<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Annabhagya &#8211; Peepal Media</title>
	<atom:link href="https://peepalmedia.com/tag/annabhagya/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Mon, 02 Dec 2024 15:23:46 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Annabhagya &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಅನ್ನಭಾಗ್ಯಕ್ಕೆ ಪಂಜಾಬ್ ಅಕ್ಕಿ: ಕನ್ನಡ ದಿನಪತ್ರಿಕೆಯೊಂದರ ವರದಿಗೆ ಆಹಾರ ಇಲಾಖೆ ಸ್ಪಷ್ಟನೆ</title>
		<link>https://peepalmedia.com/punjab-rice-for-annabhagya-food-department-clarifies-report-in-kannada-daily/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 02 Dec 2024 15:22:29 +0000</pubDate>
				<category><![CDATA[ರಾಜ್ಯ]]></category>
		<category><![CDATA[Annabhagya]]></category>
		<category><![CDATA[Bangalore]]></category>
		<category><![CDATA[food department]]></category>
		<category><![CDATA[karnataka]]></category>
		<category><![CDATA[karnataka government]]></category>
		<guid isPermaLink="false">https://peepalmedia.com/?p=50038</guid>

					<description><![CDATA[ಬೆಂಗಳೂರು: ಡಿಸೆಂಬರ್‌ 2, 2024 ರಂದು ಕನ್ನಡದ ದಿನಪತ್ರಿಕೆಯೊಂದರಲ್ಲಿ &#8220;ಅನ್ನಭಾಗ್ಯಕ್ಕೆ ಪಂಜಾಬ್ ಅಕ್ಕಿ&#8221; ಎನ್ನುವ ಶೀರ್ಷಿಕೆಯ ಜೊತೆಗೆ ಸುದ್ದಿಯೊಂದು ಪ್ರಕಟವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಸ್ಪಷ್ಟಿಕರಣವನ್ನು ನೀಡಿದೆ. ಈ ಪತ್ರಿಕೆಯು ʼಅನ್ನಭಾಗ್ಯಕ್ಕೆ ಪಂಜಾಬ್ ಅಕ್ಕಿʼ ಎಂಬ ಶೀರ್ಷಿಕೆ ನೀಡಿ, ಎಂ.ಎಸ್.ಪಿ ದರಕ್ಕೆ ಹೋಲಿಸಿದರೆ ಮುಕ್ತ ಮಾರುಕಟ್ಟೆಯಲ್ಲಿ ಭತ್ತಕ್ಕೆ 300 ರಿಂದ 400 ರುಪಾಯಿ ಕಡಿಮೆ ಇದ್ದು, ಬೆಲೆ ಕುಸಿದಾಗ ಸರ್ಕಾರ ಮಧ್ಯಪ್ರವೇಶಿಸಿ ಬೆಲೆ ಸ್ಥಿರಗೊಳಿಸುವುದೇ ಎಂ.ಎಸ್.ಪಿ. ಯೋಜನೆಯ [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಡಿಸೆಂಬರ್‌ 2,  2024 ರಂದು ಕನ್ನಡದ ದಿನಪತ್ರಿಕೆಯೊಂದರಲ್ಲಿ &#8220;ಅನ್ನಭಾಗ್ಯಕ್ಕೆ ಪಂಜಾಬ್ ಅಕ್ಕಿ&#8221; ಎನ್ನುವ ಶೀರ್ಷಿಕೆಯ ಜೊತೆಗೆ ಸುದ್ದಿಯೊಂದು ಪ್ರಕಟವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಸ್ಪಷ್ಟಿಕರಣವನ್ನು ನೀಡಿದೆ. </p>



<p>ಈ ಪತ್ರಿಕೆಯು ʼಅನ್ನಭಾಗ್ಯಕ್ಕೆ ಪಂಜಾಬ್ ಅಕ್ಕಿʼ ಎಂಬ ಶೀರ್ಷಿಕೆ ನೀಡಿ, ಎಂ.ಎಸ್.ಪಿ ದರಕ್ಕೆ ಹೋಲಿಸಿದರೆ ಮುಕ್ತ ಮಾರುಕಟ್ಟೆಯಲ್ಲಿ ಭತ್ತಕ್ಕೆ 300 ರಿಂದ 400 ರುಪಾಯಿ ಕಡಿಮೆ ಇದ್ದು, ಬೆಲೆ ಕುಸಿದಾಗ ಸರ್ಕಾರ ಮಧ್ಯಪ್ರವೇಶಿಸಿ ಬೆಲೆ ಸ್ಥಿರಗೊಳಿಸುವುದೇ ಎಂ.ಎಸ್.ಪಿ. ಯೋಜನೆಯ ಮುಖ್ಯ ಉದ್ದೇಶ ಎಂದು ಪ್ರಕಟಿಸಲಾಗಿತ್ತು.</p>



<p>&#8220;ಇದಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯವು ಡಿ.ಸಿ.ಪಿ. (De-Centralized procurement) ರಾಜ್ಯವಾಗಿದ್ದು, ಇದರಿಂದಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಯನುಸಾರ ರಾಜ್ಯದ ರೈತರಿಂದ ಭತ್ತ, ರಾಗಿ ಮತ್ತು ಬಿಳಿಜೋಳ ಖರೀದಿಸಿ ಸಾರ್ವಜನಿಕ ವಿತರಣಾ ಪದ್ಧತಿಯಡಿ Central NFSA ಪಡಿತರ ಫಲಾನುಭವಿಗಳಿಗೆ ಮಾತ್ರ ಹಂಚಿಕೆ ಮಾಡಲು ಕ್ರಮವಹಿಸಬೇಕಾಗಿರುತ್ತದೆ. ಅದರಂತೆ 2024- 25ನೇ ಸಾಲಿನಲ್ಲಿ 2.24 ಲಕ್ಷ ಮೆಟ್ರಿಕ್‌ ಟನ್ ಭತ್ತ ಖರೀದಿಗೆ ಕೇಂದ್ರ ಸರ್ಕಾರವು ಅನುಮತಿ ನೀಡಿದ್ದು, ರಾಜ್ಯ ಸರ್ಕಾರದಿಂದ ಇದಕ್ಕೆ ಸಂಬಂಧಿಸಿದಂತೆ ದಿನಾಂಕ 29-11-20248 ಆದೇಶವನ್ನು ಹೊರಡಿಸಲಾಗಿದ್ದು, ರೈತರ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಎನ್.ಐ.ಸಿ. ಸಂಸ್ಥೆಗೆ ಅಗತ್ಯ ಸೂಚನೆ ನೀಡಲಾಗಿರುತ್ತದೆ.&#8221; ‌</p>



