<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>abhinava halashri &#8211; Peepal Media</title>
	<atom:link href="https://peepalmedia.com/tag/abhinava-halashri/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sun, 24 Sep 2023 04:52:24 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>abhinava halashri &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಬಿಜೆಪಿ ಟಿಕೆಟ್‌ ಹಗರಣ: ಚೈತ್ರಾ ಕುಂದಾಪುರ ಮತ್ತು ಇತರ ಆರು ಮಂದಿ ನ್ಯಾಯಾಂಗ ಬಂಧನಕ್ಕೆ</title>
		<link>https://peepalmedia.com/chaitra-and-gang-sent-to-judicial-custody/</link>
		
		<dc:creator><![CDATA[Peepal Media Desk]]></dc:creator>
		<pubDate>Sun, 24 Sep 2023 04:52:23 +0000</pubDate>
				<category><![CDATA[ರಾಜ್ಯ]]></category>
		<category><![CDATA[abhinava halashri]]></category>
		<category><![CDATA[chaitra kundapura]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=28404</guid>

					<description><![CDATA[ಬೆಂಗಳೂರು: ಇತ್ತೀಚೆಗೆ ಬಹಳ ಸುದ್ದಿಯಲ್ಲಿರುವ ಬಿಜೆಪಿ ಟಿಕೆಟ್‌ ವಂಚನೆ ಪ್ರಕರಣದ ರೂವಾರಿ ಚೈತ್ರಾ ಕುಂಧಾಪುರ ಹಾಗೂ ಆಕೆಯ ಆರು ಮಂದಿ ಸಹಚರರನ್ನು ಬೆಂಗಳೂರಿನ ಮೂರನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅಕ್ಟೋಬರ್ 6ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆರೋಪಿಗಳನ್ನು ನಗರದ ಹೊರವಲಯದಲ್ಲಿರುವ ಪರಪ್ಪನ ಅಗ್ರಹಾರದಲ್ಲಿರುವ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗುವುದು.ಚೈತ್ರಾ ಕುಂದಾಪುರ ಮತ್ತಿತರರ ಪೊಲೀಸ್ ಕಸ್ಟಡಿಯು ಶನಿವಾರ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಆರೋಪಿಗಳಾದ ರಮೇಶ್, ಚನ್ನನಾಯಕ್ ಮತ್ತು ಧನರಾಜ್ ಅವರ ಜಾಮೀನು ಅರ್ಜಿಗೆ ಆಕ್ಷೇಪಣೆ [&#8230;]]]></description>
										<content:encoded><![CDATA[
<p>ಬೆಂಗಳೂರು: ಇತ್ತೀಚೆಗೆ ಬಹಳ ಸುದ್ದಿಯಲ್ಲಿರುವ ಬಿಜೆಪಿ ಟಿಕೆಟ್‌ ವಂಚನೆ ಪ್ರಕರಣದ ರೂವಾರಿ ಚೈತ್ರಾ ಕುಂಧಾಪುರ ಹಾಗೂ ಆಕೆಯ ಆರು ಮಂದಿ ಸಹಚರರನ್ನು ಬೆಂಗಳೂರಿನ ಮೂರನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅಕ್ಟೋಬರ್ 6ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.</p>



<p>ಆರೋಪಿಗಳನ್ನು ನಗರದ ಹೊರವಲಯದಲ್ಲಿರುವ ಪರಪ್ಪನ ಅಗ್ರಹಾರದಲ್ಲಿರುವ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗುವುದು.<br>ಚೈತ್ರಾ ಕುಂದಾಪುರ ಮತ್ತಿತರರ ಪೊಲೀಸ್ ಕಸ್ಟಡಿಯು ಶನಿವಾರ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.</p>



<p>ಆರೋಪಿಗಳಾದ ರಮೇಶ್, ಚನ್ನನಾಯಕ್ ಮತ್ತು ಧನರಾಜ್ ಅವರ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳಿಗೆ ನ್ಯಾಯಾಲಯ ನಿರ್ದೇಶನ ನೀಡಿದ್ದು, ವಿಚಾರಣೆಯನ್ನು ಸೆಪ್ಟೆಂಬರ್ 26ಕ್ಕೆ ಮುಂದೂಡಿದೆ.</p>



<p>ಹಗರಣದ ಮತ್ತೊಬ್ಬ ಆರೋಪಿ ಅಭಿನವ ಹಾಲಶ್ರೀ ಸ್ವಾಮಿಯನ್ನು ವಿಶೇಷ ತಂಡ ವಿಚಾರಣೆ ನಡೆಸುತ್ತಿದೆ.</p>



