<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>anand teltumbde &#8211; Peepal Media</title>
	<atom:link href="https://peepalmedia.com/tag/anand-teltumbde/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Fri, 03 Jan 2025 06:41:18 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>anand teltumbde &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಭೀಮಾ ಕೋರೆಗಾಂವ್ ಪ್ರಕರಣದಿಂದ ಬಿಡುಗಡೆ ಕೋರಿ ಬಾಂಬೆ ಹೈಕೋರ್ಟ್ ಮೊರೆ ಹೋದ ಆನಂದ್ ತೇಲ್ತುಂಬ್ಡೆ</title>
		<link>https://peepalmedia.com/anand-teltumbde-move-bombay-high-court-seeking-release-from-bhima-koregaon-case/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 03 Jan 2025 06:38:47 +0000</pubDate>
				<category><![CDATA[ಕೋರ್ಟು - ಕಾನೂನು]]></category>
		<category><![CDATA[anand teltumbde]]></category>
		<category><![CDATA[Bangalore]]></category>
		<category><![CDATA[bengaluru]]></category>
		<category><![CDATA[Bhima Koregaon Case]]></category>
		<category><![CDATA[Bombay High Court]]></category>
		<category><![CDATA[kannada]]></category>
		<category><![CDATA[karnataka]]></category>
		<guid isPermaLink="false">https://peepalmedia.com/?p=51536</guid>

					<description><![CDATA[ಬೆಂಗಳೂರು: 2018 ರ ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಪ್ರಕರಣವನ್ನು ಮುಚ್ಚುವಂತೆ ದಲಿತ ಹಕ್ಕುಗಳ ಹೋರಾಟಗಾರ ಆನಂದ್ ತೇಲ್ತುಂಬ್ಡೆ ಅವರು ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್‌ನಲ್ಲಿ ತೇಲ್ತುಂಬ್ಡೆ ಅವರ ಅರ್ಜಿಯು ನ್ಯಾಯಮೂರ್ತಿಗಳಾದ ಸಾರಂಗ್ ಕೊತ್ವಾಲ್ ಮತ್ತು ಎಂಎಸ್ ಮೋದಕ್ ಅವರ ಪೀಠದ ಮುಂದೆ ವಿಚಾರಣೆಗೆ ಬಂದಾಗ, ನ್ಯಾಯಮೂರ್ತಿ ಕೊತ್ವಾಲ್ ಈ ವಿಷಯದಿಂದ ಹಿಂದೆ ಸರಿದಿದ್ದಾರೆ ಎಂದು ಬಾರ್ ಆಂಡ್‌ ಬೆಂಚ್ ವರದಿ ಮಾಡಿದೆ . ಇದಕ್ಕೂ ಮೊದಲು, ಮೇ 10, 2024 ರಂದು, ವಿಶೇಷ ರಾಷ್ಟ್ರೀಯ ತನಿಖಾ [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> 2018 ರ ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಪ್ರಕರಣವನ್ನು ಮುಚ್ಚುವಂತೆ ದಲಿತ ಹಕ್ಕುಗಳ ಹೋರಾಟಗಾರ ಆನಂದ್ ತೇಲ್ತುಂಬ್ಡೆ ಅವರು ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.</p>



<p>ಹೈಕೋರ್ಟ್‌ನಲ್ಲಿ ತೇಲ್ತುಂಬ್ಡೆ ಅವರ ಅರ್ಜಿಯು ನ್ಯಾಯಮೂರ್ತಿಗಳಾದ ಸಾರಂಗ್ ಕೊತ್ವಾಲ್ ಮತ್ತು ಎಂಎಸ್ ಮೋದಕ್ ಅವರ ಪೀಠದ ಮುಂದೆ ವಿಚಾರಣೆಗೆ ಬಂದಾಗ, ನ್ಯಾಯಮೂರ್ತಿ ಕೊತ್ವಾಲ್ ಈ ವಿಷಯದಿಂದ ಹಿಂದೆ ಸರಿದಿದ್ದಾರೆ ಎಂದು <a href="https://www.barandbench.com/news/anand-teltumbde-bombay-high-court-discharge-bhima-koregaon-case"><em>ಬಾರ್ ಆಂಡ್‌ ಬೆಂಚ್</em></a> ವರದಿ ಮಾಡಿದೆ .</p>



<p>ಇದಕ್ಕೂ ಮೊದಲು, ಮೇ 10, 2024 ರಂದು, ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನ್ಯಾಯಾಲಯವು ಪ್ರಕರಣದಿಂದ ಬಿಡುಗಡೆಗಾಗಿ ತೇಲ್ತುಂಬ್ಡೆ ಅವರ ಮನವಿಯನ್ನು ತಿರಸ್ಕರಿಸಿತ್ತು.</p>



<p>ನ್ಯಾಯಮೂರ್ತಿ ಕೊತ್ವಾಲ್ ಅವರು ಒಬ್ಬರೇ ಅದೇ ಪ್ರಕರಣದ ಇತರ ಕೆಲವು ಆರೋಪಿಗಳ ಜಾಮೀನು ಅರ್ಜಿಗಳನ್ನು ಆಲಿಸಿ ನಿರ್ಧಾರ ತೆಗೆದುಕೊಂಡಿದ್ದರು ಮತ್ತು ಆದ್ದರಿಂದ ಸ್ವತಃ ಹಿಂದೆ ಸರಿಯುತ್ತಿರುವುದಾಗಿ ಅವರು ಹೇಳಿದರು.</p>



<p>“ಈ ವಿಷಯದಲ್ಲಿ, ನಮ್ಮಲ್ಲಿ ಒಬ್ಬರು (ಸಾರಂಗ್ ವಿ ಕೊತ್ವಾಲ್) ಏಕ ನ್ಯಾಯಾಧೀಶರು, ಮೂರು ಜಾಮೀನು ಅರ್ಜಿಗಳಲ್ಲಿ (ಸುಧಾ ಭಾರದ್ವಾಜ್, ಅರುಣ್ ಫೆರೇರಾ ಮತ್ತು ವೆರ್ನಾನ್ ಗೊನ್ಸಾಲ್ವೆಸ್ ಅವರ) ನಿರ್ಧಾರ ತೆಗೆದುಕೊಂಡಿದ್ದಾರೆ, ಇದರಲ್ಲಿ ಕಾನೂನಿನ ವಿವಿಧ ನಿಬಂಧನೆಗಳನ್ನು ಚರ್ಚಿಸಲಾಗಿದೆ. ಆದ್ದರಿಂದ, ಔಚಿತ್ಯವನ್ನು ಬೇಡುತ್ತದೆ. ಈ ಪ್ರಕರಣವನ್ನು ಬೇರೆ ಬೇರೆ ಪೀಠವು ಎಲ್ಲಾ ಅಂಶಗಳ ಮೇಲೆ ಕೇಳುತ್ತದೆ, ಈ ಮೇಲ್ಮನವಿ ಮತ್ತು ಇತರ ವಿಷಯಗಳ ವಿಚಾರಣೆಯಿಂದ ಸಾರಂಗ್ ವಿ ಕೊತ್ವಾಲ್ ಹಿಂದೆ ಸರಿಯುತ್ತಿದ್ದಾರೆ. ಪುಣೆಯ ವಿಶ್ರಂಬಾಗ್ ಪೊಲೀಸ್ ಠಾಣೆಯಲ್ಲಿ 2018 ರ ಎಫ್‌ಐಆರ್ ದಾಖಲಿಸಲಾಗಿದೆ, ”ಎಂದು ಹೈಕೋರ್ಟ್ ಆದೇಶವನ್ನು <a href="https://indianexpress.com/article/cities/mumbai/bombay-hc-judge-anand-teltumbde-elgaar-parishad-9756741/"><em>ಇಂಡಿಯನ್ ಎಕ್ಸ್‌ಪ್ರೆಸ್</em></a> ವರದಿ ಮಾಡಿದೆ .</p>