<p>&#8220;ಹಾಗೆಯೇ, ಕೇಂದ್ರ ಸರ್ಕಾರ ಅನುಮೋದಿತ ಖರೀದಿ ಅವಧಿ ಎಂದರೆ 01 ಜನವರಿ 2025 ರಿಂದ 31 ಮಾರ್ಚ್ 2025 ರವರಗೆ ಖರೀದಿಸಲು ಕ್ರಮವಹಿಸಲಾಗುತ್ತಿದೆ. ಭತ್ತ ಖರೀದಿಗೆ ಅಗತ್ಯವಿರುವ ಖರೀದಿ ಕೇಂದ್ರಗಳನ್ನು ಗುರುತಿಸಿ ಪ್ರಾರಂಭಿಸಲು ಈಗಾಗಲೇ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಜಿಲ್ಲಾಧಿಕಾರಗಳ ಅಧ್ಯಕ್ಷತೆಯಲ್ಲಿರುವ ಟಾಸ್ಕ್‌ ಫೋರ್ಸ್ ಸಮಿತಿಗಳಲ್ಲಿ ನಿರ್ಣಯಿಸಿ ಕ್ರಮವಹಿಸಲಾಗುತ್ತಿದೆ ಹಾಗೂ ವ್ಯಾಪಕ ಪ್ರಚಾರ ಕಾರ್ಯವನ್ನು ಸಹ ಜಿಲ್ಲಾ ಮಟ್ಟದಲ್ಲಿ ಕೈಗೊಳ್ಳಲಾಗಿದೆ. 2023-24ನೇ ಸಾಲಿನಲ್ಲಿ ಸಹ 2.24 ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿ, ಇದಕ್ಕಾಗಿ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಂಡಿದ್ದರೂ ಕೂಡ ರೈತರಿಂದ ಭತ್ತ ಖರೀದಿಯಾಗಿರುವುದಿಲ್ಲ,&#8221; ಎಂದು ಇಲಾಖೆ ಸ್ಪಷ್ಟಿಕರಣವನ್ನು ನೀಡಿದೆ.</p>



<p>ಡಿ.ಸಿ.ಪಿ. ರಾಜ್ಯವು ಭತ್ತವನ್ನು ಖರೀದಿಸಿದಾಗ ಅದರಿಂದ ಪಡೆಯುವ ಭತ್ತ ಪರಿವರ್ತಿತ ಅಕ್ಕಿ ಪ್ರಮಾಣವನ್ನು ಕೇವಲ Central NFSA ಪಡಿತರ ಫಲಾನುಭವಿಗಳಿಗೆ ಮಾತ್ರ ಹಂಚಿಕೆ ಮಾಡಲು ಅವಕಾಶವಿರುತ್ತದೆ. ರಾಜ್ಯ NFSA ಪಡಿತರ ಫಲಾನುಭವಿಗಳಿಗೆ ಕೇಂದ್ರ NFSA ಫಲಾನುಭವಿಗಳಿಗೆ ನೀಡಿದಂತೆಯೇ ಪ್ರತಿ ತಿಂಗಳು ಪ್ರತಿ ಪಿಹೆಚ್.ಹೆಚ್ ಸದಸ್ಯರಿಗೆ 5 ಕೆ.ಜಿ. ಆಹಾರಧಾನ್ಯವನ್ನು ನೀಡುತ್ತಿದ್ದು, ಇದಕ್ಕಾಗಿ ಭಾರತೀಯ ಆಹಾರ ನಿಗಮದಿಂದ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ (Open Market Sale Scheme- OMSS) ಅಕ್ಕಿಯನ್ನು ಖರೀದಿಸಲಾಗುತ್ತಿದೆ. ಪ್ರತಿ ಕ್ವಿಂಟಲ್ ಗೆ 2800 ರುಪಾಯಿ ಎಂದು ನಿಗಧಿಪಡಿಸಿ Excluding Transportation ಎಂದು ತಿಳಿಸಲಾಗಿರುತ್ತದೆ. ಇದರಿಂದಾಗಿ, ಜಿಲ್ಲೆಗಳಲ್ಲಿನ ಭಾರತೀಯ ಆಹಾರ ನಿಗಮದ ಗೋದಾಮುಗಳಲ್ಲಿ ಯಾವ ರಾಜ್ಯದ ಅಕ್ಕಿಯ ಲಾಟ್ ಲಭ್ಯವಿರುತ್ತದೆಯೋ ಅದರನ್ವಯ ನಿಗದಿತ ಬೆಲೆ 2800 ರುಪಾಯಿಯೊಂದಿಗೆ ಸಾಗಾಟ ದರವನ್ನು ಸೇರಿಸಿ ದರಗಳನ್ನು ನಿಗಧಿಪಡಿಸಲಾಗಿರುತ್ತದೆ.</p>



<p>&#8220;ಇದರಿಂದಾಗಿ ರಾಜ್ಯ ಸರ್ಕಾರದಿಂದ ಯಾವುದೇ ಇತರೇ ರಾಜ್ಯಗಳಿಂದ ನೇರವಾಗಿ ಅಕ್ಕಿಯನ್ನು ಖರೀದಿಸದೇ, ಕೇಂದ್ರ ಸರ್ಕಾರದ ಯೋಜನೆಯಾದ OMSS ರಡಿ ಭಾರತ ಆಹಾರ ನಿಗಮದಿಂದ ಖರೀದಿಸಲಾಗುತ್ತಿದೆ. ರಾಜ್ಯವು ಕೇಂದ್ರ ಸರ್ಕಾರದ FCI ನಿಂದ ಖರೀದಿ ಮಾಡಿದ ಅಕ್ಕಿಯ ಮೂಲ ತಿಳಿದಿರುವುದಿಲ್ಲ. FCI ಗೋದಾಮಿನಿಂದ ಖರೀದಿಸಿದ ಅಕ್ಕಿಯನ್ನು ನಮ್ಮ ರಾಜ್ಯದ ಸಗಟು ಮಳಿಗೆಗಳಿಗೆ ಕೊಂಡೊಯ್ದು, ಅಲ್ಲಿಂದ ಸಾರ್ವಜನಿಕ ಪಡಿತರ ವ್ಯವಸ್ಥೆ ಮೂಲಕ ಜನರಿಗೆ ಹಂಚಿಕೆ ಮಾಡಲಾಗುತ್ತಿದೆ. ಇದರಿಂದಾಗಿ ಈ ಪತ್ರಿಕೆಯಲ್ಲಿ ವರದಿಯಾಗಿರುವಂತೆ ಆಹಾರ ಭದ್ರತೆ ಯೋಜನೆಯಡಿ ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಪಂಜಾಬ್, ಹರಿಯಾಣ, ಒಡಿಶಾ, ಉತ್ತರವದೇಶ ಇತ್ಯಾದಿ ಅಕ್ಕಿ ಭಾಗ್ಯ ಲಭಿಸುತ್ತಿದೆ ಎಂದು ಪ್ರಕಟಿಸಿರುವುದು ಸತ್ಯಕ್ಕೆ ದೂರವಾದ ವಿಷಯವಾಗಿರುತ್ತದೆ,&#8221; ಎಂದು ಆಹಾರ ಇಲಾಖೆ ಸ್ಪಷ್ಟನೆ ನೀಡಿದೆ.</p>
]]></content:encoded>
					
