ್ದಾಗ ಹಲವು ರೀತಿಯಲ್ಲಿ ಚಿತ್ರಹಿಂಸೆ ನೀಡಿದರು. ನನ್ನ ಔಷಧಿಗಳನ್ನು ನಿಲ್ಲಿಸಿದರು. ಆದರೂ ನಾನು ಸೋಲಲಿಲ್ಲ ಎಂದರು.</p>



<p>“ಜೈಲಿಗೆ ಹೋದಾಗ ನನ್ನ ತೂಕ 70 ಕೆ.ಜಿ. ಇವತ್ತು 64 ಕೆ.ಜಿ. ಇದೆ. ಜೈಲಿನಿಂದ ಬಿಡುಗಡೆಯಾದ ಮೇಲೂ ತೂಕ ಹೆಚ್ಚುತ್ತಿಲ್ಲ, ಇದು ದೇಹದಲ್ಲಿ ಯಾವುದೋ ಗಂಭೀರ ಕಾಯಿಲೆಯ ಲಕ್ಷಣವೂ ಆಗಿರಬಹುದು ಎಂದು ವೈದ್ಯರು ಹೇಳುತ್ತಿದ್ದಾರೆ. ಅನೇಕ ಪರೀಕ್ಷೆಗಳನ್ನು ಮಾಡಬೇಕಾಗಿದೆ” ಎಂದು ಅವರು ಹೇಳಿದರು.</p>



<p>“ಚುನಾವಣಾ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ನನಗೆ 21 ದಿನಗಳ ಕಾಲಾವಕಾಶ ನೀಡಿತ್ತು. ನಾಡಿದ್ದು ದಿನ ನಾನು ತಿಹಾರ್ ಜೈಲಿಗೆ ಹಿಂತಿರುಗುತ್ತೇನೆ, ಮಧ್ಯಾಹ್ನ 3 ಗಂಟೆ ಸುಮಾರಿಗೆ ನನ್ನ ಮನೆಯಿಂದ ಹೊರಡುತ್ತೇನೆ. ಈ ಬಾರಿ ಅವರು ನನಗೆ ಹೆಚ್ಚು ಚಿತ್ರಹಿಂಸೆ ನೀಡುವ ಸಾಧ್ಯತೆಯಿದೆ. ಆದರೆ ನಾನು ತಲೆಬಾಗುವುದಿಲ್ಲ&#8221; ಎಂದು ಹೇಳಿದರು.</p>



<p><strong>ಉಚಿತ ಯೋಜನೆಗಳ ಮುಂದುವರಿಕೆ:</strong> “ ಜನರಿಗಾಗಿ ಪ್ರಾರಂಭಿಸಲಾಗಿರುವ ಉಚಿತ ವಿದ್ಯುತ್, ಮೊಹಲ್ಲಾ ಚಿಕಿತ್ಸಾಲಯಗಳು, ಆಸ್ಪತ್ರೆಗಳು, ಉಚಿತ ಔಷಧಿಗಳು, ಚಿಕಿತ್ಸೆ, 24 ಗಂಟೆಗಳ ವಿದ್ಯುತ್ ಮತ್ತು ಇತರ ಹಲವು ವಿಷಯಗಳು ಮುಂದುವರಿಯುತ್ತದೆ. ಹಿಂದಿರುಗಿದ ನಂತರ, ನಾವು ದೆಹಲಿಯ ಪ್ರತಿ ತಾಯಿ ಮತ್ತು ಸಹೋದರಿಗೆ ಪ್ರತಿ ತಿಂಗಳು 1,000 ರೂಪಾಯಿಗಳನ್ನು ನೀಡಲು ಪ್ರಾರಂಭಿಸುತ್ತೇವೆ” ಎಂದು ಅವರು ಹೇಳಿದರು.</p>