<p>2019 ರಲ್ಲಿ, ನ್ಯಾಯಮೂರ್ತಿ ಕೊತ್ವಾಲ್ ಅವರು ಸುಧಾ ಭಾರದ್ವಾಜ್, ಅರುಣ್ ಫೆರೇರಾ ಮತ್ತು ವೆರ್ನಾನ್ ಗೊನ್ಸಾಲ್ವಿಸ್ ಅವರ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ್ದರು.</p>



<p>ಅದರ ನಂತರ, ನ್ಯಾಯಮೂರ್ತಿ ಕೊತ್ವಾಲ್ ಸದಸ್ಯರಾಗಿರುವ ಯಾವುದೇ ಪೀಠದ ಮುಂದೆ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಎಫ್‌ಐಆರ್‌ನಿಂದ ಉದ್ಭವಿಸುವ ಯಾವುದೇ ವಿಷಯವನ್ನು ಇರಿಸದಂತೆ ಪೀಠವು ಹೈಕೋರ್ಟ್ ರಿಜಿಸ್ಟ್ರಿಗೆ ನಿರ್ದೇಶಿಸಿತು.</p>



<p>ಬಾಂಬೆ ಹೈಕೋರ್ಟ್‌ಗೆ ಸಲ್ಲಿಸಿದ ಮನವಿಯಲ್ಲಿ, ತೇಲ್ತುಂಬ್ಡೆ ಅವರು ವಿಚಾರಣಾ ನ್ಯಾಯಾಲಯದ ವಿಧಾನವನ್ನು ಪ್ರಶ್ನಿಸಿದ್ದಾರೆ ಮತ್ತು ನ್ಯಾಯಾಲಯವು ತನ್ನ ಜಾಮೀನು ಆದೇಶದಲ್ಲಿ ಬಾಂಬೆ ಹೈಕೋರ್ಟ್ ಮಾಡಿದ ಅವಲೋಕನಗಳನ್ನು ಪರಿಗಣಿಸಲು ವಿಫಲವಾಗಿದೆ ಎಂದು ವಾದಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ʼಮಹಾಡ್ʼ ಮರೆಯಲಾಗದ ಮೊದಲ ದಲಿತ ಕ್ರಾಂತಿ</title>
		<link>https://peepalmedia.com/%ca%bcmahad%ca%bc-was-the-first-dalit-revolution-that-will-never-be-forgotten/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 20 Mar 2024 11:26:53 +0000</pubDate>
				<category><![CDATA[ಇತಿಹಾಸ]]></category>
		<category><![CDATA[ದಲಿತ ನೋಟ]]></category>
		<category><![CDATA[ಸತ್ಯ ಶೋಧ]]></category>
		<category><![CDATA[Ambedkar]]></category>
		<category><![CDATA[Ambedkar odu]]></category>
		<category><![CDATA[ambedkasr]]></category>
		<category><![CDATA[amdedkar]]></category>
		<category><![CDATA[anand teltumbde]]></category>
		<category><![CDATA[anand theldumbde]]></category>
		<category><![CDATA[Dalit]]></category>
		<category><![CDATA[dalit activists]]></category>
		<category><![CDATA[Dalit cultural resistance]]></category>
		<category><![CDATA[india]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=37232</guid>

					<description><![CDATA[(ಮಹಾಡ್ ಚೌಡರ್ ಕೆರೆ ಚಳವಳಿ ದಲಿತ ಚಳವಳಿಯಲ್ಲಿ ಒಂದು ಮರೆಯಲಾಗದ ಅಧ್ಯಾಯ. ಈ ಕುರಿತು 2016ರಲ್ಲಿ ಇಂಗ್ಲಿಷ್‌ನಲ್ಲಿ ಡಾ. ಆನಂದ್ ತೇಲ್ತುಂಬ್ಡೆ ಅವರು&#160; “Mahad: The Making of the First Dalit Revolt” ಎಂಬ ಮಹತ್ವದ ವಿವರವಾದ ವಿಶ್ಲೇಷಣಾತ್ಮಕ ಪುಸ್ತಕ ಬರೆದು ಪ್ರಕಟಿಸಿದರು. ಈ ಪುಸ್ತಕವನ್ನು ಹಿರಿಯ ಲೇಖಕ ಅಬ್ದುಲ್ ರೆಹಮಾನ್ ಪಾಷಾ ಅವರು ಸಮರ್ಥವಾಗಿ ಕನ್ನಡಕ್ಕೆ ಅನುವಾದಿಸಿದ್ದು, ಕ್ರಿಯಾ ಮಾಧ್ಯಮ &#160;ಪ್ರಕಟಿಸಿದೆ. ) ‘‘ಮಹಾಡ್ ದಲಿತರಿಗೆ ಮುಂದಿನ ಹಾದಿಯನ್ನು ತೋರಿಸುವ ದೀಪಸ್ತಂಭವಾಗಿದೆ. ಮಹಾಡ್ ಚಳವಳಿಗೆ [&#8230;]]]></description>
										<content:encoded><![CDATA[
<ul class="wp-block-list">
<li><strong>ಆನಂದ್‌ ತೇಲ್ತುಂಬ್ಡೆ (ಕನ್ನಡಕ್ಕೆ: ಅಬ್ದುಲ್‌ ರೆಹಮಾನ್‌ ಪಾಷ)  </strong></li>
</ul>