		
		
			</item>
		<item>
		<title>*ಚುನಾವಣೆ ನಂತರ ಭಾರತ್‌ ರೈಸ್‌ ಬಂದ್‌: ಅನ್ನಭಾಗ್ಯಕ್ಕೆ ಪರ್ಯಾಯವಾಗಿ ಶುರು ಮಾಡಿದ್ದ ಯೋಜನೆಗೆ ಕೊಕ್ಕೆ*</title>
		<link>https://peepalmedia.com/bharat-rice-bandh-after-election-a-hook-for-the-scheme-that-was-started-as-an-alternative-to-annabhagya/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 04 Jul 2024 07:07:23 +0000</pubDate>
				<category><![CDATA[ರಾಜಕೀಯ]]></category>
		<category><![CDATA[Annabhagya]]></category>
		<category><![CDATA[bharatrice]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=41731</guid>

					<description><![CDATA[ಬೆಂಗಳೂರು: ಕೇಂದ್ರ ಸರ್ಕಾರ ಆರಂಭಿಸಿದ್ದ ಭಾರತ್ ರೈಸ್ ಮಾರಾಟವನ್ನು ಜುಲೈ ತಿಂಗಳಿನಿಂದ ನಿಲ್ಲಿಸಲಾಗಿದೆ. ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ ಎಂದು ಎನ್ನಲಾಗುತ್ತಿದೆ. ಆದರೆ, ಕೇಂದ್ರದಿಂದ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಕರ್ನಾಟಕ ಸರ್ಕಾರದ ಅನ್ನಬಾಗ್ಯ ಯೋಜನೆಗೆ ಪರ್ಯಾಯವಾಗಿ ಭಾರತ ರೈಸ್‌ ಯೋಜನೆಯನ್ನು ಕೇಂದ್ರ ಸರ್ಕಾರದಿಂದ ಶುರು ಮಾಡಲಾಗಿತ್ತು. ಈ ಯೋಜನೆಯಡಿ 29 ರೂ.ಗೆ 1 ಕೆಜಿ ಅಕ್ಕಿ, 27.50 ರೂ.ಗೆ 1 ಕೆಜಿ ಗೋಧಿ ಹಿಟ್ಟು, 60 ರೂ.ಗೆ 1 ಕೆಜಿ ಕಡಲೆ ಬೇಳೆ ಮಾರಾಟ ಮಾಡಲಾಗುತ್ತಿತ್ತು. [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಕೇಂದ್ರ ಸರ್ಕಾರ ಆರಂಭಿಸಿದ್ದ ಭಾರತ್ ರೈಸ್ ಮಾರಾಟವನ್ನು ಜುಲೈ ತಿಂಗಳಿನಿಂದ  ನಿಲ್ಲಿಸಲಾಗಿದೆ. ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ ಎಂದು ಎನ್ನಲಾಗುತ್ತಿದೆ. ಆದರೆ, ಕೇಂದ್ರದಿಂದ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. </p>



<p> ಕರ್ನಾಟಕ ಸರ್ಕಾರದ ಅನ್ನಬಾಗ್ಯ ಯೋಜನೆಗೆ ಪರ್ಯಾಯವಾಗಿ ಭಾರತ ರೈಸ್‌ ಯೋಜನೆಯನ್ನು ಕೇಂದ್ರ ಸರ್ಕಾರದಿಂದ ಶುರು ಮಾಡಲಾಗಿತ್ತು. ಈ ಯೋಜನೆಯಡಿ 29 ರೂ.ಗೆ 1 ಕೆಜಿ ಅಕ್ಕಿ, 27.50 ರೂ.ಗೆ 1 ಕೆಜಿ ಗೋಧಿ ಹಿಟ್ಟು, 60 ರೂ.ಗೆ 1 ಕೆಜಿ ಕಡಲೆ ಬೇಳೆ ಮಾರಾಟ ಮಾಡಲಾಗುತ್ತಿತ್ತು.</p>



<p>ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ದಿನಸಿ ವಿತರಣೆಯ ಉದ್ದೇಶದಿಂದ ದೇಶದ ಎಲ್ಲಾ ಜನರಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ವಿತರಿಸಲು ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಭಾರತ್ ರೈಸ್ ಅಕ್ಕಿಯನ್ನು ಬಿಡುಗಡೆ ಮಾಡಿತ್ತು. ಆದರೆ, ಕೇವಲ 6 ತಿಂಗಳಲ್ಲಿ ಯೋಜನೆಯನ್ನು ಯಾವುದೇ ಮುನ್ಸೂಚನೆ ನೀಡದೇ ನಿಲ್ಲಿಸಲಾಗಿದೆ. ನಾಗರಿಕರು ಅಕ್ಕಿ ವಿತರಣೆಯಾಗುವ ಕಡೆ ಪ್ರತಿ ದಿನ ಚೀಲ ಹಿಡಿದುಕೊಂಡು ಹೋಗಿ ವಾಪಸ್‌ ಬರುತ್ತಿದ್ದಾರೆ ಎಂದು ತಿಳಿದು ಬಂದಿದೆ.</p>



<p>ನ್ಯಾಷನಲ್ ಅಗ್ರಿಕಲ್ಚರ್ ಕೋ ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ ಆಫ್ ಇಂಡಿಯಾ ಲಿಮಿಟೆಡ್ ಸಂಸ್ಥೆಯು ಮಾರಾಟದ ಜವಾಬ್ದಾರಿಯನ್ನು ವಹಿಸಿತ್ತು.</p>



<p>ಕೇಂದ್ರ ಸರಕಾರ 2024ರ ಫೆಬ್ರವರಿ 2ರಂದು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯುವ ಉದ್ದೇಶದಿಂದ ಕಡಿಮೆ ದರದಲ್ಲಿ ಗುಣಮಟ್ಟದ ಅಕ್ಕಿ ವಿತರಿಸಲು ಆರಂಭಿಸಿದ್ದ ಈ ಯೋಜನೆಯು ಮತದಾರರನ್ನು ಸೆಳೆಯುವಲ್ಲಿ ಮುಖ್ಯ ಪಾತ್ರ ವಹಿಸಿತ್ತು.</p>



