<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ahmadabad &#8211; Peepal Media</title>
	<atom:link href="https://peepalmedia.com/tag/ahmadabad/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Thu, 03 Nov 2022 07:32:30 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>ahmadabad &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಗುಜರಾತ್‌ ವಿಧಾನಸಭೆಗೆ ಚುನಾವಣಾ ದಿನಾಂಕ ಘೋಷಣೆ</title>
		<link>https://peepalmedia.com/ec-anounces-gujarath-election-dates/</link>
		
		<dc:creator><![CDATA[Peepal Media]]></dc:creator>
		<pubDate>Thu, 03 Nov 2022 07:31:02 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ahmadabad]]></category>
		<category><![CDATA[congress]]></category>
		<category><![CDATA[EC]]></category>
		<category><![CDATA[gandhi]]></category>
		<category><![CDATA[gujarat election]]></category>
		<category><![CDATA[gujarath election]]></category>
		<category><![CDATA[kannada]]></category>
		<category><![CDATA[modi]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[rahul]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=13921</guid>

					<description><![CDATA[ಕೊನೆಗೂ ಚುನಾವಣಾ ಆಯೋಗವು ಗುಜರಾತ್‌ ವಿಧಾನಸಭೆಗೆ ಚುನಾವಣಾ ದಿನಾಂಕವನ್ನು ಘೋಷಿಸಿದ್ದು, ಚುನಾವಣೆಯು ಎರಡು ಹಂತಗಳಲ್ಲಿ ನಡೆಯಲಿದ್ದು, ಡಿಸೆಂಬರ್ 1ರಂದು 89 ಸ್ಥಾನಗಳಿಗೆ, ಡಿಸೆಂಬರ್ 5ರಂದು 93 ಸ್ಥಾನಗಳಿಗೆ ಮತದಾನ ನಡೆಯಲಿದೆಯೆಂದು ಆಯೋಗ ತಿಳಿಸಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಗುಜರಾತ್ ಚುನಾವಣೆಯಲ್ಲಿ 4.9 ಕೋಟಿ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಮತದಾರರಿಗಾಗಿ ಗ್ರಾಮೀಣ ಪ್ರದೇಶಗಳಲ್ಲಿ 34,000 ಕ್ಕಿಂತ ಹೆಚ್ಚು ಸೇರಿದಂತೆ 51,000 ಕ್ಕೂ ಹೆಚ್ಚು ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ಅವರು [&#8230;]]]></description>
										<content:encoded><![CDATA[
<p>ಕೊನೆಗೂ ಚುನಾವಣಾ ಆಯೋಗವು ಗುಜರಾತ್‌ ವಿಧಾನಸಭೆಗೆ ಚುನಾವಣಾ ದಿನಾಂಕವನ್ನು ಘೋಷಿಸಿದ್ದು, ಚುನಾವಣೆಯು ಎರಡು ಹಂತಗಳಲ್ಲಿ ನಡೆಯಲಿದ್ದು, ಡಿಸೆಂಬರ್ 1ರಂದು 89 ಸ್ಥಾನಗಳಿಗೆ, ಡಿಸೆಂಬರ್ 5ರಂದು 93 ಸ್ಥಾನಗಳಿಗೆ ಮತದಾನ ನಡೆಯಲಿದೆಯೆಂದು ಆಯೋಗ ತಿಳಿಸಿದೆ. </p>



<p>ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಗುಜರಾತ್ ಚುನಾವಣೆಯಲ್ಲಿ 4.9 ಕೋಟಿ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಮತದಾರರಿಗಾಗಿ ಗ್ರಾಮೀಣ ಪ್ರದೇಶಗಳಲ್ಲಿ 34,000 ಕ್ಕಿಂತ ಹೆಚ್ಚು ಸೇರಿದಂತೆ 51,000 ಕ್ಕೂ ಹೆಚ್ಚು ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದರು.</p>