<p>ನ<strong>ನ್ನ ತಾಯಿಗಾಗಿ ಪ್ರಾರ್ಥಿಸಿ: </strong> ಅಸ್ವಸ್ಥರಾಗಿರುವ ತಮ್ಮ ತಾಯಿಗಾಗಿ ಪ್ರಾರ್ಥಿಸುವಂತೆ ಕೇಜ್ರಿವಾಲ್ ಜನರಲ್ಲಿ ಮನವಿ ಮಾಡಿದ್ದಾರೆ.&nbsp;“ನನ್ನ ಹೆತ್ತವರಿಗೆ ತುಂಬಾ ವಯಸ್ಸಾಗಿದೆ, ನನ್ನ ತಾಯಿ ತುಂಬಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ, ನಾನು ಜೈಲಿನಲ್ಲಿ ಅವಳ ಬಗ್ಗೆ ತುಂಬಾ ಚಿಂತೆ ಮಾಡುತ್ತೇನೆ.  ನನ್ನ ಹೆತ್ತವರನ್ನು ನೋಡಿಕೊಳ್ಳಿ ಮತ್ತು ಅವರಿಗಾಗಿ ಪ್ರಾರ್ಥಿಸಿ” ಎಂದು ಬೇಸರದಿಂದ ಹೇಳಿದರು.</p>



<p>ಅಬಕಾರಿ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನಿನ ಏಳು ದಿನಗಳ ವಿಸ್ತರಣೆಗೆ ಕೇಜ್ರಿವಾಲ್ ಅವರ ಮನವಿಯನ್ನು ಆಲಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು. </p>
]]></content:encoded>
					
		
		
			</item>
		<item>
		<title> ಕೇಜ್ರಿವಾಲ್ ಬಂಧನ ಖಂಡಿಸಿ ಪ್ರತಿಭಟನೆ: ಅತಿಶಿ, ಸೌರಭ್ ಸೇರಿ ಹಲವರು ಪೊಲೀಸ್‌ ವಶಕ್ಕೆ</title>
		<link>https://peepalmedia.com/protest-against-kejriwals-arrest-atishi-saurabh-and-many-others-in-police-custody/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 22 Mar 2024 07:45:47 +0000</pubDate>
				<category><![CDATA[ದೇಶ]]></category>
		<category><![CDATA[AAP Bangalore Spokesperson Usha Mohan]]></category>
		<category><![CDATA[aap candidate]]></category>
		<category><![CDATA[aap celebration]]></category>
		<category><![CDATA[AAP CM CANDIDATE]]></category>
		<category><![CDATA[aravind kejrival]]></category>
		<category><![CDATA[arvind kejrival]]></category>
		<category><![CDATA[arvindh kejriwal]]></category>
		<category><![CDATA[india]]></category>
		<category><![CDATA[karnataka]]></category>
		<category><![CDATA[kejrival]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<guid isPermaLink="false">https://peepalmedia.com/?p=37344</guid>

					<description><![CDATA[ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನ ಖಂಡಿಸಿ ಆಮ್ ಆದ್ಮಿ ಪಕ್ಷವು ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ದೆಹಲಿಯ ಎಎಪಿ ಮುಖಂಡರು ಮತ್ತು ಬೆಂಬಲಿಗರು ಆಪ್ ಮತ್ತು ಬಿಜೆಪಿ ಪ್ರಧಾನ ಕಛೇರಿ ಬಳಿಯಿರುವ ಐಟಿಒ ಬಳಿ &#160;ಬೆಳಗ್ಗೆಯಿಂದಲೇ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಈ ಪ್ರದೇಶದಲ್ಲಿ ಗುಂಪು ಸೇರುವುದನ್ನು ನಿಷೇಧಿಸಿ 144 ಸೆಕ್ಷನ್ ಕರ್ಪ್ಯೂ ಜಾರಿ ಮಾಡಲಾಗಿದೆ. ಪ್ರತಿಭಟನಾ ನಿರತ ಸಚಿವರಾದ ಸೌರಭ್‌ ಭಾರದ್ವಾಜ್‌, ಅತಿಶಿ ಸೇರಿದಂತೆ ಹಲವು [&#8230;]]]></description>
										<content:encoded><![CDATA[
<p><strong>ನವದೆಹಲಿ:</strong> ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನ ಖಂಡಿಸಿ ಆಮ್ ಆದ್ಮಿ ಪಕ್ಷವು ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ದೆಹಲಿಯ ಎಎಪಿ ಮುಖಂಡರು ಮತ್ತು ಬೆಂಬಲಿಗರು ಆಪ್ ಮತ್ತು ಬಿಜೆಪಿ ಪ್ರಧಾನ ಕಛೇರಿ ಬಳಿಯಿರುವ ಐಟಿಒ ಬಳಿ &nbsp;ಬೆಳಗ್ಗೆಯಿಂದಲೇ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ.</p>