<p>ಜನ ಸಂಖ್ಯೆ ಹೆಚ್ಚಿರುವ ಪ್ರದೇಶಗಳಲ್ಲಿ ಗ್ರಾಹಕರಿಗೆ ಮೊಬೈಲ್ ವ್ಯಾನ್ ಮೂಲಕ ಆಹಾರ ಪದಾರ್ಥಗಳನ್ನು ನೀಡಲಾಗುತ್ತಿತ್ತು. ಜೂನ್ 10 ರವರೆಗೆ ಕೇಂದ್ರ ಸರ್ಕಾರ ಆದೇಶದ ಅನ್ವಯ ದಾಸ್ತಾನುಗಳು ಮಾರಾಟವಾದ ನಂತರ ಪೂರೈಕೆಯನ್ನು ಸ್ಥಗಿತ ಮಾಡಲಾಗಿದೆ ಎಂದು ತಿಳಿದು ಬಂದಿದೆ.</p>
]]></content:encoded>
					
		
		
			</item>
		<item>
		<title>ಹೊಸ ಬಿಪಿಎಲ್ ಎಪಿಎಲ್ ಕಾರ್ಡುಗಳ ಅರ್ಜಿ ಸಲ್ಲಿಕೆ ಸಧ್ಯಕ್ಕಿಲ್ಲ : ಸಚಿವ ಕೆ.ಹೆಚ್.ಮುನಿಯಪ್ಪ</title>
		<link>https://peepalmedia.com/application-for-new-bpl-apl-cards-is-not-yet-available/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 18 Aug 2023 11:21:45 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[Annabhagya]]></category>
		<category><![CDATA[KH muniyappa]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=25825</guid>

					<description><![CDATA[ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದಂತ ರಾಜ್ಯದ ಜನತೆಗೆ ಬಿಗ್ ಶಾಕ್ ಎನ್ನುವಂತೆ ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಗೆ ಅನುಮತಿ ಇಲ್ಲ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಚಿವರಾದ ಮುನಿಯಪ್ಪ, ಸದ್ಯಕ್ಕೆ ಎಪಿಎಲ್, ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಗೆ ಅನೇಕ ಮಂದಿ ಬೇಡಿಕೆ ಇಟ್ಟಿದ್ದಾರೆ ಎಂಬ ಪ್ರಶ್ನೆಗೆ ಸಧ್ಯಕ್ಕೆ ಯಾವುದೇ ಹೊಸ ಕಾರ್ಡ್ ಗೆ ಅನುಮತಿ ಇಲ್ಲಾ ಎಂದು ಸಚಿವ ಸಚಿವ ಕೆ ಎಚ್ ಮುನಿಯಪ್ಪ [&#8230;]]]></description>
										<content:encoded><![CDATA[
<p>ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದಂತ ರಾಜ್ಯದ ಜನತೆಗೆ ಬಿಗ್ ಶಾಕ್ ಎನ್ನುವಂತೆ ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಗೆ ಅನುಮತಿ ಇಲ್ಲ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.</p>



<p>ವಿಧಾನಸೌಧದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಚಿವರಾದ ಮುನಿಯಪ್ಪ, ಸದ್ಯಕ್ಕೆ ಎಪಿಎಲ್, ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಗೆ ಅನೇಕ ಮಂದಿ ಬೇಡಿಕೆ ಇಟ್ಟಿದ್ದಾರೆ ಎಂಬ ಪ್ರಶ್ನೆಗೆ ಸಧ್ಯಕ್ಕೆ ಯಾವುದೇ ಹೊಸ ಕಾರ್ಡ್ ಗೆ ಅನುಮತಿ ಇಲ್ಲಾ ಎಂದು ಸಚಿವ ಸಚಿವ ಕೆ ಎಚ್ ಮುನಿಯಪ್ಪ ಹೇಳಿದ್ದಾರೆ.</p>



<p>ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವುದು ಆರಂಭವಾಗಿಲ್ಲ . ಎಪಿಎಲ್ , ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆಗೆ ನಾವೇ ಓಪನ್ ಮಾಡಿಲ್ಲ. ಏನು ಕಾರಣ ಅಂತ ಸದ್ಯದಲ್ಲೇ ಹೇಳ್ತೇವೆ. ಇನ್ನೂ ಒಂದಿಷ್ಟು ದಿನ ಎಪಿಎಲ್, ಬಿಪಿಎಲ್ ಅರ್ಜಿ ಸಲ್ಲಿಕೆಗೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ.</p>



<p>ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ನಂತರ 25, 26 ಒಳಗೆ ಫಲಾನುಭವಿಗಳ ಅಕೌಂಟ್ ಗೆ ಹಣ ಸಂದಾಯವಾಗುತ್ತೆ. ಅಕ್ಕಿ, ರಾಗಿ, ಜೋಳವನ್ನು ಎಷ್ಟು ಪ್ರಮಾಣದಲ್ಲಿ ಬಳಕೆ ಮಾಡುತ್ತಾರೆ ಎಂಬ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಆ ನಂತರದಲ್ಲಿ ಉಳಿಕೆ ಹಣ ಫಲಾನುಭವಿಗಳಿಗೆ ಹೋಗಲಿದೆ ಎಂದು ತಿಳಿಸಿದ್ದಾರೆ.</p>



<p>ಸಧ್ಯಕ್ಕೆ ಅಕ್ಕಿ ಕೊರತೆ ಇರುವ ಕಾರಣ ಅಕೌಂಟ್ ಗೆ ಹಣ ಸಂದಾಯವಾಗಿದೆ. ಈಗಾಗಲೇ ಅಕ್ಕಿ ಕೊಡಲು ತೆಲಂಗಾಣ ಮತ್ತು ಆಂದ್ರಪ್ರದೇಶ ಮುಂದೆ ಬಂದಿದೆ. ಅಕ್ಕಿ ದರದ ಬಗ್ಗೆ ಮಾತುಕತೆ ನಡೆಯುತ್ತಿದೆ. ವಾರದ ಹತ್ತು ದಿನಗಳ ಒಳಗೆ ಎಲ್ಲವೂ ಫೈನಲ್ ಆಗುತ್ತೆ. ಮುಂದಿನ ತಿಂಗಳು ಪಡಿತರದಲ್ಲಿ ಹತ್ತು ಕೆಜಿ ಅಕ್ಕಿ ಸಿಗುತ್ತೆ ಅಂತ ಡೆಡ್ ಲೈನ್ ಕೊಡಕ್ಕೆ ಆಗಲ್ಲ. ಅಧಿಕಾರಿಗಳ ಜತೆ ಚರ್ಚೆ ಆಗ್ತಿದೆ.. ಮಾಹಿತಿ ಪಡೆದಿದ್ದೇನೆ ಎಂದು ಹೇಳಿದರು.</p>
]]></content:encoded>
					