<p>182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ಅಧಿಕಾರ ಹಿಡಿಯಲು 92 ಸದಸ್ಯರ ಬೆಂಬಲ ಬೇಕಿದೆ. ಪ್ರಸ್ತುತ ಆಡಳಿತಾರೂಢ ಬಿಜೆಪಿ 111, ಕಾಂಗ್ರೆಸ್​ 62 ಸದಸ್ಯ ಬಲ ಹೊಂದಿವೆ. ಐದು ಸ್ಥಾನಗಳು ವಿವಿಧ ಕಾರಣಗಳಿಂದ ತೆರವಾಗಿವೆ.</p>



<p>ಹಿಮಾಚಲ ಪ್ರದೇಶ ಮತ್ತು ಗುಜರಾತ್‌ನಲ್ಲಿ ಮಹಿಳೆಯರು, ವೃದ್ಧರು, ಅಂಗವಿಕಲರಿಗೆ ಪ್ರವೇಶ ಮತ್ತು ಸೇರ್ಪಡೆಗಾಗಿ ವಿಶೇಷ ವೀಕ್ಷಕರನ್ನು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಿಯೋಜಿಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.</p>



<p>ಇತ್ತೀಚೆಗೆ ಹಿಮಾಚಲ ಪ್ರದೇಶದ ಚುನಾವಣಾ ದಿನಾಂಕವನ್ನು ಮಾತ್ರವೇ ಘೋಷಿಸಿ ಗುಜರಾತ್‌ ಚುನಾವಣಾ ದಿನಾಂಕ ನಿಗದಿಪಡಿಸದ ಚುನಾವಣಾ ಆಯೋಗದ ಕುರಿತು ಅಲ್ಲಲ್ಲಿ ಅಪಸ್ವರ ಕೇಳಿ ಬಂದಿತ್ತು. ಆಡಳಿತ ರೂಢ ಬಿಜೆಪಿಗೆ ಅದರ ಯೋಜನೆಗಳನ್ನು ಉದ್ಘಾಟಿಸಲು ಅನುವು ಮಾಡಿಕೊಡುವ ಸಲುವಾಗಿ ಹೀಗೆ ಮಾಡಲಾಗುತ್ತಿದೆ ಎನ್ನುವ ಆರೋಪವೂ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಇದೆಲ್ಲದರಿಂದ ಕೆರಳಿದ ಆಯೋಗವು ತನ್ನ ವಿರುದ್ಧ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಸಿತ್ತು.</p>



<p>ಇಂದು ಬೆಳಗಿನ ಹೊತ್ತು ಆಯೋಗ ಚುನಾವಣಾ ದಿನಾಂಕವನ್ನು ಪ್ರಕಟಿಸಿಲಿದೆ ಎಂದು ತಿಳಿದ ಕೂಡಲೇ ಅದಕ್ಕೆ ಪ್ರತಿಕ್ರಿಯೆಯಾಗಿ ಹಿರಿಯ ಪತ್ರಕರ್ತ ರಾಜದೀಪ್‌ ಸರ್ದೇಸಾಯಿ ಹೀಗೆ ಟ್ವೀಟ್‌ ಮಾಡಿದ್ದರು: &#8220;ಬ್ರೇಕಿಂಗ್ ನ್ಯೂಸ್: ಈಗ ಎಲ್ಲಾ ಸರ್ಕಾರಿ ಉದ್ಘಾಟನೆಗಳು ಮುಗಿದಿವೆ, ರಿಬ್ಬನ್ ಕಟ್, ಶಿಲಾನ್ಯಾಸ ಸಮಾರಂಭಗಳು, ಭರವಸೆಗಳನ್ನು ನೀಡುವುದು ಹೀಗೆ ಎಲ್ಲವೂ ಮುಗಿದಿದೆ. ಅಂತೂ ಕೊನೆಗೂ ಗುಜರಾತ್ ವಿಧಾನಸಭೆಯ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗವು ಅಂತಿಮವಾಗಿ ಘೋಷಿಸಲಿದೆ! ಇಲ್ಲಿ ಚುನಾವಣಾ ವೇಳಾಪಟ್ಟಿಯನ್ನು ಯಾರು ಹೊಂದಿಸುತ್ತಾರೆ ಎಂದು ನೀವೇ ಊಹಿಸಿ!&#8221;</p>