<p>ಆದರೆ, ಈ ಪ್ರದೇಶದಲ್ಲಿ ಗುಂಪು ಸೇರುವುದನ್ನು ನಿಷೇಧಿಸಿ 144 ಸೆಕ್ಷನ್ ಕರ್ಪ್ಯೂ ಜಾರಿ ಮಾಡಲಾಗಿದೆ. ಪ್ರತಿಭಟನಾ ನಿರತ ಸಚಿವರಾದ ಸೌರಭ್‌ ಭಾರದ್ವಾಜ್‌, ಅತಿಶಿ ಸೇರಿದಂತೆ ಹಲವು ಆಪ್‌ ನಾಯಕರನ್ನು ವಶಕ್ಕೆ ಪಡೆಯಲಾಗಿದೆ.</p>



<p>ಎಎಪಿ ಬೆಂಬಲಿಗರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಎರಡೂ ಪಕ್ಷಗಳ ಪ್ರಧಾನ ಕಚೇರಿ ಇರುವ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ನಿರ್ಮಿಸಿ ಸಂಚಾರಕ್ಕೆ ತಡೆ ನೀಡಿದ್ದಾರೆ.</p>



<div class="wp-block-group"><div class="wp-block-group__inner-container is-layout-constrained wp-block-group-is-layout-constrained">
<h5 class="wp-block-heading">ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದ ಕೇಜ್ರಿವಾಲ್‌: &nbsp;ನಾಟಕೀಯ ಬೆಳವಣಿಗೆಯೊಂದರಲ್ಲಿ ತಮ್ಮ ಬಂಧನದ ವಿರುದ್ಧ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಿಂಪಡೆದಿದ್ದಾರೆ.</h5>



<h5 class="wp-block-heading">ಕಳೆದ ವಾರ ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ಬಿಆರ್‌ ಎಸ್ ನಾಯಕಿ ಕೆ.ಕವಿತಾ ಅವರ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ ವಿಶೇಷ ಪೀಠವು ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗಿದೆ</h5>



<h5 class="wp-block-heading">ಕೇಜ್ರಿವಾಲ್ ಅವರು ಕೆಳ ಹಂತದ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.</h5>
</div></div>



<p> ಜಾಮೀನು ಸೇರಿದಂತೆ ಯಾವುದೇ ಪರಿಹಾರಕ್ಕೆ ವಿಚಾರಣಾ ನ್ಯಾಯಾಲಯದ ಮೊರೆ ಹೋಗುವಂತೆ ಕೆ.ಕವಿತಾ ಅವರಿಗೆ ವಿಶೇಷ ಪೀಠವು ಸೂಚಿಸಿದ್ದನ್ನು ಇಲ್ಲಿ ಸ್ಮರಿಸಬಹುದು.</p>
]]></content:encoded>
					
		
		
			</item>
		<item>
		<title>ಹುಬ್ಬಳ್ಳಿ ಈದ್ಗಾದಲ್ಲಿ ಗಣೇಶೋತ್ಸವ: ಬಿಜೆಪಿಯಿಂದ ಗಲಭೆ ಎಬ್ಬಿಸುವ ಹುನ್ನಾರವೇ?</title>
		<link>https://peepalmedia.com/bjp-demanding-permission-for-ganeshotsava-in-idgah-ground-hubballi/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 14 Sep 2023 11:37:03 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[aap celebration]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[chowthi]]></category>
		<category><![CDATA[communal]]></category>
		<category><![CDATA[congress]]></category>
		<category><![CDATA[dharwad]]></category>
		<category><![CDATA[ganesha]]></category>
		<category><![CDATA[ganeshotsava]]></category>
		<category><![CDATA[hubballi]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[RSS]]></category>
		<category><![CDATA[state politics]]></category>
		<category><![CDATA[vhp]]></category>
		<category><![CDATA[writing]]></category>
		<guid isPermaLink="false">https://peepalmedia.com/?p=27776</guid>