<p>(ಮಹಾಡ್ ಚೌಡರ್ ಕೆರೆ ಚಳವಳಿ ದಲಿತ ಚಳವಳಿಯಲ್ಲಿ ಒಂದು ಮರೆಯಲಾಗದ ಅಧ್ಯಾಯ. ಈ ಕುರಿತು 2016ರಲ್ಲಿ ಇಂಗ್ಲಿಷ್‌ನಲ್ಲಿ ಡಾ. ಆನಂದ್ ತೇಲ್ತುಂಬ್ಡೆ ಅವರು&nbsp; “Mahad: The Making of the First Dalit Revolt” ಎಂಬ ಮಹತ್ವದ ವಿವರವಾದ ವಿಶ್ಲೇಷಣಾತ್ಮಕ ಪುಸ್ತಕ ಬರೆದು ಪ್ರಕಟಿಸಿದರು. ಈ ಪುಸ್ತಕವನ್ನು ಹಿರಿಯ ಲೇಖಕ ಅಬ್ದುಲ್ ರೆಹಮಾನ್ ಪಾಷಾ ಅವರು ಸಮರ್ಥವಾಗಿ ಕನ್ನಡಕ್ಕೆ ಅನುವಾದಿಸಿದ್ದು, ಕ್ರಿಯಾ ಮಾಧ್ಯಮ &nbsp;ಪ್ರಕಟಿಸಿದೆ. )</p>



<p>‘‘ಮಹಾಡ್ ದಲಿತರಿಗೆ ಮುಂದಿನ ಹಾದಿಯನ್ನು ತೋರಿಸುವ ದೀಪಸ್ತಂಭವಾಗಿದೆ. ಮಹಾಡ್ ಚಳವಳಿಗೆ ಎರಡು ದಶಕಕ್ಕೂ ಮುನ್ನ ಕೇರಳದಲ್ಲಿ ನಡೆದ ಅಯ್ಯಂಕಾಳಿ ಚಳವಳಿಯ ಗೌರವಾರ್ಹ ಉದಾಹರಣೆ ಬಿಟ್ಟರೆ, ದಲಿತರು ಮೊಟ್ಟ ಮೊದಲ ಬಾರಿಗೆ ಜಾತಿ ಗುಲಾಮಗಿರಿಯ ನೊಗವನ್ನು ಕಿತ್ತೊಗೆದು ತಮ್ಮ ಮಾನವ ಹಕ್ಕುಗಳನ್ನು ನಿಶ್ಚಿತವಾಗಿ ಪ್ರತಿಪಾದಿಸುವ ತಮ್ಮ ನಿರ್ಧಾರವನ್ನು ತೋರಿದ್ದು ಮಹಾಡ್‌ನಲ್ಲಿಯೇ. ಜಾತಿಗೆ ಸಂಬಂಧಿಸಿದ ಕೆಲವು ಅಂಶಗಳನ್ನು ವಿರೋಧಿಸಿದ್ದು ಮತ್ತು ದೇವಸ್ಥಾನದಲ್ಲಿ ಪ್ರವೇಶದ ಹಕ್ಕು, ಸಾರ್ವಜನಿಕ ನೀರಿನ ಮೂಲಗಳಿಂದ ನೀರನ್ನು ಬಳಸುವ ಹಕ್ಕು ಇಂಥ ನಾಗರಿಕ ಹಕ್ಕುಗಳಿಗಾಗಿ ಇತರ ಆಂದೋಲನಗಳೂ ಮಹಾಡ್‌ಗಿಂತ ಮುಂಚೆ ನಡೆದಿದ್ದವು. ನಿಜವೆಂದರೆ, ಮಹಾಡ್ ಆಂದೋಲನದ ಒಂದು ಭಾಗವಾಗಿ, ಸ್ವಲ್ಪವೇ ಮುಂಚೆ ದಾಸ್‌ಗಾಂವ್‌ನಲ್ಲಿರುವ ಕ್ರಾಫೋರ್ಡ್ ಬಾವಿಯನ್ನು ಬಳಸುವಲ್ಲಿ ಮಾಡಿದ ಆಂದೋಲನವು ಆ ಹೊತ್ತಿಗೆ ಯಶಸ್ವಿಯಾಗಿತ್ತು.</p>



<p>ದಲಿತ ಚಳವಳಿಯ ಹೆಗ್ಗುರುತುಗಳಾಗಿ ಮತ್ತು ದಲಿತ ಪ್ರಜ್ಞೆಯನ್ನು ಜಾಗೃತಗೊಳಿಸುವಲ್ಲಿ ನೀಡಿದ ಕೊಡುಗೆಗಾಗಿ ಅವೆಲ್ಲವೂ ಬಹಳ ಮಹತ್ವವನ್ನು ಪಡೆದಿವೆ. ಆದರೆ, ಅವಕ್ಕೂ ಮತ್ತು ಮಹಾಡ್ ಚಳವಳಿಗೂ ಇರುವ ಪ್ರಮುಖ ವ್ಯತ್ಯಾಸವಿರುವುದು ಸಂಘಟನೆ ಮತ್ತು ನಾಯಕತ್ವದ ಸ್ವರೂಪದಲ್ಲಿ. ಸಂಘಟನೆಯ ದೃಷ್ಟಿಯಿಂದ ಮತ್ತು ಡಾ.ಅಂಬೇಡ್ಕರ್ ಅವರಂಥ ವರ್ಚಸ್ವಿ ನಾಯಕತ್ವದ ಕೊರತೆ ಅಲ್ಲಿತ್ತು. ಇದರಿಂದಾಗಿ ಅವು ತಮ್ಮ ಸ್ಥಳೀಯ ಮಿತಿಯನ್ನು ದಾಟಿ ಹೊರಗೆ ಸೈದ್ಧಾಂತಿಕ ಮತ್ತು ಐತಿಹಾಸಿಕ ಪ್ರಭಾವವನ್ನು ಬೀರಲಿಲ್ಲ. ಮಹಾಡ್‌ಗಿಂತ ಮುಂಚೆ, ದೇವಸ್ಥಾನದ ಪ್ರವೇಶದ ನಾಗರಿಕ ಹಕ್ಕಿಗಾಗಿ ನಡೆದ ವೈಕೊಮ್ ಸತ್ಯಾಗ್ರಹವೂ(1924-25) ಕೂಡ, ಮಹಾತ್ಮಾ ಗಾಂಧಿ ಮತ್ತು ಅವರಂಥ ಇನ್ನೂ ಹಲವಾರು ಮುಖ್ಯವಾಹಿನಿ ನಾಯಕರುಗಳ ದಂಡೇ ಅದರಲ್ಲಿ ಭಾಗವಹಿಸಿತ್ತು. ಮಹಾಡ್‌ನ ತೇಜಸ್ಸಾಗಲಿ, ಅದಕ್ಕೆ ಸಿಕ್ಕ ಪ್ರಚಾರದ ವ್ಯಾಪಕತೆಯಾಗಲಿ ವೈಕೊಮ್ ಸತ್ಯಾಗ್ರಹಕ್ಕೆ ಇರಲಿಲ್ಲ. ಅದು ಮುಖ್ಯವಾಹಿನಿಯ ಇತಿಹಾಸದಲ್ಲಿ ಮಹತ್ವವನ್ನು ಪಡೆದರೂ ದಲಿತರಲ್ಲಿ ಮಹಾಡ್‌ನಂಥ ಪ್ರತಿಷ್ಠಿತ ಸ್ಥಾನವನ್ನು ಗಳಿಸಿಕೊಳ್ಳುವಲ್ಲಿ ಸೋತಿತು. ವೈಕೊಮ್ ಚಳವಳಿಗೆ ಸ್ಫೂರ್ತಿಯಾಗಲಿ ನಾಯಕತ್ವವಾಗಲಿ ದಲಿತರಿಂದ ಬಂದಿರಲಿಲ್ಲ. ಆದರೆ ಮಹಾಡ್ ಚಳವಳಿ, ತನ್ನ ಸಂಘಟನೆಯ ಪರಿಮಾಣ, ಧ್ಯೇಯದೃಷ್ಟಿಯ ಸಂವಹನ, ಸ್ವಯಂಪ್ರೇರಣೆ ಮತ್ತು ನಾಯಕತ್ವದ ದೃಷ್ಟಿಯಿಂದ ದಲಿತರು ತಮ್ಮ ನಾಗರಿಕ ಹಕ್ಕುಗಳಿಗಾಗಿ ಹೂಡಿದ ಬಂಡಾಯದ ಅಭೂತಪೂರ್ವ ನಿದರ್ಶನವಾಗಿತ್ತು. ದಮನಿತರ ನಾಗರಿಕ ಹಕ್ಕುಗಳ ಹೋರಾಟವಾಗಿ ಅದು ದೇಶದ್ದಷ್ಟೇ ಅಲ್ಲ, ಜಾಗತಿಕ ಇತಿಹಾಸದಲ್ಲಿಯೂ ಪ್ರಮುಖ ಸ್ಥಾನವನ್ನು ಪಡೆಯಬೇಕು.</p>