<p></p>
]]></content:encoded>
					
		
		
			</item>
		<item>
		<title>ಗುಜರಾತ್‌ನಲ್ಲಿ ಕಳ್ಳಭಟ್ಟಿ ಸೇವನೆ:  ಮೃತರಸಂಖ್ಯೆ 37ಕ್ಕೆ ಏರಿಕೆ, ಉಳಿದವರ ಸ್ಥಿತಿ ಚಿಂತಾಜನಕ</title>
		<link>https://peepalmedia.com/gujarathnalli-kallabhatti-sevane-mrutara-sankye-37-ke-erike-ulidavara-sthiti-cintaajanaka/</link>
		
		<dc:creator><![CDATA[Peepal Media]]></dc:creator>
		<pubDate>Wed, 27 Jul 2022 08:24:47 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ದೇಶ]]></category>
		<category><![CDATA[ahmadabad]]></category>
		<category><![CDATA[country]]></category>
		<category><![CDATA[death]]></category>
		<category><![CDATA[gujarath]]></category>
		<category><![CDATA[hospital]]></category>
		<category><![CDATA[india]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[people]]></category>
		<category><![CDATA[rajkot]]></category>
		<category><![CDATA[trending news]]></category>
		<category><![CDATA[viral news]]></category>
		<category><![CDATA[writing]]></category>
		<guid isPermaLink="false">https://peepalmedia.com/?p=131</guid>

					<description><![CDATA[ರಾಜ್‌ಕೋಟ್‌/ಅಹ್ಮದಾಬಾದ್‌ : ಗುಜರಾತ್‌ನಲ್ಲಿ ಕಳ್ಳಭಟ್ಟಿ ಸಾರಾಯಿ ಸೇವನೆಯಿಂದ 37 ಮಂದಿ ಮೃತಪಟ್ಟಿದ್ದಾರೆ. ಬೊತಾಡ್‌ ಜಿಲ್ಲೆ ಹಾಗೂ ಅಹ್ಮದಬಾದ್‌ನ ನೆರೆಯ ಗ್ರಾಮಗಳಲ್ಲಿ ಈ ದುರಂತ ಸಂಭವಿಸಿದ್ದು, ಈ ದುರಂತಕ್ಕೆ ಕಾರಣವಾಗಿರುವ ಕಳ್ಳಭಟ್ಟಿಗಳನ್ನು ಮಟ್ಟಹಾಕುವ ಸಲುವಾಗಿ ಪೊಲೀಸರು ರಾಜ್ಯಾದ್ಯಂತ ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಭಾವನಗರ ಜಿಲ್ಲೆಯಲ್ಲಿ 73 ಮಂದಿ ಹಾಗೂ ಅಹ್ಮದಾಬಾದ್‌ನಲ್ಲಿ 15 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ 11ಜನರ ಸ್ಥಿತಿ ಗಂಭೀರವಾಗಿದೆ. ಇನ್ನೂ ಬೊತಾಡ್‌ ಜಿಲ್ಲೆಯಲ್ಲಿ ಗರಿಷ್ಠ ಅಂದರೆ 24 ಮಂದಿ ಮೃತಪಟ್ಟಿದ್ದಾರೆ.ಈ ವಿಚಾರವಾಗಿ [&#8230;]]]></description>
										<content:encoded><![CDATA[
<p class="has-medium-font-size">ರಾಜ್‌ಕೋಟ್‌/ಅಹ್ಮದಾಬಾದ್‌ : ಗುಜರಾತ್‌ನಲ್ಲಿ ಕಳ್ಳಭಟ್ಟಿ ಸಾರಾಯಿ ಸೇವನೆಯಿಂದ 37 ಮಂದಿ ಮೃತಪಟ್ಟಿದ್ದಾರೆ. ಬೊತಾಡ್‌ ಜಿಲ್ಲೆ ಹಾಗೂ ಅಹ್ಮದಬಾದ್‌ನ ನೆರೆಯ ಗ್ರಾಮಗಳಲ್ಲಿ ಈ ದುರಂತ ಸಂಭವಿಸಿದ್ದು, ಈ ದುರಂತಕ್ಕೆ ಕಾರಣವಾಗಿರುವ ಕಳ್ಳಭಟ್ಟಿಗಳನ್ನು ಮಟ್ಟಹಾಕುವ ಸಲುವಾಗಿ ಪೊಲೀಸರು ರಾಜ್ಯಾದ್ಯಂತ ಕಾರ್ಯಾಚರಣೆ ಆರಂಭಿಸಿದ್ದಾರೆ.</p>