		
		
			</item>
		<item>
		<title>ಅನ್ನಭಾಗ್ಯ ಯೋಜನೆ ತಪ್ಪಿಸಲು ಕೇಂದ್ರ ಷಡ್ಯಂತ್ರ : ಪ್ರಿಯಾಂಕ್ ಖರ್ಗೆ ಆರೋಪ</title>
		<link>https://peepalmedia.com/central-conspiracy-to-avoid-annabhagya-scheme-priyank-kharge-accused/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 20 Jun 2023 11:27:09 +0000</pubDate>
				<category><![CDATA[ರಾಜಕೀಯ]]></category>
		<category><![CDATA[Annabhagya]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[priyaank kharge]]></category>
		<guid isPermaLink="false">https://peepalmedia.com/?p=22542</guid>

					<description><![CDATA[ದ್ವೇಷದ ರಾಜಕಾರಣಕ್ಕೆ ಬಿದ್ದು ರಾಜ್ಯದಲ್ಲಿ ಅನ್ನ ಭಾಗ್ಯ ಯೋಜನೆ ಜಾರಿಗೊಳಿಸದಂತೆ ಕೇಂದ್ರ ಬಿಜೆಪಿ ಸರ್ಕಾರ ರಾಜಕೀಯ ಕುತಂತ್ರ ಮಾಡುತ್ತಿದೆ. ಇದಕ್ಕೆ ರಾಜ್ಯದ ಬಿಜೆಪಿ ನಾಯಕರೂ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಕಲಬುರಗಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕನ್ನಡಿಗರ ಆಸ್ಮಿತೆಗೆ ಧಕ್ಕೆಯಾಗುತ್ತಿರುವುದಕ್ಕೆ, ನಿರುದ್ಯೋಗ ಸಮಸ್ಯೆ ಹೆಚ್ಚಿರುವುದಕ್ಕೆ ರಾಜ್ಯದ ಜನತೆ ಬಿಜೆಪಿ ವಿರುದ್ದ ತಿರುಗಿ ಬಿದ್ದಿದ್ದರು. [&#8230;]]]></description>
										<content:encoded><![CDATA[
<p>ದ್ವೇಷದ ರಾಜಕಾರಣಕ್ಕೆ ಬಿದ್ದು ರಾಜ್ಯದಲ್ಲಿ ಅನ್ನ ಭಾಗ್ಯ ಯೋಜನೆ ಜಾರಿಗೊಳಿಸದಂತೆ ಕೇಂದ್ರ ಬಿಜೆಪಿ ಸರ್ಕಾರ ರಾಜಕೀಯ ಕುತಂತ್ರ ಮಾಡುತ್ತಿದೆ. ಇದಕ್ಕೆ ರಾಜ್ಯದ ಬಿಜೆಪಿ ನಾಯಕರೂ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.</p>



<p>ಕಲಬುರಗಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕನ್ನಡಿಗರ ಆಸ್ಮಿತೆಗೆ ಧಕ್ಕೆಯಾಗುತ್ತಿರುವುದಕ್ಕೆ, ನಿರುದ್ಯೋಗ ಸಮಸ್ಯೆ ಹೆಚ್ಚಿರುವುದಕ್ಕೆ ರಾಜ್ಯದ ಜನತೆ ಬಿಜೆಪಿ ವಿರುದ್ದ ತಿರುಗಿ ಬಿದ್ದಿದ್ದರು. ಅದರ ಪರಿಣಾಮವೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ಬಂದಿದೆ. ಇದನ್ನು ಸಹಿಸಿಕೊಳ್ಳಲು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಆಗದಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ದ ದ್ವೇ಼ಷದ ರಾಜಕಾರಣ ಪ್ರಾರಂಭಿಸಿದೆ ಎಂದು ಆರೋಪಿಸಿದ್ದಾರೆ.</p>



<figure class="wp-block-image size-large"><img fetchpriority="high" decoding="async" width="1024" height="576" src="https://peepalmedia.com/wp-content/uploads/2023/06/IMG-20230620-WA0036-1024x576.jpg" alt="" class="wp-image-22543" srcset="https://peepalmedia.com/wp-content/uploads/2023/06/IMG-20230620-WA0036-1024x576.jpg 1024w, https://peepalmedia.com/wp-content/uploads/2023/06/IMG-20230620-WA0036-300x169.jpg 300w, https://peepalmedia.com/wp-content/uploads/2023/06/IMG-20230620-WA0036-768x432.jpg 768w, https://peepalmedia.com/wp-content/uploads/2023/06/IMG-20230620-WA0036-150x84.jpg 150w, https://peepalmedia.com/wp-content/uploads/2023/06/IMG-20230620-WA0036-696x392.jpg 696w, https://peepalmedia.com/wp-content/uploads/2023/06/IMG-20230620-WA0036-1068x601.jpg 1068w, https://peepalmedia.com/wp-content/uploads/2023/06/IMG-20230620-WA0036.jpg 1280w" sizes="(max-width: 1024px) 100vw, 1024px" /></figure>



<p>ರಾಜ್ಯ ಸರ್ಕಾರದ ವತಿಯಿಂದ 5 ಕೆಜಿ ಹಾಗೂ ಕೇಂದ್ರದಿಂದ 5 ಕೆಜಿ ಸೇರಿ ಒಟ್ಟು 10 ಕೆಜಿ ಅಕ್ಕಿಯನ್ನು ಅನ್ನ ಭಾಗ್ಯ ಯೋಜನೆಯಡಿಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆ ಮೂಲಕ ಜನರಿಗೆ ವಿತರಿಸುವುದಾಗಿ ಸಿಎಂ ಜೂನ್ 2 ರಂದು ಹೇಳಿದ್ದರು ಅದರಂತೆ ಭಾರತೀಯ ಆಹಾರ ನಿಗಮಕ್ಕೆ (Food Corporation of India ) ಗೆ ಪತ್ರ ಬರೆದು 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡಲು ಕೋರಿರುತ್ತಾರೆ. ಆಗ ಉತ್ತರಿಸಿದ ಎಫ್ ಸಿ ಐ ಜೂನ್ 12 ರಂದು ಪತ್ರ ಬರೆದು ಪ್ರತಿ ಕ್ವಿಂಟಾಲ್ ಗೆ ರೂ 3400 ರಂತೆ 2.08 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡಲು ಒಪ್ಪಿರುತ್ತದೆ.</p>