<p><strong>2. </strong><strong>ಎರಡು ಚಾರಿತ್ರಿಕ ಚಳವಳಿಗಳ ರೋಮಾಂಚಕ ಭಾಗಗಳು</strong></p>



<p>ಪುಸ್ತಕದಲ್ಲಿರುವ ಆರ್.ಬಿ. ಮೋರೆ ಅವರ ಮೂಲ ಕಥನದ ಕೆಲವು ರೋಮಾಂಚಕ ಭಾಗಗಳು ಹೀಗಿವೆ:</p>



<p><strong>ಕೆರೆ ನೀರನ್ನು ನಿರಾಕರಿಸುವ ಅಸ್ಪಶ್ಯತೆಯನ್ನು ಧಿಕ್ಕರಿಸಿದವರ ಮೇಲೆ ದಾಳಿ</strong></p>



<p>ಸಾಂಪ್ರದಾಯಿಕ ಮತ್ತು ಕ್ರೂರ ಪರಂಪರಾಗತ ಧೋರಣೆಯನ್ನು ಪೋಷಿಸಿಕೊಂಡು ಬಂದಿದ್ದವರಿಗೆ ಇದೆಲ್ಲವನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಅವರು ತಮ್ಮ ಜನರನ್ನು ಕಾಲ್ನಡಿಗೆಯಲ್ಲೋ ಸೈಕಲ್ ಹತ್ತಿಕೊಂಡೋ ಹೋಗಿ, ‘ಮಹಾರ್‌ರು ಈಗಾಗಲೇ ಕೆರೆಯನ್ನು ಕಲುಷಿತಗೊಳಿಸಿದ್ದಾರೆ, ಇನ್ನು ಅವರು ವೀರೇಶ್ವರ ದೇವಸ್ಥಾನವನ್ನು ಪ್ರವೇಶಿಸುವವರಿದ್ದಾರೆ’ ಎಂಬ ವದಂತಿಯನ್ನು ರೈತ ಸಮುದಾಯದಲ್ಲಿ ಹಬ್ಬಿಸಿದರು. ಇವರ ಸುಳ್ಳು ವದಂತಿಗೆ ಕಿವಿಗೊಟ್ಟು, ಮೇಲ್ಜಾತಿಯ ಭೂಮಾಲಕರು ಮತ್ತು ಲೇವಾದೇವಿ ಸಾಹುಕಾರರ ಚಿತಾವಣೆಗೆ ಬಲಿಯಾಗಿ ಸ್ಪೃಶ್ಯ ಜಾತಿಗಳ ಸಾವಿರಾರು ಬಡ ಜನ ತಮ್ಮ ದೇವರು ಮತ್ತು ಧರ್ಮವನ್ನು ಕಾಪಾಡಲು ಮಹಾಡ್‌ನತ್ತ ಧಾವಿಸಿದರು. ವೀರೇಶ್ವರ ದೇವಸ್ಥಾನದ ಆವರಣದಲ್ಲಿ ಒಗ್ಗೂಡಿದರು. ಅವರ ಉಪಸ್ಥಿತಿಯಿಂದ ಉತ್ತೇಜಿತರಾದ ಕೆಲವು ಅಶಿಸ್ತಿನ ವ್ಯಕ್ತಿಗಳು ಸಮ್ಮೇಳನದ ನಂತರ ಮಾರ್ಕೆಟ್‌ನಲ್ಲಿ ಓಡಾಡುತ್ತಿದ್ದ ಅಸ್ಪೃಶ್ಯ ವ್ಯಕ್ತಿಗಳನ್ನು ಹಿಡಿದು ಹೊಡೆಯತೊಡಗಿದರು.</p>



