<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>amitsha &#8211; Peepal Media</title>
	<atom:link href="https://peepalmedia.com/tag/amitsha/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sun, 22 Dec 2024 11:23:03 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>amitsha &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಅಮಿತ್ ಶಾ ಗಡಿಪಾರಿಗೆ ಆಗ್ರಹಿಸಿ ಜೈಬೀಮ್ ಬ್ರಿಗೇಡ್ ಸಂಘಟನೆಯಿಂದ ಪ್ರತಿಭಟನೆ</title>
		<link>https://peepalmedia.com/protest-by-jaibeam-brigade-organization-demanding-amit-shahs-exile/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Sun, 22 Dec 2024 11:20:01 +0000</pubDate>
				<category><![CDATA[ಹಾವೇರಿ]]></category>
		<category><![CDATA[amitsha]]></category>
		<category><![CDATA[drambedkar]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=51047</guid>

					<description><![CDATA[ಹಾಸನ: ಗೃಹ ಮಂತ್ರಿ ಅಮಿತ್ ಶಾ ರವರು ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಹಾಸ್ಯಾಸ್ಪದವಾಗಿ ಮತ್ತು ನಾಟಕೀಯವಾಗಿ ಸಂಸತ್ ಭವನದಲ್ಲಿ ಮಾತನಾಡಿರುವ ವಿರುದ್ಧ ಅವರನ್ನು ಬಂಧನ ಮತ್ತು ಗಡಿಪಾರಿಗೆ ಆಗ್ರಹಿಸಿ ಜೈಬೀಮ್ ಬ್ರಿಗೇಡ್ ಸಂಘಟನಾ ಸಮಿತಿಯಿಂದ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.ಜೈಬೀಮ್ ಬ್ರಿಗೇಡ್ ಸಂಘಟನಾ ಸಮಿತಿ ಜಿಲ್ಲಾಧ್ಯಕ್ಷ ರಾಜೇಶ್ ಮಾಧ್ಯಮದೊಂದಿಗೆ ಮಾತನಾಡಿ, ದೇಶದ ಗೃಹಮಂತ್ರಿ ಅಮಿತ್ ಶಾ ಅವರು ಡಿಸೆಂಬರ್ 17 ರಂದು ಸಂಸತ್ತಿನಲ್ಲಿ ಮಾತನಾಡುವಾಗ ಸಂವಿಧಾನಶಿಲ್ಪಿ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅತ್ಯಂತ ಹಗುರವಾಗಿ ಮತ್ತು [&#8230;]]]></description>
										<content:encoded><![CDATA[
<p></p>