<p>ಆದರೆ ಅಚ್ಚರಿಯಂತೆ, ಕೇಂದ್ರ ಆಹಾರ ಸರಬರಾಜು ಹಾಗೂ ಸಾರ್ವಜನಿಕ ವಿತರಣಾ ಇಲಾಖೆಯ ಅಣತಿಯಂತೆ ಎಫ್ ಸಿ ಐ ಜೂನ್ 13 ರಂದು ರಾಜ್ಯಕ್ಕೆ ಬರೆದ ಮತ್ತೊಂದು ಪತ್ರದಲ್ಲಿ ಅಕ್ಕಿ ಸರಬರಾಜು ಮಾಡಲು ಆಗುವುದಿಲ್ಲ ಎಂಬ ಪ್ರತಿಕ್ರಿಯೆ ನೀಡುತ್ತದೆ.. ಎಫ್ ಸಿ ಐ ನಲ್ಲಿ ಸಾಕಷ್ಟು ಅಕ್ಕಿ ದಾಸ್ತಾನು ಇದ್ದು ಖಾಸಗಿಯವರಿಗೆ ಸರಬರಾಜು ಮಾಡಲು ಸಿದ್ಧರಿದ್ದರೂ ಕೂಡಾ ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡಲು ನಿರಾಕರಿಸಿರುವುದು ಗಮನಿಸಿದರೆ ಕೇಂದ್ರಕ್ಕೆ ಕನ್ನಡಿಗರ ಹಿತಾಸಕ್ತಿ ಕಾಪಾಡುವುದು ಬೇಕಿಲ್ಲ ಹಾಗೂ ರಾಜ್ಯವನ್ನು ಹಸಿವು ಮುಕ್ತ ರಾಜ್ಯವನ್ನಾಗಿ ಮಾಡುವುದು ಬೇಕಿಲ್ಲ ಎಂದು ಗೊತ್ತಾಗುತ್ತದೆ ಎಂದು ಹೇಳಿದರು.</p>



<p>ಒಂದು ಕಡೆ ರಾಜ್ಯಕ್ಕೆ ಅಕ್ಕಿ ವಿತರಣೆ ಮಾಡಲು ಆಗುವುದಿಲ್ಲ ಎಂದು ಹೇಳುತ್ತಾ ಇನ್ನೊಂದು ಕಡೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ‌ ಎಸ್ ಜೈಶಂಕರ್ ಅಮೇರಿಕಾ ಹಾಗೂ ಯೂರೋಪ್ ದೇಶಗಳಿಗೆ ಆಹಾರ ಧಾನ್ಯ ಸರಬರಾಜು ಮಾಡುವುದಾಗಿ ಹೇಳಿದ್ದಾರೆ. ತನ್ನದೇ ದೇಶದ ಜನರನ್ನು ಹಸಿವಿಗೆ ದೂಡಿ, ಬೇರೆ ದೇಶಕ್ಕೆ ಆಹಾರ ಸರಬರಾಜು ಮಾಡೋದು ದೇಶದ್ರೋಹವಲ್ಲವೇ? ಎಂದು ಪ್ರಶ್ನಿಸಿದರು.</p>



<p>ಜುಲೈ 1 ರಂದು ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡುವುದಿಲ್ಲವೇ? ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು ಛತ್ರಿಸಗಡ್ ರಾಜ್ಯವನ್ನು ಸಂಪರ್ಕಸಲಾಗಿದ್ದು ಅವರು 1.50 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡಲು ಒಪ್ಪಿದ್ದಾರೆ ಹಾಗಾಗಿ ಯೋಜನೆ ಜಾರಿಗೊಳಿಸುತ್ತೇವೆ. ಆದರೆ ಜುಲೈ 1 ರಂದು ಜಾರಿಗೆ ತರಬೇಕೆಂದರೆ ಕೇಂದ್ರ ಬಿಜೆಪಿ ಸರ್ಕಾರ ಮನಸು ಮಾಡಿ ರಾಜ್ಯದ ಜನರು ಮತ ಹಾಕದಿದ್ದರೂ ಪರವಾಗಿಲ್ಲ ಎಂದು ಅಕ್ಕಿ ಸರಬರಾಜು ಮಾಡಿದರೆ ಸಾಧ್ಯವಾಗುತ್ತದೆ ಎಂದರು.</p>



<p>ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಬೇಕಾಗುವಷ್ಟು ಅನುದಾನ‌ ನೀಡಲು ಸಿದ್ದವಿರುವುದಾಗಿ ಹೇಳಿದ ಸಚಿವರು, ಮಳೆ ಕೊರತೆಯಿಂದಾಗಿ ಮೋಡ ಬಿತ್ತನೆ ಕುರಿತಂತೆ ಕಂದಾಯ ಸಚಿವರು ಈಗಾಗಲೇ ಹೇಳಿಕೆ ನೀಡಿರುತ್ತಾರೆ ಎಂದರು.</p>



<p>ಯಾರನ್ನು ತಮ್ಮ ಆಪ್ತ ಕಾರ್ಯದರ್ಶಿ ಮಾಡಿಕೊಳ್ಳುವುದು ತಮ್ಮ ವಿವೇಚನೆ ಎಂದ ಪ್ರಿಯಾಂಕ್ ಖರ್ಗೆ ಕೆಕೆಆರ್ ಡಿಬಿಯ ವಿರುದ್ದ ನನ್ನ ಆರೋಪವಿತ್ತು. ಪ್ರಸ್ತುತ ನಡೆಯುತ್ತಿರುವ ಕೆಕೆಆರ್ ಡಿಬಿ ಅವ್ಯವಹಾರದ ತನಿಖೆಯಲ್ಲಿ ಆಪ್ತ ಕಾರ್ಯದರ್ಶಿ ತಪ್ಪಿತಸ್ಥರು ಎಂದು ಕಂಡುಬಂದರೆ ಅವರ ವಿರುದ್ದವೂ ಕ್ರಮ ಜರುಗಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದರು.</p>



<figure class="wp-block-image size-large"><img decoding="async" width="1024" height="576" src="https://peepalmedia.com/wp-content/uploads/2023/06/IMG-20230620-WA0022-1024x576.jpg" alt="" class="wp-image-22544" srcset="https://peepalmedia.com/wp-content/uploads/2023/06/IMG-20230620-WA0022-1024x576.jpg 1024w, https://peepalmedia.com/wp-content/uploads/2023/06/IMG-20230620-WA0022-300x169.jpg 300w, https://peepalmedia.com/wp-content/uploads/2023/06/IMG-20230620-WA0022-768x432.jpg 768w, https://peepalmedia.com/wp-content/uploads/2023/06/IMG-20230620-WA0022-150x84.jpg 150w, https://peepalmedia.com/wp-content/uploads/2023/06/IMG-20230620-WA0022-696x392.jpg 696w, https://peepalmedia.com/wp-content/uploads/2023/06/IMG-20230620-WA0022-1068x601.jpg 1068w, https://peepalmedia.com/wp-content/uploads/2023/06/IMG-20230620-WA0022.jpg 1280w" sizes="(max-width: 1024px) 100vw, 1024px" /></figure>