					<description><![CDATA[ಹುಬ್ಬಳ್ಳಿ, ಸಪ್ಟೆಂಬರ್.‌14: ಗಣೇಶ ಚತುರ್ಥಿ ಹತ್ತಿರ ಬರುತ್ತಿದ್ದಂತೆ ಹುಬ್ಬಳ್ಳಿಯ ಈದ್ಗಾದಲ್ಲಿ ಗಣೇಶ ಮೂರ್ತಿಯನ್ನು ಕೂರಿಸುವ ಬಗ್ಗೆ ಮತ್ತೆ ಗದ್ದಲ ಎದ್ದಿದೆ. 11 ದಿನ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಪಟ್ಟು ಹಿಡಿದಿರುವ ಹಿಂದುತ್ವ ಸಂಘಟನೆಗಳಿಂದ &#160;ಮಹಾನಗರ ಪಾಲಿಕೆಗೆ ತಲೆನೋವು ಬಂದಿದೆ.ಗಣೇಶ ಪ್ರತಿಷ್ಠಾಪನೆಗೆ ವಿರೋಧ ವ್ಯಕ್ತಪಡಿಸಿರುವ ಮುಸ್ಲಿಂ ಸಂಘಟನೆಗಳು ಹೈಕೋರ್ಟ್‌ ಮಟ್ಟಿಲು ಏರಿವೆ. ಹುಬ್ಬಳ್ಳಿಯ ಅಂಜುಮನ್‌ ಎ- ಇಸ್ಲಾಂ ಸಂಸ್ಥೆಯು ಧಾರವಾಡ ಹೈಕೋರ್ಟ್‌ನಲ್ಲಿ ಬುಧವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ಆರಂಭವಾಗುವ ಮೊದಲೇ ಮುಸ್ಲೀಂ ಸಂಘಟನೆ [&#8230;]]]></description>
										<content:encoded><![CDATA[
<p>ಹುಬ್ಬಳ್ಳಿ, ಸಪ್ಟೆಂಬರ್.‌14: ಗಣೇಶ ಚತುರ್ಥಿ ಹತ್ತಿರ ಬರುತ್ತಿದ್ದಂತೆ ಹುಬ್ಬಳ್ಳಿಯ ಈದ್ಗಾದಲ್ಲಿ ಗಣೇಶ ಮೂರ್ತಿಯನ್ನು ಕೂರಿಸುವ ಬಗ್ಗೆ ಮತ್ತೆ ಗದ್ದಲ ಎದ್ದಿದೆ. 11 ದಿನ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಪಟ್ಟು ಹಿಡಿದಿರುವ ಹಿಂದುತ್ವ ಸಂಘಟನೆಗಳಿಂದ &nbsp;ಮಹಾನಗರ ಪಾಲಿಕೆಗೆ ತಲೆನೋವು ಬಂದಿದೆ.ಗಣೇಶ ಪ್ರತಿಷ್ಠಾಪನೆಗೆ ವಿರೋಧ ವ್ಯಕ್ತಪಡಿಸಿರುವ ಮುಸ್ಲಿಂ ಸಂಘಟನೆಗಳು ಹೈಕೋರ್ಟ್‌ ಮಟ್ಟಿಲು ಏರಿವೆ.</p>



<p>ಹುಬ್ಬಳ್ಳಿಯ ಅಂಜುಮನ್‌ ಎ- ಇಸ್ಲಾಂ ಸಂಸ್ಥೆಯು ಧಾರವಾಡ ಹೈಕೋರ್ಟ್‌ನಲ್ಲಿ ಬುಧವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ಆರಂಭವಾಗುವ ಮೊದಲೇ ಮುಸ್ಲೀಂ ಸಂಘಟನೆ ಹೈಕೋರ್ಟ್‌ ಮೆಟ್ಟಿಲೇರಿದೆ. &nbsp;</p>



<p>ಕಳೆದ ವರ್ಷ ಹಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಹಿಂದುತ್ವ ಸಂಘಟನೆಗಳಿಗೆ ಗಣೇಶೋತ್ಸವ ಆಚರಿಸಲು ಅನುಮತಿ ನೀಡಿತ್ತು. ಆಗಲೂ ಮುಸ್ಲೀಂ ಸಂಘಟನೆಗಳು ಮೊರೆ ಹೋಗಿದ್ದವು. ಆ ಸಂದರ್ಭದಲ್ಲಿ ಅನುಮತಿ ನೀಡಬೇಕೋ ಬೇಡವೋ ಎಂಬುದನ್ನು ಪಾಲಿಕೆಯ ವಿವೇಚನೆಗೆ ಬಿಟ್ಟಿತ್ತು. &nbsp;ಆ ಸಂದರ್ಭದಲ್ಲಿ ಈದ್ಗಾ ಮೈದಾನದಲ್ಲಿ 3 ದಿನಗಳ ಕಾಲ ಗಣೇಶೋತ್ಸವ ನಡೆದಿತ್ತು.</p>