<p><strong>ಹಾಸನ:</strong> ಗೃಹ ಮಂತ್ರಿ ಅಮಿತ್ ಶಾ ರವರು ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಹಾಸ್ಯಾಸ್ಪದವಾಗಿ ಮತ್ತು ನಾಟಕೀಯವಾಗಿ ಸಂಸತ್ ಭವನದಲ್ಲಿ ಮಾತನಾಡಿರುವ ವಿರುದ್ಧ ಅವರನ್ನು ಬಂಧನ ಮತ್ತು ಗಡಿಪಾರಿಗೆ ಆಗ್ರಹಿಸಿ ಜೈಬೀಮ್ ಬ್ರಿಗೇಡ್ ಸಂಘಟನಾ ಸಮಿತಿಯಿಂದ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.<br>ಜೈಬೀಮ್ ಬ್ರಿಗೇಡ್ ಸಂಘಟನಾ ಸಮಿತಿ ಜಿಲ್ಲಾಧ್ಯಕ್ಷ ರಾಜೇಶ್ ಮಾಧ್ಯಮದೊಂದಿಗೆ ಮಾತನಾಡಿ, ದೇಶದ ಗೃಹಮಂತ್ರಿ ಅಮಿತ್ ಶಾ ಅವರು ಡಿಸೆಂಬರ್ 17 ರಂದು ಸಂಸತ್ತಿನಲ್ಲಿ ಮಾತನಾಡುವಾಗ ಸಂವಿಧಾನಶಿಲ್ಪಿ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅತ್ಯಂತ ಹಗುರವಾಗಿ ಮತ್ತು ಜವಾಬ್ದಾರಿಯಿಲ್ಲದೆ ನಾಲಿಗೆಯ ಮೇಲೆ ಹಿಡಿತವಿಲ್ಲದೆ ಮಾತನಾಡಿರುವುದು ಖಂಡನೀಯ. ಈತ ಹೇಳಿರುವುದೇನೆಂದರೆ, ಈಗ ಫ್ಯಾಷನ್ ಆಗಿದೆ. ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್. ಅಂಬೇಡ್ಕರ್ ಎನ್ನುತ್ತಿರುವುದು.. ಇವರೆಲ್ಲಾ ಇಷ್ಟು ಸಾರಿ ಭಗವಂತನ ಸ್ಮರಣೆ ಮಾಡಿದ್ದೇ ಆಗಿದ್ದಲ್ಲಿ ಏಳು ಜನ್ಮದವರೆಗೆ ಸ್ವರ್ಗವಾದರೂ ದೊರೆಯುತ್ತಿತ್ತು ಎಂದು ಅಂಬೇಡ್ಕರ್ ಅವರ ಬಗ್ಗೆ ಇಷ್ಟೊಂದು ಹಗುರವಾಗಿ ನಾಲಿಗೆ ಹರಿಬಿಟ್ಟಿರುವ ಅಮಿತ್ ಶಾಗೆ ಒಂದು ಗಂಭೀರವಾದ ಎಚ್ಚರಿಕೆಯೊಂದನ್ನು ರವಾನಿಸಬೇಕಾಗಿದೆ. ಹೇಳುತ್ತೇವೆ ಕೇಳು ಅಮಿತ್ ಶಾ ನಮಗೆ ಏಳು ಜನ್ಮದ ಪುಣ್ಯ, ಸ್ವರ್ಗ ಬೇಡವೇ ಬೇಡ. ನಮಗೆ ಸ್ವರ್ಗ ನರಕಗಳಲ್ಲಿ ನಂಬಿಕೆ ಇಲ್ಲ. ನಮಗೆ ಅಗತ್ಯವೂ ಇಲ್ಲ. ನಮಗೆ ಅಂಬೇಡ್ಕರ್ ಒಬ್ಬರೇ ಏಕೈಕ ದೇವರು. ಅದರಲ್ಲಿ ಎಂದಿಗೂ ರಾಜಿ ಇಲ್ಲ. ಅಂಬೇಡ್ಕರ್ ಅವರ ಹೆಸರನ್ನು ಉಸಿರಾಗಿಸಿಕೊಂಡಿದ್ದೇವೆ ಎಂದರು. ಕೊನೆಯ ಉಸಿರಿರುವವರೆಗೂ ಅಂಬೇಡ್ಕರ್ ಅವರ ಹೆಸರನ್ನೇ ಉಸಿರಾಗಿಸಿಕೊಳ್ಳುತ್ತೇವೆ ಕೂಡಾ..