<p>ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣಪ್ರಕಾಶ ಪಾಟೀಲ, ಶಾಸಕರಾದ ಕನೀಜ್ ಫಾತೀಮಾ, ಅಲ್ಲಮಪ್ರಭು ಪಾಟೀಲ, ಬಿ.ಆರ್. ಪಾಟೀಲ, ಮಾಜಿ ಸಚಿವ ರೇವು ನಾಯಕ ಬೆಳಮಗಿ, ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಡೇವಿಡ್ ಸಿಮೆಯೋನ್, ಸುಭಾಷ ರಾಠೋಡ, ಶಿವಾನಂದ ಪಾಟೀಲ ಸೇರಿದಂತೆ ಮತ್ತಿತರಿದ್ದರು‌.</p>
]]></content:encoded>
					
		
		
			</item>
		<item>
		<title>ಅನ್ನಭಾಗ್ಯಕ್ಕೆ ಕೇಂದ್ರ ಸರ್ಕಾರ ಅಡ್ಡಗಾಲು : ಸಿದ್ದರಾಮಯ್ಯ ಕಿಡಿ</title>
		<link>https://peepalmedia.com/siddaramayya-ki%e1%b8%8di-central-government-standing-in-the-way-of-annabhagya-siddaramaiah-kidi/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 14 Jun 2023 13:09:55 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[Annabhagya]]></category>
		<category><![CDATA[bjp v/s congress]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Siddaramaiah]]></category>
		<guid isPermaLink="false">https://peepalmedia.com/?p=22388</guid>

					<description><![CDATA[ಕರ್ನಾಟಕ ಸರ್ಕಾರ ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದ್ದ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಅನುಷ್ಠಾನಕ್ಕೆ ತರುತ್ತಿರುವ ಹಂತದಲ್ಲಿ ಈಗ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕೊಡಬೇಕಿದ್ದ ಅಕ್ಕಿಗೆ ಅಡ್ಡಗಾಲು ಹಾಕಿದೆ. ಈ ಬಗ್ಗೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರ ಬಡವರಿಗೆ ಕೊಡುವ ಅಕ್ಕಿ ವಿಚಾರದಲ್ಲಿ ಬಿಜೆಪಿ ರಾಜಕೀಯ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯಕ್ಕೆ ಸಲ್ಲಬೇಕಾದ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದ ಕೇಂದ್ರ ಸರ್ಕಾರ, ಇದೀಗ ತಾರತಮ್ಯ ನಿರ್ಧಾರ ಕೈಗೊಂಡಿದೆ. ಉಚಿತ ಅಕ್ಕಿ ವಿಚಾರದಲ್ಲೂ ಕೇಂದ್ರ ಸರ್ಕಾರ ರಾಜಕೀಯ [&#8230;]]]></description>
										<content:encoded><![CDATA[
<p>ಕರ್ನಾಟಕ ಸರ್ಕಾರ ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದ್ದ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಅನುಷ್ಠಾನಕ್ಕೆ ತರುತ್ತಿರುವ ಹಂತದಲ್ಲಿ ಈಗ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕೊಡಬೇಕಿದ್ದ ಅಕ್ಕಿಗೆ ಅಡ್ಡಗಾಲು ಹಾಕಿದೆ. ಈ ಬಗ್ಗೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರ ಬಡವರಿಗೆ ಕೊಡುವ ಅಕ್ಕಿ ವಿಚಾರದಲ್ಲಿ ಬಿಜೆಪಿ ರಾಜಕೀಯ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.</p>



<p>ರಾಜ್ಯಕ್ಕೆ ಸಲ್ಲಬೇಕಾದ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದ ಕೇಂದ್ರ ಸರ್ಕಾರ, ಇದೀಗ ತಾರತಮ್ಯ ನಿರ್ಧಾರ ಕೈಗೊಂಡಿದೆ. ಉಚಿತ ಅಕ್ಕಿ ವಿಚಾರದಲ್ಲೂ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಇಂದು ನಡೆದ ತುರ್ತು ಸುದ್ದಿಗೋಷ್ಠಿಯಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಒಂದೊಂದಾಗಿ ಬಿಜೆಪಿ ಅಡ್ಡಗಾಲು ಹಾಕಲು ಮುಂದಾಗಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ.</p>



<figure class="wp-block-image size-full"><img decoding="async" width="600" height="450" src="https://peepalmedia.com/wp-content/uploads/2023/06/images-2023-06-14T183338.827.jpeg" alt="" class="wp-image-22389" srcset="https://peepalmedia.com/wp-content/uploads/2023/06/images-2023-06-14T183338.827.jpeg 600w, https://peepalmedia.com/wp-content/uploads/2023/06/images-2023-06-14T183338.827-300x225.jpeg 300w, https://peepalmedia.com/wp-content/uploads/2023/06/images-2023-06-14T183338.827-150x113.jpeg 150w" sizes="(max-width: 600px) 100vw, 600px" /></figure>



<p>ಈ ಹಿಂದೆ ಡೆಪ್ಯುಟಿ ಮ್ಯಾನೇಜರ್​ 7 ಲಕ್ಷ ಟನ್​ ಅಕ್ಕಿ ಸಂಗ್ರಹ ಇದೆ ಎಂದಿದ್ದರು. ಅಕ್ಕಿ ಸಂಗ್ರಹ ಇದ್ದರೂ ಕೇಂದ್ರ ಯಾಕೆ ಪೂರೈಕೆ ಮಾಡುತ್ತಿಲ್ಲ? ಎಂದು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿಯವರು ಬಡವರ ವಿರೋಧಿಗಳು. ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಇದನ್ನು ರಾಜ್ಯದ ಪ್ರತೀ ಪ್ರಜೆಗಳೂ ಅರ್ಥ ಮಾಡಿಕೊಳ್ಳುವ ಕಾಲ ದೂರ ಇಲ್ಲ ಎಂದು ಕಿಡಿಕಾರಿದರು.</p>