<p>ಅಸ್ಪೃಶ್ಯರು ಕೆರೆಯಿಂದ ಹಿಂದಿರುಗಿದ ಎರಡು ಮೂರು ಗಂಟೆಗಳ ಕಾಲ ಇದು ನಡೆಯಿತು. ಈ ಹೊತ್ತಿಗೆ ಸಮ್ಮೇಳನಕ್ಕೆ ಬಂದಿದ್ದ ಹೆಚ್ಚಿನ ಜನ ಊಟ ಮಾಡಿ ತಮ್ಮ ತಮ್ಮ ಗ್ರಾಮಗಳಿಗೆ ಹೊರಟಿದ್ದರು, ಕೆಲವರು ಆಗಲೇ ಹೋಗಿಯೇ ಬಿಟ್ಟಿದ್ದರು. ಇನ್ನು ಕೆಲವರು ಇನ್ನೂ ಊಟ ಮಾಡುತ್ತಿದ್ದರು, ತಮ್ಮ ಜನರ ಮೇಲೆ ಆಗುತ್ತಿರುವ ದಾಳಿಯ ಸುದ್ದಿ ಕೇಳಿ ಅವರು ಊಟವನ್ನು ಅರ್ಧದಲ್ಲಿಯೇ ಬಿಟ್ಟು ಎದ್ದರು. ಅವರು ದಾಳಿಕೋರರನ್ನು ಮುಖಾಮುಖಿ ಎದುರಿಸುವ ನಿರ್ಧಾರವನ್ನು ಮಾಡಿದ್ದರು. ಪೆಂಡಾಲುಗಳನ್ನು ಮುರಿದು ಅದರಿಂದ ಕೋಲು, ಬಡಿಗೆಗಳನ್ನು ಎತ್ತಿಕೊಂಡರು. ಕೆಲವು ಡಾಕ್ ಬಂಗಲೆಗೆ ಓಡಿ ಹೋಗಿ ಅಸಹಾಯಕ ಜನರ ಮೇಲೆ ದಾಳಿ ಮಾಡುತ್ತಿರುವ ಹೇಡಿಗಳ ಮೇಲೆ ಸೇಡು ತೀರಿಸಿಕೊಳ್ಳಲು ಅನುಮತಿಯನ್ನು ಕೋರಿದರು. ಆದರೆ ಅವರಿಗೆ ಆಕ್ರೋಶಕ್ಕೆ ಒಳಗಾಗದೆ ಶಾಂತವಾಗಿ ತಮ್ಮ ತಮ್ಮ ಗ್ರಾಮಗಳಿಗೆ ಮರಳಲು ಹೇಳಲಾಯಿತು. ಬಸ್ ಡಿಪೋದ ಪಶ್ಚಿಮ ಭಾಗದಲ್ಲಿ ಸಾವಿರಾರು ಅಸ್ಪೃಶ್ಯರು ಸೇರಿದ್ದರು. ಮೇಲೆ ಹೇಳಿದ ಗೂಂಡಾಗಳು ಮಾರ್ಕೆಟ್ ಪ್ರದೇಶದಲ್ಲಿ, ಓಣಿ ಓಣಿಗಳಲ್ಲಿ ಮುಕ್ತವಾಗಿ ಓಡಾಡಿ ಅಸ್ಪಶ್ಯ ಜಾತಿಯ ಒಬ್ಬೊಬ್ಬರೇ ಸಿಗುವ ವ್ಯಕ್ತಿಗಳನ್ನು ಹಿಡಿದು ಹೊಡೆಯುವುದಕ್ಕಾಗಿ ನೋಡುತ್ತಿದ್ದರು. ಇಂಥವರ ಮಾರಣಾಂತಿಕ ಹಲ್ಲೆಗೆ ಸಿಕ್ಕವರಲ್ಲಿ ಒಬ್ಬರು ಮಹಾರ್ ಸಮಾಜ್ ಸೇವಾ ಸಂಘದ ಅಧ್ಯಕ್ಷರಾದ ಭಿಕಾಜಿ ಸಾಂಭಾಜಿ ಗಾಯಕ್ವಾಡ್ ಮತ್ತು ಬಾಂಬೆಯಿಂದ ಬಂದಿದ್ದ ಇನ್ನು ಕೆಲವರು.</p>



<p>ಪಟ್ಟಣದ ರಸ್ತೆಗಳು ತಮ್ಮ ಮೂಲಭೂತ ಮಾನವ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಮುಗ್ಧ ದಲಿತರ ರಕ್ತದಿಂದ ಕಲೆಯಾಗಿದ್ದವು. ಗೂಂಡಾಗಳು ಮಾರ್ಕೆಟ್‌ನಲ್ಲಿ ಬೇಸ್ ಕ್ಯಾಂಪ್‌ಗಳ ಮೇಲೆಯೂ ದಾಳಿ ನಡೆಸಲು ಏಳು ಬಾರಿ ಪ್ರಯತ್ನಿಸಿದ್ದರು; ಆದರೆ, ಬಾಗಿಲಲ್ಲೇ ಕೈಯಲ್ಲಿ ಕುಡಗೋಲು, ಕಬ್ಬಿಣದ ರಾಡುಗಳನ್ನು ಹಿಡಿದು ನಿಂತಿದ್ದ, ವಯಸ್ಸಾದ ಆದರೂ ಕಟ್ಟುಮಸ್ತಾದ ಶರೀರದ ಇಬ್ಬರು ಕಾರ್ಯಕರ್ತರು, ಶಿವರಾಮ್ ಗೋಪಾಲ್ ಜಾಧವ್ ಮತ್ತು ಸಾಂಭಾಜಿ ತುಕಾರಾಮ್ ಗಾಯಕ್ವಾಡ್ ಮತ್ತು ಅವರ ಬೆನ್ನಿಗೆ ನಿಂತಿದ್ದ ಯುವಜನರ ಬಲವಾದ ಗುಂಪನ್ನು ನೋಡಿ ಹಿಮ್ಮೆಟ್ಟಿದ್ದರು. ಅವರ ಕೋಪೋದ್ರಿಕ್ತ ಮುಖ ಮತ್ತು ಕೈಯಲ್ಲಿನ ಆಯುಧಗಳನ್ನು ನೋಡಿ ಅವರ ಮೇಲೆ ಹಲ್ಲೆ ಮಾಡುವ ಧೈರ್ಯ ಆ ಗೂಂಡಾಗಳಿಗೆ ಬರಲಿಲ್ಲ. ಹಾಗೆಯೇ ಗುಂಪುಗುಂಪುಗಳಲ್ಲಿ ಓಡಾಡುತ್ತಿದ್ದ ಅಸ್ಪೃಶ್ಯರನ್ನು ಅವರು ಮುಟ್ಟಲು ಹೋಗಲಿಲ್ಲ. ನಂತರ ಈ ಗೂಂಡಾಗಳು ತಮ್ಮ ಗಮನವನ್ನು ಮೋಚಿಗಳ ಅಂಗಡಿಗಳ ಮೇಲೆ ತಿರುಗಿಸಿದರು. ಕಂಡೇಶ್‌ನಿಂದ ಬಂದಿದ್ದ ಈ ಅಂಗಡಿಕಾರ ಪುರುಷರನ್ನಷ್ಟೇ ಅಲ್ಲ, ಎಳೆಯ, ವೃದ್ಧ ಮಹಿಳೆಯರನ್ನು ಚಚ್ಚಿದರು. ಈ ಕ್ರೌರ್ಯಕ್ಕೆ ಮಕ್ಕಳೂ ಬಲಿಯಾದರು. ಭಾನುದಾಸ್ ಕಾಂಬ್ಳಿ ಮತ್ತು ಪಿ.ಎನ್.ರಾಜ್‌ಭೋಗ್‌ರಂಥ ಹೆಸರಾಂತ ಅಸ್ಪೃಶ್ಯ ನಾಯಕರೂ ಈ ಹಲ್ಲೆಗಳಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು.’’</p>