<p>ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿಯವೊಂದಿಗೆ ಶಾಸಕ ಅರವಿಂದ ಬೆಲ್ಲದ ಅವರ ನೇತೃತ್ವದಲ್ಲಿ ಬಿಜೆಪಿ ಸಭೆ ನಡೆಸಿ ಈದ್ಗಾದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡುವಂತೆ ಒತ್ತಡ ಹಾಕಿತ್ತು. ಈಗ ಅನುಮತಿ ನೀಡುವವರೆಗೂ ಅಹೋರಾತ್ರಿ ಹೋರಾಟ ಮಾಡುವುದಾಗಿ ಪಟ್ಟು ಹಿಡಿದಿದ್ದಾರೆ.</p>



<p>ಈ ಸಂದರ್ಭದಲ್ಲಿ ಮಾತನಾಡಿರುವ ಬೆಲ್ಲದ “ಈದ್ಗಾದಲ್ಲಿ ಗಣೇಶೋತ್ಸವ ನಡೆಸಲು ಅನುಮತಿ ಸಿಕ್ಕಿದರೂ ಆಯುಕ್ತರು ಅಧಿಕೃತವಾಗಿ ಅನುಮತಿ ನೀಡಿಲ್ಲ. ಅವರು ಮುಖ್ಯಮಂತ್ರಿಗಳ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ. ಅನುಮತಿ ನೀಡುವ ತನಕ ಅವರ ಕಚೇರಿಯ ಮುಂದೆಯೇ ಧರಣಿ ಕೂರುತ್ತೇವೆ. ಅನುಮತಿ ಕೊಡುವವರೆಗೂ ನಾವು ಪಾಲಿಕೆ ಬಿಟ್ಟು ಹೋಗೋದಿಲ್ಲ ” ಎಂದು ಹೇಳಿದ್ದಾರೆ.</p>



<p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಕಿಡಿಕಾರಿರುವ ಬೆಲ್ಲದ “ಕಾಂಗ್ರೇಸ್‌ ಸರ್ಕಾರ ಹಿಂದೂಗಳ ಭಾವನೆಯ ಜೊತೆಗೆ ಚೆಲ್ಲಾಟ ಆಡುತ್ತಿದೆ. ಮುಸ್ಲೀಮರು ಮಾತ್ರವಲ್ಲ, ಹಿಂದೂಗಳೂ ಅವರಿಗೆ ಮತ ನೀಡಿದ್ದಾರೆ. ಈದ್ಗಾ ಮೈದಾನ ಮಹಾನಗರ ಪಾಲಿಕೆಯ ಆಸ್ತಿ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ನಾವು ಗಣೇಶೋತ್ಸವ ನಡೆಸಲು ಪಾಲಿಕೆಯ ಅನುಮತಿ ಕೇಳುತ್ತಿದ್ದೇವೆ. ಇಲ್ಲಿ ಯಾವುದೇ ಕಾರ್ಯಕ್ರಮ ನಡೆಸಲು ಅವಕಾಶವಿದೆ. ಮುಸ್ಲಿಮರಿಗೆ ನಮಾಜ್ ಮಾಡೋಕೆ ಸರ್ಕಾರ ಅವಕಾಶ&nbsp; ನೀಡಿದೆ. ಆದರೆ, ಗಣೇಶ ಹಬ್ಬಕ್ಕೆ ಸಿದ್ದರಾಮಯ್ಯ ಸರ್ಕಾರ ಅನುಮತಿ ಕೊಡುತ್ತಿಲ್ಲ,” ಎಂದು ಹೇಳಿದ್ದಾರೆ.</p>
]]></content:encoded>
					
		
		
			</item>
		<item>
		<title>ದಿಲ್ಲಿ ಎಂಸಿಡಿ: ಗೆಲುವಿನತ್ತ ಎಎಪಿ, ಸಂಭ್ರಮಾಚರಣೆ ಆರಂಭ</title>
		<link>https://peepalmedia.com/delhi-mcd-aap-to-victory-celebrations-begin/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 07 Dec 2022 07:01:08 +0000</pubDate>
				<category><![CDATA[ದೇಶ]]></category>
		<category><![CDATA[AAP]]></category>
		<category><![CDATA[aap celebration]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[mcd election]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=17802</guid>