<p>ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ಗ್ಯಾರಂಟಿಯನ್ನು ಯಶಸ್ವಿಯಾಗಿ ಜಾರಿಮಾಡಿದೆ. ಜುಲೈ 1 ರಿಂದ ಬಿಪಿಎಲ್‌ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಮಂಡಳಿ ಉಪ ಪ್ರಧಾನ ವ್ಯವಸ್ಥಾಪಕರಿಗೆ 2.28 ಲಕ್ಷ ಮೆ.ಟನ್ ಅಗತ್ಯವಿದೆ ಎಂದು ಕೋರಿ ಜೂನ್‌ 9 ರಂದೇ ಪತ್ರ ಬರೆಯಲಾಗಿತ್ತು. ಇದಕ್ಕೆ ಜೂನ್‌ 12 ರಂದು ಭಾರತೀಯ ಆಹಾರ ನಿಗಮವು ಒಪ್ಪಿಗೆ ಸೂಚಿಸಿ ಕ್ವಿಂಟಾಲ್‌ ಗೆ 3400 ರೂ. ದರದಲ್ಲಿ ಅಕ್ಕಿ ಪೂರೈಕೆ ಮಾಡವುದಾಗಿ ಪತ್ರ ಬರೆದಿತ್ತು. ಆದರೆ ಈಗ ಕೇಂದ್ರ ಬಿಜೆಪಿ ಪಕ್ಷ ಇಲ್ಲದ ಸಮಸ್ಯೆ ತಂದು ಬಡವರಿಗೆ ನೀಡುವ ಅಕ್ಕಿಯ ವಿಷಯದಲ್ಲೂ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.</p>



<figure class="wp-block-image size-full"><img loading="lazy" decoding="async" width="783" height="391" src="https://peepalmedia.com/wp-content/uploads/2023/06/images-2023-06-14T183354.016.jpeg" alt="" class="wp-image-22390" srcset="https://peepalmedia.com/wp-content/uploads/2023/06/images-2023-06-14T183354.016.jpeg 783w, https://peepalmedia.com/wp-content/uploads/2023/06/images-2023-06-14T183354.016-300x150.jpeg 300w, https://peepalmedia.com/wp-content/uploads/2023/06/images-2023-06-14T183354.016-768x384.jpeg 768w, https://peepalmedia.com/wp-content/uploads/2023/06/images-2023-06-14T183354.016-150x75.jpeg 150w, https://peepalmedia.com/wp-content/uploads/2023/06/images-2023-06-14T183354.016-696x348.jpeg 696w" sizes="auto, (max-width: 783px) 100vw, 783px" /></figure>



<p>ಅಕ್ಕಿ ಬೆಳೆಯುವ ರಾಜ್ಯಗಳಾದ ಪಂಜಾಬ್ ನ ಸರ್ಕಾರವನ್ನು ಈಗಾಗಲೇ ಆಹಾರ ಸಚಿವ ಕೆ‌.ಹೆಚ್.ಮುನಿಯಪ್ಪ ಸಂಪರ್ಕಿಸಿದ್ದಾರೆ. ಪಂಜಾಬ್ ನಲ್ಲಿ ಅಷ್ಟು ಅಕ್ಕಿ ಸಂಗ್ರಹ ಇಲ್ಲದ ಹಿನ್ನೆಲೆಯಲ್ಲಿ ತೆಲಂಗಾಣ, ಆಂಧ್ರ, ಛತ್ತಿಸ್‍ಗಡ್, ಹರಿಯಾಣದವರಿಗೆ ಈಗಾಗಲೇ ಸಂಪರ್ಕ ಮಾಡಲಾಗಿದೆ. ನಾಳೆ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ತೆಲಂಗಾಣ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದಾರೆ. ಅಂತೆಯೇ ಛತ್ತೀಸ್‌ಗಢ ರಾಜ್ಯದಿಂದಲೂ ಲಭ್ಯವಿರುವ ಅಕ್ಕಿಯ ಮಾಹಿತಿ ಇಂದು ಸಂಜೆಯೊಳಗೆ ಲಭಿಸಲಿದೆ. ನಾಳೆ ಸಂಜೆಯೊಳಗೆ ಒಂದು ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.</p>



<p>ಅಕ್ಕಿಯ ಪ್ರಸ್ತಾಪಕ್ಕೆ ಜೂನ್ 12 ರಂದು ಕೇಂದ್ರ ಒಪ್ಪಿಗೆ ಸೂಚಿಸಿ, ಈಗ ಅಕ್ಕಿ ಇಲ್ಲ ಎಂಬುದು ಸ್ಪಷ್ಟವಾಗಿ ಇವರು ಬಡವರ ವಿರೋಧಿ ಎಂಬುದನ್ನು ಸಾಭೀತುಪಡಿಸಿದಂತೆ. ಕೇಂದ್ರ ಸರ್ಕಾರ ಉಚಿತವಾಗಿಯೇನೂ ಅಕ್ಕಿ ನೀಡುವುದಿಲ್ಲ ನಾವು ಹಣ ಕೊಟ್ಟೇ ಕೊಂಡುಕೊಳ್ಳುವುದು. ಇತರರಿಗೆ ಕೊಡುವ ರೀತಿಯಲ್ಲಿ ನಮಗೂ ಕೊಡುತ್ತಿದ್ದರು. ಆದರೆ ಈಗ ಕರ್ನಾಟಕ ರಾಜ್ಯ ಸರ್ಕಾರಕ್ಕೆ ನೀಡುವುದಿಲ್ಲ ಎನ್ನುವ ತೀರ್ಮಾನಕ್ಕೆ ಅವರು ಬಂದಿದ್ದಾರೆ. ಈಗಲೂ ನಾವು ಪ್ರಯತ್ನ ಮಾಡುತ್ತಿದ್ದೇವೆ. ಆದರೆ ಈ ರೀತಿ ಮಾಡಿರುವುದರಿಂದ ಇದೊಂದು ಷಡ್ಯಂತ್ರ ಎಂದೇ ಪರಿಗಣಿಸಬೇಕಾಗುತ್ತದೆ ಎಂದರು. </p>



<figure class="wp-block-embed"><div class="wp-block-embed__wrapper">
<div class="youtube-embed" data-video_id="jFUSqVTPFh8"><iframe loading="lazy" title="ಅಕ್ಕಿಪೂರೈಕೆ ಸ್ಥಗಿತಗೊಳಿಸಿದ ಕೇಂದ್ರ ಸರ್ಕಾರ, ಸಿದ್ದರಾಮಯ್ಯ ಕಿಡಿಕಿಡಿ | Central Government | Siddaramaiah |" width="696" height="392" src="https://www.youtube.com/embed/jFUSqVTPFh8?feature=oembed&#038;enablejsapi=1" frameborder="0" allow="accelerometer; autoplay; clipboard-write; encrypted-media; gyroscope; picture-in-picture; web-share" allowfullscreen></iframe></div> 
</div></figure>
]]></content:encoded>
					
		
		
			</item>
	</channel>
</rss>