<p><strong>ಮನುಸ್ಮತಿಯ ದಹನ</strong></p>



<p>‘‘ಕೆಲವರು, ಸತ್ಯಾಗ್ರಹವನ್ನು ಮಾಡಬೇಕು, ಆದರೆ ಬಾಬಾಸಾಹೇಬರು ಅದರಲ್ಲಿ ಭಾಗವಹಿಸಬಾರದು ಎಂದು ಸಲಹೆ ನೀಡಿದರು. ಹೆಚ್ಚಿನವರು ಸತ್ಯಾಗ್ರಹದ ಪರವಾಗಿಯೇ ಇದ್ದರು. ಬಾಬಾಸಾಹೇಬ್ ಮೌನವಾಗಿ ಎಲ್ಲರ ಅಭಿಪ್ರಾಯಗಳನ್ನು ಜಾಗರೂಕತೆಯಿಂದ ಆಲಿಸುತ್ತಿದ್ದರು. ಕೊನೆಯಲ್ಲಿ, ಅವರೆಂದರು, ‘‘ಸತ್ಯಾಗ್ರಹವನ್ನು ಮಾಡಿ ಜೈಲಿಗೆ ಹೋಗಲು 1,000 ಜನ ಸಿದ್ಧವಾಗಿದ್ದರೆ ನಾವು ಸತ್ಯಾಗ್ರಹ ಮಾಡೋಣ.’’ ಈ ನಿರ್ಧಾರವನ್ನು ತೆಗೆದುಕೊಳ್ಳುವ ಹೊತ್ತಿಗೆ ರಾತ್ರಿ 12 ಆಗಿತ್ತು. ಸತ್ಯಾಗ್ರಹಿಗಳು ತೆಗೆದುಕೊಳ್ಳಬೇಕಾಗಿದ್ದ ಶಪಥದ ಕರಡನ್ನು ತಯಾರಿಸಲಾಯಿತು. ಕರಡಿನ ಮುಖ್ಯವಾದ ಭಾಗದ ಒಕ್ಕಣೆ ಹೀಗಿತ್ತು: ‘‘ನಾನು ಜೈಲಿಗೆ ಹೋಗಲು, ಹೋರಾಡಲು, ಸತ್ಯಾಗ್ರಹವನ್ನು ಮಾಡುತ್ತಾ ಮಡಿಯಲೂ ಸಿದ್ಧನಿದ್ದೇನೆ’’. ಧರ್ಮಶಾಲಾದ ಕಚೇರಿಯಲ್ಲಿ ಇದರ ಹಲವಾರು ಪ್ರತಿಗಳನ್ನು ತಯಾರಿಸಲಾಯಿತು. ಶಿಕ್ಷಿತ ಪ್ರತಿನಿಧಿಗಳಲ್ಲಿ ಅದನ್ನು ಹಂಚಿ, ಸತ್ಯಾಗ್ರಹಿಗಳಿಗೆ ಓದಿ ಹೇಳಿ ಅವರ ಸಮ್ಮತಿಗಾಗಿ ಹೆಬ್ಬೆಟ್ಟಿನ ಗುರುತನ್ನು ಪಡೆಯಲು ಹೇಳಲಾಯಿತು. ಬೆಳಗಿನ ಜಾವ 4 ಗಂಟೆಗೆ 3,500 ಜನ ತಮ್ಮ ಸಮ್ಮತಿಯನ್ನು ದಾಖಲಿಸಿದ್ದರು. ಇದಲ್ಲದೇ ಇನ್ನೂ ಹೆಚ್ಚಿನ ಜನ ಮುಂದೆ ಬರುತ್ತಲಿದ್ದರು. ಆದ್ದರಿಂದ ಸಹಿಯನ್ನು ಸಂಗ್ರಹಿಸುವ ಕೆಲಸವನ್ನು ನಿಲ್ಲಿಸಲಾಯಿತು.</p>



<p>ಬೆಳಗ್ಗೆ 4:30ರ ಹೊತ್ತಿಗೆ ಸತ್ಯಾಗ್ರಹಿಗಳು ಸಹಿ ಹಾಕಿದ್ದ ಕಾಗದಗಳ ಕಟ್ಟುಗಳನ್ನು ಬಾಬಾಸಾಹೇಬರ ಸಮ್ಮುಖದಲ್ಲಿ ಇಡಲಾಯಿತು. ಅಷ್ಟು ಹೊತ್ತಿಗೆ ಕ್ಯಾಂಪಿನಲ್ಲಿದ್ದ ಇತರರ ಹಾಗೆಯೇ ಅವರು ಎದ್ದು ಬಹಳ ಹೊತ್ತಾಗಿತ್ತು. ಬೆಳಗ್ಗೆ 7 ಗಂಟೆಗೆ ಅವರು ಕಲೆಕ್ಟರ್‌ರಿಗೆ ಒಂದು ಪತ್ರವನ್ನು ತಲುಪಿಸಲು ಹೇಳಿದರು. ನಾನು ಆ ಪತ್ರವನ್ನು ತೆಗೆದುಕೊಂಡು ಹೋಗುತ್ತಿರುವಾಗ ಡಾಕ್ ಬಂಗಲೆಯ ಹಾದಿಯಲ್ಲಿ ಒಬ್ಬ ಮನುಷ್ಯ ಜೀವಿಯನ್ನೂ ಕಾಣಲಿಲ್ಲ. ಇಡೀ ಮಾರ್ಕೆಟ್ ನಿರ್ಜನವಾಗಿತ್ತು. ನಾನು ಪತ್ರವನ್ನು ಕಲೆಕ್ಟರ್‌ಅವರ ಕೈಗೊಪ್ಪಿಸಿದೆ, ಅದರ ಮೇಲೆ ಕಣ್ಣಾಡಿಸಿದವರೇ ತಾವು ಸ್ವಲ್ಪ ಹೊತ್ತಿನಲ್ಲಿಯೇ ಅಲ್ಲಿಗೆ ಆಗಮಿಸುವುದಾಗಿ ನನ್ನ ಮೂಲಕ ಮೌಖಿಕ ಸೂಚನೆ ನೀಡಿ ನನ್ನನ್ನು ಕಳುಹಿಸಿಕೊಟ್ಟರು. ನಾನು ಬಂದು ಅದನ್ನು ಬಾಬಾಸಾಹೇಬರಿಗೆ ತಿಳಿಸಿದೆ.</p>