ಅಮಿತ್ ಶಾ ನೀವೆಲ್ಲಾ ಅಂಬೇಡ್ಕರ್ ಅವರ ಸಾಧನೆ, ಹೇಳಿಗೆ ಸಹಿಸದೆ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡುತ್ತಲೇ ಬರುವ ಮೂಲಕ ನಿಮ್ಮ ಅಸಹಿಷ್ಣುತೆ ಪ್ರದರ್ಶಿಸುತ್ತಿದ್ದೀರಿ ಎಂದು ದೂರಿದರು. ಅಂಬೇಡ್ಕರ್ ಅವರನ್ನು ಮತ್ತು ಮತ್ತವರ ಸಮುದಾಯಗಳನ್ನು ಒಪ್ಪಿಕೊಳ್ಳಲು ನೀವು ಎಂದಿಗೂ ತಯಾರಿಲ್ಲ. ಇಡೀ ವಿಶ್ವವೇ ಒಪ್ಪಿಕೊಂಡು ವಿಶ್ವ ಸಂಸ್ಥೆ ಇಂದು ಅಂಬೇಡ್ಕರ್ ಅವರ ಜನ್ಮದಿನವಾದ ಏಪ್ರಿಲ್ 14ರ ದಿನವನ್ನು <strong>ವಿಶ್ವ ಜ್ಞಾನದ ದಿನ</strong> ಎಂದು ಘೋಷಿಸಿದೆ. ಅಂಬೇಡ್ಕರ್ ಎಂದರೆ ಜ್ಞಾನದ ಸಂಕೇತ ನೀವು ಅವರನ್ನು ಅರಗಿಸಿಕೊಳ್ಳಲು ಆಗದಂತ ಅಸೂಯೆ.ಛೇ. ನಮಗೆ ನೀವು ಹೇಳುವ ಸ್ವರ್ಗ, ದೇವರು, ಸ್ಮರಣೆ ಬೇಡ. <strong>ಅಂಬೇಡ್ಕರ್ ಹೆಸರೊಂದೇ ಸಾಕು</strong>. ನಮಗದೇ ಶಕ್ತಿ ನಮಗದೇ ಚೈತನ್ಯ ಮತ್ತು ಸ್ಫೂರ್ತಿ. ಸಾವಿರಾರು ವರ್ಷಗಳಿಂದ ನೀವು ಹೇಳುವ ದೇವರುಗಳನ್ನು ಪೂಜಿಸಿ ಸಾಕಾಯ್ತು. ನಿಮ್ಮ ದೇವರು ನಮ್ಮನ್ನು ದೂರವೇ ಇಟ್ಟ. ಕಡೆಗೆ ಎಲ್ಲರಂತೆ ದೇವಾಲಯದೊಳಕ್ಕೆ ಬಿಟ್ಟುಕೊಳ್ಳಲಿಲ್ಲ ಮಾತ್ರವಲ್ಲ, ದೇವಾಲಯದ ಬಳಿಗೆ ಸುಳಿದರೂ ನಮಗೆ ಕಷ್ಟ ಕೊಡುತ್ತಿದ್ದ. ಅಂಬೇಡ್ಕರ್ ಬಂದ ಮೇಲೆಯೇ ನಮಗೆ ಸ್ವರ್ಗ, ಮೋಕ್ಷ ಎಲ್ಲವೂ ನಮಗೆ ಅಂಬೇಡ್ಕರ್ ಸ್ಮರಣೆಯೇ ಸಾಕು ಎಂದು ಹೇಳಿದರು. ಅಮಿತ್ ಶಾನನ್ನು ಕೇಂದ್ರ ಸಚಿವ ಸ್ಥಾನದಿಂದ ವಜಾ ಮಾಡಲು ಈ ಮೂಲಕ ಅಗ್ರಹಪಡಿಸುತ್ತೇವೆ. ಇಲ್ಲವಾದಲ್ಲಿ ಈತನನ್ನು ವಜಾ ಮಾಡುವವರೆಗೂ ರೈತ, ದಲಿತ ಮತ್ತು ಪ್ರಗತಿಪರ ಸಂಘಟನೆಗಳಿAದ ಪ್ರತಿಭಟನೆ ಮುಂದುವರೆಯುತ್ತದೆ ಎಂದು ಎಚ್ಚರಿಸಿದರು.<br>ಪ್ರತಿಭಟನೆಯಲ್ಲಿ ಜೈಬೀಮ್ ಬ್ರಿಗೇಡ್ ಸಂಘಟನಾ ಸಮಿತಿ ಜಿಲ್ಲಾ ಕಾರ್ಯಾಧ್ಯಕ್ಷ ಚಂದ್ರಶೇಖರ್, ಜಿಲ್ಲಾ ಕಲಾವಿದರ ಸಂಘದ ಅಧ್ಯಕ್ಷ ಕುಮಾರ್, ಇರ್ಫಾನ್, ಅಲ್ಪಸಂಖ್ಯಾತರ ಘಟಕದ ವರ್ಷ, ಟಿಪ್ಪು ಸಂಘರ್ಷ ಸಮಿತಿ ಅದ್ಯಕ್ಷ ಮುಬಾಶೀರ್ ಅಹಮದ್, ಇತರರು ಉಪಸ್ಥಿತರಿದ್ದರು.</p>
]]></content:encoded>
					