<p class="has-medium-font-size">ಈ ಘಟನೆಗೆ ಸಂಬಂಧಿಸಿದಂತೆ ಭಾವನಗರ ಜಿಲ್ಲೆಯಲ್ಲಿ 73 ಮಂದಿ ಹಾಗೂ ಅಹ್ಮದಾಬಾದ್‌ನಲ್ಲಿ 15 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ 11ಜನರ ಸ್ಥಿತಿ ಗಂಭೀರವಾಗಿದೆ. ಇನ್ನೂ ಬೊತಾಡ್‌ ಜಿಲ್ಲೆಯಲ್ಲಿ ಗರಿಷ್ಠ ಅಂದರೆ 24 ಮಂದಿ ಮೃತಪಟ್ಟಿದ್ದಾರೆ.<br>ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಪೋಲಿಸ್‌ ಮಹಾನಿರ್ದೇಶಕ ಆಶೀಶ್‌ ಭಾಟಿಯಾ, ವಶಪಡಿಸಿಕೊಂಡಿರುವ ಅಕ್ರಮ ಮದ್ಯದಲ್ಲಿ ಶೇಕಡ 99% ರಷ್ಟು ಮೆಥೆನಾಲ್‌ ಪತ್ತೆಯಾಗಿದೆ. ಈ ರಾಸಾಯನಿಕವನ್ನು ಅಹ್ಮದಾಬಾದ್‌ನ ರಾಸಾಯನಿಕ ಕಾರ್ಖಾನೆಯಿಂದ ಗೋದಾಮು ವ್ಯವಸ್ಥಾಪಕ ಕಳವುಮಾಡಿ, ಅಕ್ರಮ ಸಾರಾಯಿ ತಯಾರಿಕರಿಗೆ ನೀಡಿದ್ದಾನೆ, ತಯಾರಿಕನು ಈ ರಾಸಾಯನಿಕಕ್ಕೆ ನೀರು ಬೆರೆಸಲಾಗಿದ್ದರಿಂದ ಇದು ಮಾರಕ ಮಿಶ್ರಣವಾಗಿದೆ, ಇದರಿಂದಲೇ ಈ ದುರಂತ ಸಂಭವಿಸಿದೆ ಎಂದು ಹೇಳಿದ್ದಾರೆ.</p>



<p class="has-medium-font-size">ಈ ಸಂಬಂಧ ಬರ್ವಾಲ, ರಾಣಪುರ ಮತ್ತು ದಂಡುಕಾ ಠಾಣೆಗಳಲ್ಲಿ ಒಟ್ಟು ಮೂರು ಪ್ರಕರಣಗಳನ್ನು ದಾಖಲಿಸಲಾಗಿದ್ದು. 14 ಮಂದಿಯ ವಿರುದ್ಧ ದೂರು ದಾಖಲಾಗಿದೆ. ಹಾಗೂ 8 ಮಂದಿಯನ್ನು ಬಂಧಿಸಲಾಗಿದೆ. ಈ ವಿಚಾರವಾಗಿ ಗೋದಾಮು ವ್ಯವಸ್ಥಾಪಕ ಹಾಗೂ ಪ್ರಮುಖ ಆರೋಪಿ ಜಯೇಶ್ ಖವಾಡಿಯಾ ಬಂಧಿತರಲ್ಲಿ ಸೇರಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>
]]></content:encoded>
					
		
		
			</item>
	</channel>
</rss>