<p>ಬಾಬಾಸಾಹೇಬರ ಜೊತೆ ಸ್ನೇಹದಿಂದ ಇದ್ದ ಬಾಪು ಸಹಸ್ರಬುದ್ಧೆ, ತಮಾಷೆಯಾಗಿ ಹೇಳಿದರು, ‘‘ನಿನ್ನನ್ನು ಬಂಧಿಸದೇ ಹಿಂದಕ್ಕೆ ಹೇಗೆ ಕಳುಹಿಸಿದರು?’’ ಅದಕ್ಕೆ ನಾನು ಏನೂ ಹೇಳಲಿಲ್ಲ. ಆ ಹೊತ್ತಿನಲ್ಲಿ ಬಾಬಾಸಾಹೇಬ್ ಸುತ್ತ ಕೆಲವರಿದ್ದರು. ಉಳಿದವರು ಸಭಾಂಗಣಕ್ಕೆ ಹೊರಟು ಹೋಗಿದ್ದರು. ಆ ದಿನದ ಗೋಷ್ಠಿ ಬೆಳಗಿನ 9 ಗಂಟೆಗೆ, ಮನುಸ್ಮತಿಯ ಪ್ರತಿಯನ್ನು ಸುಡುವುದರೊಂದಿಗೆ ಆರಂಭವಾಯಿತು. ಪವಿತ್ರ ಚಿತೆಗಾಗಿ ಒಂದು ವಿಶೇಷ ಸ್ಥಳವನ್ನು ಪೆಂಡಾಲ್ ಹತ್ತಿರದಲ್ಲಿ ನಿರ್ಮಿಸಲಾಗಿತ್ತು. ಹೋಮ ಹವನಕ್ಕೆ ಬೇಕಾದ ಎಲ್ಲಾ ಸಾಮಗ್ರಿಯನ್ನು ವ್ಯವಸ್ಥೆ ಮಾಡಲಾಗಿತ್ತು. ಬಾಬಾಸಾಹೇಬ ಬೆಂಕಿಯ ಎದುರಿಗೆ ನಿಂತಿದ್ದರು ಮತ್ತು ಬಾಪು ಸಹಸ್ರಬದ್ಧೆ ಮನುಸ್ಮತಿಯ ಆಕ್ಷೇಪಾರ್ಹ ಭಾಗಗಳ ಹಾಳೆಗಳನ್ನು ಬಾಬಾಸಾಹೇಬರ ಕೈಗಳಿಂದ ತೆಗೆದುಕೊಂಡು, ಅದನ್ನೊಮ್ಮೆ ಓದಿ ಬೆಂಕಿಗೆ ಹಾಕುತ್ತಿದ್ದರು. ಈ ಕಾರ್ಯಕ್ರಮ ನಡೆಯುತ್ತಿರುವಾಗ ಜನರಲ್ಲಿ ಉತ್ಸಾಹ, ಹುಮ್ಮಸ್ಸು ತುಂಬಿ ತುಳುಕುತ್ತಿತ್ತು.’’</p>
]]></content:encoded>
					
		
		
			</item>
		<item>
		<title>ಭೀಮಾ ಕೋರೆಗಾಂವ್‌ ಪ್ರಕರಣ: ಹಿರಿಯ ಚಿಂತಕ ಆನಂದ್‌ ತೇಲ್ತುಂಬ್ಡೆಯವರಿಗೆ ಜಾಮೀನು</title>
		<link>https://peepalmedia.com/bombay-high-court-graants-bail-to-activist-anand-teltumbde/</link>
		
		<dc:creator><![CDATA[Peepal Media]]></dc:creator>
		<pubDate>Fri, 18 Nov 2022 07:28:19 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[anand teltumbde]]></category>
		<category><![CDATA[bail]]></category>
		<category><![CDATA[bheema koregaon]]></category>
		<category><![CDATA[Bombay High Court]]></category>
		<category><![CDATA[elgar parishad]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=15803</guid>

					<description><![CDATA[2018ರ ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಆರೋಪಿತ ಪಾತ್ರಕ್ಕಾಗಿ 2020ರಿಂದ ತಲೋಜಾ ಕೇಂದ್ರ ಕಾರಾಗೃಹದಲ್ಲಿ ಪ್ರಸ್ತುತ ಬಂಧಿತರಾಗಿರುವ ದಲಿತ ಹಕ್ಕುಗಳ ಹೋರಾಟಗಾರ ಮತ್ತು ವಿದ್ವಾಂಸ ಆನಂದ್ ತೇಲ್ತುಂಬ್ಡೆ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ. ನ್ಯಾಯಮೂರ್ತಿಗಳಾದ ಎಎಸ್ ಗಡ್ಕರಿ ಮತ್ತು ಮಿಲಿಂದ್ ಜಾಧವ್ ಅವರ ಪೀಠದಿಂದ ಅರ್ಜಿಯ ವಿವರವಾದ ವಿಚಾರಣೆಯ ನಂತರ ಇಂದು ತೀರ್ಪು ಪ್ರಕಟಣೆ ಈ ಹಿಂದೆ NIA ನ್ಯಾಯಲವು ತೇಲ್ತುಂಬ್ಡೆ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) [&#8230;]]]></description>
										<content:encoded><![CDATA[
<p>2018ರ ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಆರೋಪಿತ ಪಾತ್ರಕ್ಕಾಗಿ 2020ರಿಂದ ತಲೋಜಾ ಕೇಂದ್ರ ಕಾರಾಗೃಹದಲ್ಲಿ ಪ್ರಸ್ತುತ ಬಂಧಿತರಾಗಿರುವ ದಲಿತ ಹಕ್ಕುಗಳ ಹೋರಾಟಗಾರ ಮತ್ತು ವಿದ್ವಾಂಸ ಆನಂದ್ ತೇಲ್ತುಂಬ್ಡೆ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ.</p>



<p>ನ್ಯಾಯಮೂರ್ತಿಗಳಾದ ಎಎಸ್ ಗಡ್ಕರಿ ಮತ್ತು ಮಿಲಿಂದ್ ಜಾಧವ್ ಅವರ ಪೀಠದಿಂದ ಅರ್ಜಿಯ ವಿವರವಾದ ವಿಚಾರಣೆಯ ನಂತರ ಇಂದು ತೀರ್ಪು ಪ್ರಕಟಣೆ</p>



<p>ಈ ಹಿಂದೆ NIA ನ್ಯಾಯಲವು ತೇಲ್ತುಂಬ್ಡೆ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಜೊತೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಆಧಾರದ ಮೇಲೆ ಅವರಿಗೆ ಜಾಮೀನು ನಿರಾಕರಿಸಿತ್ತು. ತನ್ನ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ನೀಡಿದ್ದ ಆದೇಶದ ವಿರುದ್ಧ ಆನಂದ್‌ ತೇಲ್ತುಂಬೆ ಕಳೆದ ವರ್ಷ ಹೈಕೋರ್ಟ್‌ ಮೊರೆ ಹೋಗಿದ್ದರು.</p>



<p>ನ್ಯಾಯಮೂರ್ತಿಗಳಾದ ಎಎಸ್ ಗಡ್ಕರಿ ಮತ್ತು ಮಿಲಿಂದ್ ಜಾಧವ್ ಅವರ ಪೀಠವು ಅರ್ಜಿಯನ್ನು ವ್ಯಾಪಕವಾಗಿ ಆಲಿಸಿ ಕಳೆದ ವಾರ ತನ್ನ ಆದೇಶವನ್ನು ಕಾಯ್ದಿರಿಸಿದ ನಂತರ ಇಂದು ತೀರ್ಪು ಪ್ರಕಟಿಸಿತು.</p>