		
		
			</item>
		<item>
		<title>ಅಮಿತ್ ಶಾ ಮಗನನ್ನು ಟೀಕಿಸಿದ್ದಕ್ಕೆ ನನ್ನ ಮೇಲೆ ಇಡಿ ಬಲಪ್ರಯೋಗ: ಅಭಿಷೇಕ್ ಬ್ಯಾನರ್ಜಿ ಕಿಡಿ</title>
		<link>https://peepalmedia.com/after-ed-enquiry-abhishek-banarjy-reaction/</link>
		
		<dc:creator><![CDATA[Peepal Media]]></dc:creator>
		<pubDate>Fri, 02 Sep 2022 13:40:35 +0000</pubDate>
				<category><![CDATA[ರಾಜಕೀಯ]]></category>
		<category><![CDATA[amitsha]]></category>
		<category><![CDATA[bjp]]></category>
		<category><![CDATA[india]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<guid isPermaLink="false">https://peepalmedia.com/?p=3650</guid>

					<description><![CDATA[&#8216;ರಾಷ್ಟ್ರಧ್ವಜವನ್ನು ನಿರಾಕರಿಸಿದ ವಿಚಾರದಲ್ಲಿ ನಾನು ಅಮಿತ್ ಷಾ ಮಗನನ್ನು ಟೀಕೆ ಮಾಡಿದ ಕಾರಣಕ್ಕೆ ನನ್ನ ಮೇಲೆ ED ಸಂಸ್ಥೆಯ ಕಡೆಯಿಂದ ಬಿಜೆಪಿ ಕಟ್ಟಿ ಹಾಕಲು ಪ್ರಯತ್ನಿಸುತ್ತಿದೆ. ಹಾಗೊಂದು ವೇಳೆ ED ದಾಳಿಯ ಮೂಲಕ ನನ್ನ ಮೇಲೆ ಬಲಪ್ರಯೋಗ ನಡೆಸಿ ನನ್ನನ್ನು ಭಯಪಡಿಸುವ ಉದ್ದೇಶ ಹೊಂದಿದ್ದರೆ ಅದು ನಿಮ್ಮ ಭ್ರಮೆ ಅಷ್ಟೆ&#8217; ಇದು ಕಲ್ಲಿದ್ದಲು ಕಳ್ಳಸಾಗಣೆ ಆರೋಪದ ಮೇಲೆ ಇಂದು ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸಿ ಬಂದ ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಮಾತು. [&#8230;]]]></description>
										<content:encoded><![CDATA[
<p class="has-medium-font-size">&#8216;ರಾಷ್ಟ್ರಧ್ವಜವನ್ನು ನಿರಾಕರಿಸಿದ ವಿಚಾರದಲ್ಲಿ ನಾನು ಅಮಿತ್ ಷಾ ಮಗನನ್ನು ಟೀಕೆ ಮಾಡಿದ ಕಾರಣಕ್ಕೆ ನನ್ನ ಮೇಲೆ ED ಸಂಸ್ಥೆಯ ಕಡೆಯಿಂದ ಬಿಜೆಪಿ ಕಟ್ಟಿ ಹಾಕಲು ಪ್ರಯತ್ನಿಸುತ್ತಿದೆ. ಹಾಗೊಂದು ವೇಳೆ ED ದಾಳಿಯ ಮೂಲಕ ನನ್ನ ಮೇಲೆ ಬಲಪ್ರಯೋಗ ನಡೆಸಿ ನನ್ನನ್ನು ಭಯಪಡಿಸುವ ಉದ್ದೇಶ ಹೊಂದಿದ್ದರೆ ಅದು ನಿಮ್ಮ ಭ್ರಮೆ ಅಷ್ಟೆ&#8217; ಇದು ಕಲ್ಲಿದ್ದಲು ಕಳ್ಳಸಾಗಣೆ ಆರೋಪದ ಮೇಲೆ ಇಂದು ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸಿ ಬಂದ ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಮಾತು.</p>



<p class="has-medium-font-size">ಕಲ್ಲಿದ್ದಲು ಕಳ್ಳ ಸಾಗಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಅಭಿಷೇಕ್ ಬ್ಯಾನರ್ಜಿ ಇಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು. ಈ ಬಗ್ಗೆ 30 ಬಾರಿ ಬೇಕಾದರೂ ವಿಚಾರಣೆ ಎದುರಿಸಲು ಸಿದ್ದನಿದ್ದೇನೆ‌. ಬಿಜೆಪಿ ಪಕ್ಷದ ಇಂತಹ ಬೆದರಿಕೆಗಳಿಗೆ ಬಗ್ಗುವ ಮಾತಿಲ್ಲ ಎಂದು ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.</p>



<p class="has-medium-font-size">ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಅಭಿಷೇಕ್ ಬ್ಯಾನರ್ಜಿ ಅವರನ್ನು ವಿಚಾರಣೆ ನಡೆಸಲು ಐವರು ಅಧಿಕಾರಿಗಳ ಇಡಿ ಅಧಿಕಾರಿಗಳ ತಂಡ ಗುರುವಾರ ರಾತ್ರಿ ಕೊಲ್ಕತ್ತಾಕ್ಕೆ ಆಗಮಿಸಿದ್ದರು. ಇದಕ್ಕಿಂತ ಮೂರು ದಿನಗಳ ಮುಂಚೆ ಅಭಿಷೇಕ್ ಬ್ಯಾನರ್ಜಿ ಅವರಿಗೆ ಇಡಿ ಸಮನ್ಸ್ ಜಾರಿ ಮಾಡಿತ್ತು.</p>
]]></content:encoded>
					
		
		
			</item>
	</channel>
</rss>