<p>ಟಿಕೆಟ್ ಹಗರಣದ ತನಿಖೆ ನಡೆಸುತ್ತಿರುವ ಸಿಸಿಬಿ ವಿಶೇಷ ದಳದ ಅಧಿಕಾರಿಗಳು ಆರೋಪಿ ಕುಂದಾಪುರದಿಂದ 2 ಕೋಟಿ ಮೌಲ್ಯದ ಮೌಲ್ಯದ ವಸ್ತುಗಳು, ಚಿನ್ನಾಭರಣಗಳು ಮತ್ತು 76 ಲಕ್ಷ ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ತಿಳಿಸಿದ್ದಾರೆ.</p>



<p>ಬಂಧಿತ ಶ್ರೀ ಅಭಿನವ ಹಾಲಶ್ರೀ ಮಠದಿಂದ 56 ಲಕ್ಷ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ದಯಾನಂದ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಿದ ನಂತರ ಈ ಸ್ವಾಮಿಯಡನೆ ಸಂಪರ್ಕ ಹೊಂದಿದ್ದ ವ್ಯಕ್ತಿಯಿಂದ 20 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ.</p>



<p>ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಂಟು ಜನರನ್ನು ಬಂಧಿಸಿದ್ದು, ನಾಲ್ವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.</p>



<p>ಮೈಸೂರಿನ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಅವರು ಇದು 185 ಕೋಟಿ ರೂಪಾಯಿ ಮೊತ್ತದ ಟಿಕೆಟ್ ಹಗರಣ ಎಂದು ಆರೋಪಿಸಿದ್ದು, 17 ಟಿಕೆಟ್ ಆಕಾಂಕ್ಷಿಗಳಿಗೆ ಚೈತ್ರಾ ಕುಂದಾಪುರ ವಂಚಿಸಿದ್ದಾಳೆ ಎಂದು ಆರೋಪಿಸಿದ್ದಾರೆ. &#8220;ಅವಳು 23 ಜನರಿಗೆ ಟಿಕೆಟ್ ಪಡೆದು, ಅದನ್ನು ಮಾರುವ ಮೂಲಕ ಹಣ ಸಂಪಾದಿಸಿದ್ದಾಳೆ&#8221; ಎಂದು ಅವರು ಹೇಳಿದ್ದಾರೆ.</p>



<p>ಚೈತ್ರಾ ಕುಂದಾಪುರ ಬಿಜೆಪಿಯ ಉನ್ನತ ನಾಯಕತ್ವದೊಂದಿಗೆ ನೇರ ಸಂಪರ್ಕ ಹೊಂದಿದ್ದು, ಈ ಸಂಬಂಧಗಳ ಕುರಿತಾಗಿಯೂ ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.</p>



<p>ಈ ನಿಟ್ಟಿನಲ್ಲಿ ನಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ನಿಯೋಗ ಕೊಂಡೊಯ್ಯುತ್ತಿದ್ದು, ಹಗರಣದ ಸಮಗ್ರ ತನಿಖೆಗೆ ನಿರ್ದೇಶನ ನೀಡುವಂತೆ ಮನವಿ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.</p>



<p>ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 72 ಹೊಸ ಮುಖಗಳಿಗೆ ಟಿಕೆಟ್ ನೀಡಿ ಹೀನಾಯ ಸೋಲು ಕಂಡಿತ್ತು.</p>



<p>ಕೈಗಾರಿಕೋದ್ಯಮಿ ಗೋವಿಂದ್ ಬಾಬು ಪೂಜಾರಿ ಅವರು ಚೈತ್ರಾ ಕುಂದಾಪುರ ಹಾಗೂ ಇತರರ ವಿರುದ್ಧ ಬಿಜೆಪಿ ಟಿಕೆಟ್ ಭರವಸೆ ನೀಡಿ 5 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಹಗರಣ ಬೆಳಕಿಗೆ ಬಂದಿದೆ. ಚೈತ್ರಾ ಕುಂದಾಪುರ ಕೂಡ ಹಗರಣದಲ್ಲಿ ಪಕ್ಷದ ಉನ್ನತ ನಾಯಕತ್ವದ ಕೈವಾಡವಿದೆ ಎಂದು ಆರೋಪಿಸಿದ್ದರು.</p>
]]></content:encoded>
					
		
		
			</item>
	</channel>
</rss>