<p>ಸೆಕ್ಷನ್ 38 ಮತ್ತು 39ರ ಅಡಿಯಲ್ಲಿ (ಭಯೋತ್ಪಾದಕ ಸಂಘಟನೆಯಲ್ಲಿ ಸದಸ್ಯತ್ವಕ್ಕೆ ಸಂಬಂಧಿಸಿದ) ಅಪರಾಧಗಳನ್ನು ಮಾತ್ರ ತೇಲ್ತುಂಬ್ಡೆ ವಿರುದ್ಧ ಮಾಡಲಾಗಿದೆ ಎಂದು ಪೀಠ ಹೇಳಿದೆ. ಮತ್ತು ಅಂತಹ ಅಪರಾಧಗಳಲ್ಲಿ ಗರಿಷ್ಠ ಶಿಕ್ಷೆ 10 ವರ್ಷಗಳ ಜೈಲು ಶಿಕ್ಷೆಯಾಗಿತ್ತು ಮತ್ತು ತೇಲ್ತುಂಬ್ಡೆ ಈಗಾಗಲೇ 2 ವರ್ಷಗಳಿಗಿಂತ ಹೆಚ್ಚು ಕಾಲ ಜೈಲುವಾಸ ಅನುಭವಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲು ಆದೇಶಿಸಿದೆ. ಈ ಕುರಿತು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು NIA ಸಂಸ್ಥೆಗೆ ಅನುವು ಮಾಡಿಕೊಡುವ ಸಲುವಾಗಿ ಮಾನ್ಯ ನ್ಯಾಯಾಲಯವು ತನ್ನ ಆದೇಶಕ್ಕೆ ಒಂದು ವಾರ ತಡೆ ನೀಡಿದೆ ಎಂದು ಬಾರ್‌ ಎಂಡ್‌ ಬೆಂಚ್‌ ಎನ್ನುವ ಕಾನೂನು ಸುದ್ದಿಗಳ ವೆಬ್ಸೈಟ್‌ ವರದಿ ಮಾಡಿದೆ.</p>



<p>2017ರ ಡಿಸೆಂಬರ್ 31ರಂದು ನಗರದಲ್ಲಿ ಎಲ್ಗರ್ ಪರಿಷದ್ ಸಮಾವೇಶ ನಡೆದ ಒಂದು ದಿನದ ನಂತರ ಪುಣೆ ಬಳಿಯ ಕೋರೆಗಾಂವ್ ಭೀಮಾ ಗ್ರಾಮದಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ಆನಂದ್ ತೇಲ್ತುಂಬ್ಡೆ ಮತ್ತು ಇತರ ಕಾರ್ಯಕರ್ತರ ಮೇಲೆ ಪುಣೆ ಪೊಲೀಸರು ಆರಂಭದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಮಾವೇಶವು, ಪಶ್ಚಿಮ ಮಹಾರಾಷ್ಟ್ರ ನಗರದ ಹೊರವಲಯದಲ್ಲಿರುವ ಭೀಮಾ-ಕೋರೆಗಾಂವ್ ಯುದ್ಧ ಸ್ಮಾರಕದ ಬಳಿ ಮರುದಿನ ಹಿಂಸಾಚಾರವನ್ನು ಪ್ರಚೋದಿಸಿತು ಎಂದು ಪೊಲೀಸರು ಹೇಳಿದ್ದರು. ಮಾವೋವಾದಿ ನಂಟು ಹೊಂದಿರುವವರು ಈ ಸಮಾವೇಶವನ್ನು ಆಯೋಜಿಸಿದ್ದರು ಎಂದು ಪೊಲೀಸರು ಪ್ರತಿಪಾದಿಸಿ, ನಂತರ ಈ ಪ್ರಕರಣದ ತನಿಖೆಯನ್ನು NIA ವಹಿಸಿಕೊಂಡಿತು. ರೋನಾ ವಿಲ್ಸನ್, ಆನಂದ್ ತೇಲ್ತುಂಬ್ಡೆ, ವೆರ್ನಾನ್ ಗೊನ್ಸಾಲ್ವಿಸ್, ವರವರ ರಾವ್, ಸುಧಾ ಭಾರದ್ವಾಜ್, ಹನಿ ಬಾಬು ಮತ್ತು ಶೋಮಾ ಸೇನ್ ಈ ಪ್ರಕರಣದ ಏಳು ಆರೋಪಿಗಳಾಗಿದ್ದರು. ಮತ್ತು ಈಗ ಅವರಲ್ಲಿ ಮೂವರಿಗೆ ಜಾಮೀನು ದೊರೆತಂತಾಗಿದೆ.</p>



<p>ಈ ನಡುವೆ ವಾಷಿಂಗ್ಟನ್ ಪೋಸ್ಟ್‌ ಪತ್ರಿಕೆಯ ವರದಿಯು ʼಆರೋಪಿಗಳ ಲ್ಯಾಪ್‌ಟಾಪ್‌ಗಳು ಮತ್ತು ಇತರ ಎಲೆಕ್ಟ್ರಾನಿಕ್ ಸಾಧನಗಳಲ್ಲಿ ಕಂಡುಬಂದ ದೋಷಾರೋಪಣೆಯ ದಾಖಲೆಗಳನ್ನು ಕಳ್ಳ ಮಾರ್ಗದಲ್ಲಿ ಇರಿಸಲಾಗಿತ್ತು,ʼ ಎಂದು ವರದಿ ಮಾಡಿತ್ತು. ಇದರ ನಂತರ NIA ಏಳು ಆರೋಪಿಗಳ ಫೋನುಗಳನ್ನು ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಫೆಬ್ರವರಿ 2022ರಲ್ಲಿ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಗೆ ಸಲ್ಲಿಸಲು ಅನುಮತಿ ನೀಡಿತು.</p>



<p>ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಪತ್ರಕರ್ತರು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರ ದನಿಗಳನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆಯೆಂದು ಅಂತರಾಷ್ಟ್ರೀಯ ವೇದಿಕೆಗಳಲ್ಲಿ ಕೂಗು ಎದ್ದಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಹಾಗೂ ನಿನ್ನೆ RSS ಜಂಟಿ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ &#8220;ಸಂಘದ ಅಭಿಪ್ರಾಯಗಳನ್ನು ಜನರು ಒಪ್ಪಿಕೊಂಡಿದ್ದಾರೆ ಮತ್ತು ಸ್ವೀಕರಿಸಿದ್ದರೆ, ಆದರೆ ಮಾವೋವಾದಿಗಳು, ಸಾಂಸ್ಕೃತಿಕ ಮಾರ್ಕ್ಸ್‌ವಾದಿಗಳು, ಇಸ್ಲಾಮಿಸ್ಟ್‌ಗಳು ಮತ್ತು ಜಾಗತಿಕ ಬಂಡವಾಳಶಾಹಿಗಳು ಹಿಂದುತ್ವ ಮತ್ತು ಭಾರತದ ವಿರುದ್ಧ ತಮ್ಮ ಅಭಿಪ್ರಾಯಗಳನ್ನು ಮುಖ್ಯವಾಹಿನಿಯ ಮೇಲೆ ಹೇರಲು ಒಂದು ವ್ಯವಸ್ಥೆಯನ್ನು ಸ್ಥಾಪಿಸಿದ್ದಾರೆ. ಅಂತಹ ಸಂಕಥನವನ್ನು ಎದುರಿಸಿ ನಿಲ್ಲುವುದು ಮುಖ್ಯ.&#8221; ಎಂದು ಹೇಳಿದ್ದನ್ನು ಸಹ ಇಲ್ಲಿ ಸ್ಮರಿಸಬಹುದು.</p>



<p></p>
]]></content:encoded>
					
		
		
			</item>
	</channel>
</rss>