					<description><![CDATA[ಹೊಸದಿಲ್ಲಿ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್‌ ಆದ್ಮಿ ಪಾರ್ಟಿ ಭರ್ಜರಿ ಪೈಪೋಟಿಯ ನಡುವೆಯೂ ಗೆಲುವಿನತ್ತ ಸಾಗಿದ್ದು, ಎಎಪಿ ಕಾರ್ಯಕರ್ತರು ಸಂಭ್ರಮಾಚರಣೆ ಆರಂಭಿಸಿದ್ದಾರೆ. ಇತ್ತೀಚಿನ ಮಾಹಿತಿ ಪ್ರಕಾರ, ಪ್ರಕಟಗೊಂಡ ಫಲಿತಾಂಶಗಳಲ್ಲಿ ಎಎಪಿ 93 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ 74 ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಒಟ್ಟಾರೆಯಾಗಿ ಎಎಪಿ 132 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 104 ಸ್ಥಾನಗಳಲ್ಲಿ ಮುಂದಿದೆ. ದಿಲ್ಲಿ ಮಹಾನಗರ ಪಾಲಿಕೆಯ ಗದ್ದುಗೆ ಹಿಡಿಯಲು 126 ಸ್ಥಾನಗಳ ಅವಶ್ಯಕತೆ ಇದೆ. ಡಿಸೆಂಬರ್‌ 4 ರಂದು ನಡೆದ ಚುನಾವಣೆಯ ಮತಗಳ ಎಣಿಕೆ [&#8230;]]]></description>
										<content:encoded><![CDATA[
<p><strong>ಹೊಸದಿಲ್ಲಿ:</strong> ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್‌ ಆದ್ಮಿ ಪಾರ್ಟಿ ಭರ್ಜರಿ ಪೈಪೋಟಿಯ ನಡುವೆಯೂ ಗೆಲುವಿನತ್ತ ಸಾಗಿದ್ದು, ಎಎಪಿ ಕಾರ್ಯಕರ್ತರು ಸಂಭ್ರಮಾಚರಣೆ ಆರಂಭಿಸಿದ್ದಾರೆ.</p>



<p>ಇತ್ತೀಚಿನ ಮಾಹಿತಿ ಪ್ರಕಾರ, ಪ್ರಕಟಗೊಂಡ ಫಲಿತಾಂಶಗಳಲ್ಲಿ ಎಎಪಿ 93 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ 74 ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಒಟ್ಟಾರೆಯಾಗಿ ಎಎಪಿ 132 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 104 ಸ್ಥಾನಗಳಲ್ಲಿ ಮುಂದಿದೆ. ದಿಲ್ಲಿ ಮಹಾನಗರ ಪಾಲಿಕೆಯ ಗದ್ದುಗೆ ಹಿಡಿಯಲು 126 ಸ್ಥಾನಗಳ ಅವಶ್ಯಕತೆ ಇದೆ.</p>



<p>ಡಿಸೆಂಬರ್‌ 4 ರಂದು ನಡೆದ ಚುನಾವಣೆಯ ಮತಗಳ ಎಣಿಕೆ ಕಾರ್ಯ ಬೆಳಿಗ್ಗೆಯಿಂದ ಆರಂಭಗೊಂಡಿದ್ದು, ಭಾರತೀಯ ಜನತಾ ಪಕ್ಷ ಮತ್ತು ಆಮ್‌ ಆದ್ಮಿ ಪಾರ್ಟಿಯ ನಡುವೆ ಬಿರುಸಿನ ಸ್ಪರ್ಧೆ ಏರ್ಪಟ್ಟಿದೆ.</p>



<p>ತ್ರಿಕೋನ ಸ್ಪರ್ಧೆ ಎಂದು ಪರಿಗಣಿಸಲಾಗಿದ್ದ ಎಂಸಿಡಿ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದು ಈವರೆಗೆ ಕೇವಲ 4 ಸ್ಥಾನಗಳನ್ನು ಗೆದ್ದಿದ್ದು, ಮೂರು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.</p>
]]></content:encoded>
					
		
		
			</item>
	</channel>
</rss>
